AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ

Dr Rajkumar | Bangarada Manushya: ಜನಮನ ಗೆಲ್ಲುವಲ್ಲಿಯೂ, ಬಾಕ್ಸ್​ ಆಫೀಸ್​ನಲ್ಲಿ ದಾಖಲೆ ಬರೆಯುವಲ್ಲಿಯೂ ‘ಬಂಗಾರದ ಮನುಷ್ಯ’ ಚಿತ್ರ ಮೈಲಿಗಲ್ಲು ಸ್ಥಾಪಿಸಿತ್ತು. ಈ ಚಿತ್ರ ತೆರೆಕಂಡು ಇಂದಿಗೆ (ಮಾ.31) ಐವತ್ತು ವರ್ಷ.

‘ಬಂಗಾರದ ಮನುಷ್ಯ’ ಚಿತ್ರಕ್ಕೆ 50 ವರ್ಷ; ಅಣ್ಣಾವ್ರು ನಟಿಸಿದ ಈ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ
ಬಂಗಾರದ ಮನುಷ್ಯ - ಡಾ. ರಾಜ್​ಕುಮಾರ್
TV9 Web
| Edited By: |

Updated on: Mar 31, 2022 | 10:07 AM

Share

ಕನ್ನಡ ಚಿತ್ರರಂಗಕ್ಕೆ ಡಾ. ರಾಜ್​ಕುಮಾರ್​ (Dr Rajkumar) ನೀಡಿದ ಕೊಡುಗೆ ಅಪಾರ. ಒಂದಕ್ಕಿಂತ ಒಂದು ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಅವರ ಪ್ರತಿ ಸಿನಿಮಾದಲ್ಲಿಯೂ ಸಮಾಜಕ್ಕೊಂದು ಉತ್ತಮ ಸಂದೇಶ ಇದ್ದೇ ಇರುತ್ತಿತ್ತು. ಆ ಕಾರಣಕ್ಕಾಗಿ ಡಾ. ರಾಜ್​ಕುಮಾರ್​ ಎಂದರೆ ಕನ್ನಡಿಗರ ಪಾಲಿಗೆ ಆದರ್ಶ ವ್ಯಕ್ತಿ ಆಗಿದ್ದರು. ಪಾತ್ರಗಳ ಆಯ್ಕೆಯಲ್ಲಿ ಅವರು ತೋರುತ್ತಿದ್ದ ಕಾಳಜಿ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ನೋಡುಗರನ್ನು ದಾರಿ ತಪ್ಪಿಸುವಂತಹ ಪಾತ್ರವನ್ನು ಅವರು ಎಂದಿಗೂ ಆಯ್ಕೆ ಮಾಡಿಕೊಳ್ಳಲಿಲ್ಲ. ಡಾ. ರಾಜ್​ ನಟಿಸಿದ ಪಾತ್ರಗಳನ್ನೇ ಅನುಸರಿಸಿದರೂ ಸಾಕು, ಬಾಳಿಗೊಂದು ಅತ್ಯುತ್ತಮ ಮಾರ್ಗದರ್ಶನ ಸಿಗುತ್ತದೆ ಎಂಬುದರಲ್ಲಿ ಅನುಮಾನ ಬೇಡ. ಅಷ್ಟು ಮೌಲ್ಯಯುತವಾದ ಸಿನಿಮಾಗಳನ್ನೇ (Dr Rajkumar Movie) ಅವರು ಈ ನಾಡಿಗೆ ಕೊಡುಗೆಯಾಗಿ ನೀಡಿದರು. ಆ ಪೈಕಿ ‘ಬಂಗಾರದ ಮನುಷ್ಯ’ ಸಿನಿಮಾವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಭಾರತೀಯ ಚಿತ್ರರಂಗದ ಬೆಸ್ಟ್​ ಸಿನಿಮಾಗಳನ್ನು ಪಟ್ಟಿ ಮಾಡುವಾಗ ‘ಬಂಗಾರದ ಮನುಷ್ಯ’ (Bangarada Manushya) ಚಿತ್ರವನ್ನು ಬಿಡಲು ಸಾಧ್ಯವಿಲ್ಲ. ಈ ಸಿನಿಮಾ ತೆರೆಕಂಡು ಇಂದಿಗೆ (ಮಾ.31) 50 ವರ್ಷ ಪೂರೈಸಿದೆ. ಅರ್ಧ ಶತಮಾನ ಕಳೆದರೂ ಕೂಡ ಈ ಚಿತ್ರದ ಚಾರ್ಮ್​ ಕಡಿಮೆ ಆಗಿಲ್ಲ. ಇಂದಿಗೂ ಕೂಡ ಸಿನಿಪ್ರಿಯರ ಸಂವಾದದಲ್ಲಿ ‘ಬಂಗಾರದ ಮನುಷ್ಯ’ ಚಿತ್ರ ಪ್ರಸ್ತುತವಾಗಿ ಉಳಿದುಕೊಂಡಿದೆ.

‘ಬಂಗಾರದ ಮನುಷ್ಯ’ ಸಿನಿಮಾವನ್ನು ನಿರ್ದೇಶನ ಮಾಡಿದವರು ಎಸ್​. ಸಿದ್ದಲಿಂಗಯ್ಯ. ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗವನ್ನು ಸಿದ್ದಲಿಂಗಯ್ಯ ಅವರು ಮತ್ತೊಂದು ಎತ್ತರಕ್ಕೆ ಕೊಂಡೊಯ್ದರು. ಟಿ.ಕೆ. ರಾಮ ರಾವ್​ ಬರೆದ ‘ಬಂಗಾರದ ಮನುಷ್ಯ’ ಕಾದಂಬರಿ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ರಾಜ್​ಕುಮಾರ್​, ಭಾರತಿ, ಬಾಲಕೃಷ್ಣ, ಶ್ರೀನಾಥ್​, ಲೋಕನಾಥ್​, ದ್ವಾರಕೀಶ್​, ವಜ್ರಮುನಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದರು. ಹತ್ತು ಹಲವು ಕಾರಣಗಳಿಂದಾಗಿ ‘ಬಂಗಾರದ ಮನುಷ್ಯ’ ಚಿತ್ರ ಇಂದಿಗೂ ವಿಶೇಷ ಸ್ಥಾನ ಉಳಿಸಿಕೊಂಡಿದೆ.

ಈ ಸಿನಿಮಾ ನೋಡಿದ ಅನೇಕ ಯುವಕರು ನಗರವನ್ನು ಬಿಟ್ಟು ತಮ್ಮ ಹಳ್ಳಿಗಳಿಗೆ ತೆರಳಿ ಪುನಃ ಕೃಷಿಯಲ್ಲಿ ತೊಡಗಿಕೊಂಡರು. ಈಗಲೂ ಕೂಡ ಈ ಚಿತ್ರದ ‘ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ..’ ಹಾಡನ್ನು ಕೇಳಿದರೆ ಎಂಥವರಿಗಾದರೂ ಸ್ಫೂರ್ತಿ ಉಕ್ಕುತ್ತದೆ. ಮನದಲ್ಲಿ ಜೀವನೋತ್ಸಾವ ತುಂಬುತ್ತದೆ. ಕನ್ನಡ ಚಿತ್ರರಂಗ ಇರುವವರೆಗೂ ಈ ಹಾಡಿನ ತೂಕ ಕಡಿಮೆ ಆಗುವುದಿಲ್ಲ. ‘ಬಂಗಾರದ ಮನುಷ್ಯ’ ಚಿತ್ರಕ್ಕೆ ಸಂಗೀತ ನೀಡಿದವರು ಜಿ.ಕೆ. ವೆಂಕಟೇಶ್​. ಚಿತ್ರದ ಎಲ್ಲ ಹಾಡುಗಳಿಗೆ ಪಿ.ಬಿ. ಶ್ರೀನಿವಾಸ್​, ಪಿ. ಸುಶೀಲ ಧ್ವನಿ ನೀಡಿದ್ದರು. ‘ನಗು ನಗುತಾ ನಲಿ..’, ‘ಬಾಳ ಬಂಗಾರ ನೀನು..’, ‘ಆಹಾ ಮೈಸೂರು ಮಲ್ಲಿಗೆ..’, ‘ಆಗದು ಎಂದು ಕೈ ಕಟ್ಟಿ ಕುಳಿತರೆ..’ ಗೀತೆಗಳು ಎವರ್​ಗ್ರೀನ್​ ಆಗಿ ಉಳಿದುಕೊಂಡಿವೆ.

ಕನ್ನಡ ಚಿತ್ರರಂಗದಲ್ಲಿ ‘ಬಂಗಾರದ ಮನುಷ್ಯ’ ಸಿನಿಮಾ ಮಾಡಿದ ದಾಖಲೆಗಳು ಒಂದೆರಡಲ್ಲ.

  • ಜನಮನ ಗೆಲ್ಲುವಲ್ಲಿಯೂ, ಬಾಕ್ಸ್​ ಆಫೀಸ್​ನಲ್ಲಿ ದಾಖಲೆ ಬರೆಯುವಲ್ಲಿಯೂ ಈ ಚಿತ್ರ ಮೈಲಿಗಲ್ಲು ಸ್ಥಾಪಿಸಿತು.
  • ಆ ಕಾಲಕ್ಕೆ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ‘ಬಂಗಾರದ ಮನುಷ್ಯ’ ಪಡೆದುಕೊಂಡಿತು.
  • ಬೆಂಗಳೂರಿನ ‘ಸ್ಟೇಟ್ಸ್​’ ಚಿತ್ರಮಂದಿರದಲ್ಲಿ ಸತತ ಎರಡು ವರ್ಷಗಳ ಕಾಲ ಪ್ರದರ್ಶನ ಕಂಡಿದ್ದು ಅಮೋಘ ಸಾಧನೆಯೇ ಸರಿ.
  • ಮೈಸೂರಿನ ‘ಚಾಮುಂಡೇಶ್ವರಿ’ ಚಿತ್ರಮಂದಿರದಲ್ಲಿ 60 ವಾರಗಳ ಕಾಲ ಪ್ರದರ್ಶನ ಕಂಡಿತು.
  • ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾ ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಪ್ರದರ್ಶನವಾಯಿತು. ಜನರು ಮುಗಿಬಿದ್ದು ಈ ಸಿನಿಮಾ ವೀಕ್ಷಿಸಿದರು.
  • 1988ರಲ್ಲಿ ಮರು ಬಿಡುಗಡೆ ಆದಾಗಲೂ ಈ ಚಿತ್ರ ಬರೋಬ್ಬರಿ 25 ವಾರಗಳ ಕಾಲ ಪ್ರದರ್ಶನ ಕಂಡಿತು.

ಇಂಥ ಹಲವಾರು ದಾಖಲೆಗಳನ್ನು ಬರೆದ ‘ಬಂಗಾರದ ಮನುಷ್ಯ’ ಸಿನಿಮಾ ತೆರೆಕಂಡು ಇಂದಿಗೆ (ಮಾ.31) ಸರಿಯಾಗಿ 50 ವರ್ಷ ಪೂರೈಸಿದೆ. ಈಗಲೂ ಕೂಡ ಈ ಚಿತ್ರ ಟಿವಿಯಲ್ಲಿ ಪ್ರಸಾರವಾದರೆ ಗಮನವಿಟ್ಟು ನೋಡುವ ಪ್ರೇಕ್ಷಕರಿದ್ದಾರೆ. 50 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಈ ಚಿತ್ರದ ಕುರಿತ ತಮ್ಮ ಅನಿಸಿಕೆ ಮತ್ತು ನೆನಪುಗಳನ್ನು ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

ರಾಜ್​ಕುಮಾರ್​ ಗೌರವ ಡಾಕ್ಟರೇಟ್​ ಪಡೆದು 46 ವರ್ಷ ಪೂರ್ಣ; ಕೋಟ್ಯಂತರ ಜನರಿಗೆ ವರನಟ ಸ್ಫೂರ್ತಿ

3ನೇ ಕ್ಲಾಸ್​ ಓದಿದ ಡಾ. ರಾಜ್​ಕುಮಾರ್​ ಇಂಗ್ಲಿಷ್​ ಕಲಿತಿದ್ದು ಹೇಗೆ? ಇಲ್ಲಿದೆ ಅದರ ಸೀಕ್ರೆಟ್​

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?