AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಕೊನೆ ಆಸೆ ಏನಾಗಿತ್ತು? ಅದು ಈಡೇರಲೇ ಇಲ್ಲ

ರಾಜ್​ಕುಮಾರ್ ಹುಟ್ಟಿದ್ದು ಗಾಜನೂರಿನಲ್ಲಿ. ಅವರು ಹಳ್ಳಿಯ ಹಿನ್ನೆಲೆಯಿಂದ ಬಂದವರು. ಅವರು ಸಿನಿಮಾಗಳಿಗೂ ಮೊದಲು ನಾಟಕಗಳನ್ನು ಮಾಡಿಕೊಂಡಿದ್ದರು. ಬಿಡುವು ಸಿಕ್ಕಾಗ ಅವರು ಕೃಷಿ ಕೆಲಸ ಮಾಡುತ್ತಿದ್ದರು ಹೀಗಾಗಿ, ಕೃಷಿಕನಾಗಬೇಕು ಎಂಬ ಕನಸು ಅವರಲ್ಲಿ ಬಹುವಾಗಿ ಇತ್ತು.

ರಾಜ್​ಕುಮಾರ್ ಕೊನೆ ಆಸೆ ಏನಾಗಿತ್ತು? ಅದು ಈಡೇರಲೇ ಇಲ್ಲ
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Aug 22, 2024 | 10:07 AM

Share

ವರನಟ ಡಾ.ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದರಲ್ಲಿ ಒಬ್ಬರು. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಗಮನ ಸೆಳೆದಿದ್ದರು. ಅವರು ಅನೇಕರಿಗೆ ಮಾದರಿ. ರಾಜ್​ಕುಮಾರ್ ಅವರು ಇತರ ಹೀರೋಗಳಿಗಿಂತ ಭಿನ್ನವಾಗಿ ಕಾಣಿಸಿಕೊಂಡಿದ್ದರು. ರಾಜ್​ಕುಮಾರ್ ಅವರ ಕೊನೆಯ ಒಂದು ಆಸೆ ಇತ್ತು. ಆದರೆ, ಆ ಆಸೆ ಕೊನೆಗೂ ಈಡೇರಲೇ ಇಲ್ಲ. ಅವರು ಈ ಬಗ್ಗೆ ಹೇಳಿಕೊಂಡಿದ್ದರು.

ರಾಜ್​ಕುಮಾರ್ ಅವರು ಗಾಜನೂರಿನವರು. ಹಳ್ಳಿಯ ಹಿನ್ನೆಲೆಯಿಂದ ಬಂದವರು ಅವರು. ಅವರು ಸಿನಿಮಾಗಳಿಗೂ ಮೊದಲು ನಾಟಕಗಳನ್ನು ಮಾಡಿಕೊಂಡಿದ್ದರು. ಬಿಡುವು ಸಿಕ್ಕಾಗ ಅವರು ಕೃಷಿ ಕೆಲಸ ಮಾಡುತ್ತಿದ್ದರು. ದನ ಕಾಯುತ್ತಿದ್ದರು. ಕೃಷಿ ಮಾಡಬೇಕು ಎನ್ನುವ ಆಸೆ ಅವರಿಗೆ ಇತ್ತು. ಆದರೆ, ಸಿನಿಮಾ ರಂಗದಲ್ಲಿ ತೊಡಗಿಕೊಂಡು ಬಿಡುವು ಸಿಗದ ಕಾರಣ ಅವರಿಗೆ ಕೃಷಿ ಮಾಡಲು ಸಾಧ್ಯವಾಗಲೇ ಇಲ್ಲ.

ವೇದಿಕೆ ಮೇಲೆ ರಾಜ್​ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದರು. ‘ಸಣ್ಣವನಿದ್ದಾಗ ಮೂರು ನಾಲ್ಕು ಮೈಲಿ ಕಾಡಿಗೆ ಹೋಗುತ್ತಾ ಇದ್ದೆ. ಕುರಿ ಮರಿ, ಹಸುಗಳನ್ನು ಮೇಯಿಸುತ್ತಿದ್ದೆ. ಈ ರೀತಿ ಕಾಲ ಕಳೆದವನಾದ್ದಾರಿಂದ ನನಗೆ ನನ್ನ ವೃತ್ತಿ ಬಿಟ್ಟು ತೃಪ್ತಿ ಕೊಡೋ ಕೆಲಸ ಎಂದರೆ ಅದು ಕೃಷಿ’ ಎಂದಿದ್ದರು ರಾಜ್​ಕುಮಾರ್.

‘ನನ್ನ ಕಡೆಯ ಆಸೆ ಭೂಮಿಯಲ್ಲಿ ಕೆಲಸ ಮಾಡಬೇಕು, ಕೃಷಿಕನಾಗಬೇಕು ಎಂಬು. ಸಣ್ಣ ವಯಸ್ಸಿನಿಂದ ಈ ಆಸೆ ನನ್ನಲ್ಲಿ ಬೇರೂರಿತ್ತು’ ಎಂದಿದ್ದರು ರಾಜ್​ಕುಮಾರ್. ಆದರೆ, ರಾಜ್​ಕುಮಾರ್ ಅವರಿಗೆ ಸೃಷ್ಟಿ ಆದ ಬೇಡಿಕೆ ತುಂಬಾನೇ ದೊಡ್ಡದಿತ್ತು. ಈ ಕಾರಣದಿಂದ ಅವರಿಗೆ ಬೇರೆ ಕೆಲಸಗಳನ್ನು ಮಾಡಲು ಅವಕಾಶವೇ ಸಿಗಲಿಲ್ಲ. ಅವರು ಕುಟುಂಬದ ಜೊತೆ ಸಮಯ ಕೊಡೋಕೂ ಸಾಧ್ಯವಾಗದ ಸ್ಥಿತಿ ಇತ್ತು. ರಾಜ್​ಕುಮಾರ್ ನಟನೆಯ ಮೂರ್ನಾಲ್ಕು ಚಿತ್ರಗಳು ಪ್ರತಿ ವರ್ಷ ರಿಲೀಸ್ ಆಗುತ್ತಿದ್ದವರು. ಅವರ ಪತ್ನಿ ಪಾರ್ವತಮ್ಮ ಅವರು ರಾಜ್​ಕುಮಾರ್ ಅವರ ಬೆಂಬಲಕ್ಕೆ ನಿಂತಿದ್ದರು.

ಇದನ್ನೂ ಓದಿ: ಕೀರ್ತಿ ಸುರೇಶ್ ತಾಯಿ ರಾಜ್​ಕುಮಾರ್ ಜೊತೆ ನಟಿಸಿದ್ದರು ಅನ್ನೋ ವಿಚಾರ ಗೊತ್ತೇ?

1942ರಲ್ಲಿ ರಿಲೀಸ್ ಆದ ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ  ಬಾಲ ಕಲಾವಿದನಾಗಿ ರಾಜ್​ಕುಮಾರ್ ಅವರು ನಟಿಸಿದ್ದರು. 1954ರಲ್ಲಿ ರಿಲೀಸ್ ಆದ ‘ಬೇಡರ ಕಣ್ಣಪ್ಪ’ ಸಿನಿಮಾದಲ್ಲಿ ಮೊಟ್ಟ ಮೊದಲ ಬಾರಿಗೆ ಅವರು ದೊಡ್ಡ ಪರದೆಯಲ್ಲಿ ಕಾಣಿಸಿಕೊಂಡರು. ಅವರು ನಟಿಸಿದ ಕೊನೆಯ ಸಿನಿಮಾ ‘ಶಬ್ದವೇದಿ’.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:04 am, Thu, 22 August 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ