Dr. Rajkumar: ಗೂಗಲ್​ನಲ್ಲಿ ಡಾ. ರಾಜ್​ಕುಮಾರ್​ ಬಗ್ಗೆ ತಪ್ಪು ಮಾಹಿತಿ; ಪಾಠ ಕಲಿಸಲು ಈಗ ಕನ್ನಡಿಗರು ಮಾಡಬೇಕಿರೋದು ಏನು?

Vikram Vedha: ರಿಷಬ್​ ಶೆಟ್ಟಿ ಅವರ ಮಾತಿಗೆ ಸ್ಪಂದಿಸಿರುವ ಅನೇಕರು ರಿಪೋರ್ಟ್​ ಮಾಡಿದ್ದಾರೆ. ‘ನಮ್ಮ ಗಮನಕ್ಕೆ ತಂದಿದ್ದಕ್ಕೆ ಧನ್ಯವಾದಗಳು. ರಿಪೋರ್ಟ್​ ಮಾಡಿದ್ದೇವೆ’ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ.

Dr. Rajkumar: ಗೂಗಲ್​ನಲ್ಲಿ ಡಾ. ರಾಜ್​ಕುಮಾರ್​ ಬಗ್ಗೆ ತಪ್ಪು ಮಾಹಿತಿ; ಪಾಠ ಕಲಿಸಲು ಈಗ ಕನ್ನಡಿಗರು ಮಾಡಬೇಕಿರೋದು ಏನು?
ಗೂಗಲ್​ನಲ್ಲಿ ಅಣ್ಣಾವ್ರ ಬಗ್ಗೆ ತಪ್ಪು ಮಾಹಿತಿ
Follow us
| Updated By: Digi Tech Desk

Updated on:Jun 22, 2021 | 10:09 AM

ಕನ್ನಡ ಭಾಷೆ, ಕನ್ನಡದ ಧ್ವಜ ಸೇರಿದಂತೆ ಅನೇಕ ವಿಚಾರಗಳಲ್ಲಿ ಪರಭಾಷಿಕರು ಕಿರಿಕ್​ ಮಾಡುತ್ತಲೇ ಇದ್ದಾರೆ. ಇತ್ತೀಚೆಗೆ ಆನ್​ಲೈನ್​ನಲ್ಲಿ ಕೆಲವು ಅಚಾತುರ್ಯಗಳು ನಡೆಯುತ್ತಿವೆ. ಕೆಲವೇ ದಿನಗಳ ಹಿಂದೆ ಕನ್ನಡವನ್ನು ಭಾರತದ ಅತಿ ಕೆಟ್ಟ ಭಾಷೆ ಎಂಬಂತೆ ಗೂಗಲ್​ ಸರ್ಚ್​ ರಿಸಲ್ಟ್​ ತೋರಿಸುತ್ತಿತ್ತು. ಈಗ ವರನಟ ಡಾ. ರಾಜ್​ಕುಮಾರ್​ ಅವರ ವಿಚಾರದಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಈ ಬಗ್ಗೆ ಎಚ್ಚರಿಕೆ ನೀಡಲು ಅಭಿಮಾನಿಗಳು ಮತ್ತು ಚಿತ್ರರಂಗದವರು ಪ್ರಯತ್ನಿಸುತ್ತಿದ್ದಾರೆ.

ತಮಿಳಿನ ‘ವಿಕ್ರಂ ವೇದ’ ಸಿನಿಮಾದ ಪಾತ್ರವರ್ಗದ (Vikram Vedha Cast) ಬಗ್ಗೆ ಇಂಗ್ಲಿಷ್​ನಲ್ಲಿ ಸರ್ಚ್​ ಮಾಡಿದರೆ ಅದರಲ್ಲಿ ಅಣ್ಣಾವ್ರ ಹೆಸರು ಕಾಣಿಸಿಕೊಳ್ಳುತ್ತಿದೆ. ಈ ಸಿನಿಮಾದಲ್ಲಿ ರಾಜ್​ಕುಮಾರ್​ ಅವರು ಹಾಫ್​ ಬಾಯ್ಲ್​ ಎಂಬ ಪಾತ್ರ ಮಾಡಿದ್ದಾರೆ ಎಂದು ತೋರಿಸುತ್ತಿದೆ. ಇದು ಕನ್ನಡಿಗರ ಅಸಮಾಧಾನಕ್ಕೆ ಕಾರಣ ಆಗಿದೆ.

ಈ ಬಗ್ಗೆ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಧ್ವನಿ ಎತ್ತಿದ್ದಾರೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಇದರ ಸ್ಕ್ರೀನ್ ಶಾಟ್​ ಶೇರ್​ ಮಾಡಿಕೊಂಡು, ಈ ಬಗ್ಗೆ ಎಲ್ಲರೂ ರಿಪೋರ್ಟ್​ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ. ‘ಎಲ್ಲರಲ್ಲೂ ಒಂದು ಮನವಿ. ವಿಕ್ರಂ ವೇದ ತಮಿಳು ಚಿತ್ರದ ಗೂಗಲ್ ಪುಟದಲ್ಲಿ ನಮ್ಮ ಡಾ. ರಾಜ್​ಕುಮಾರ್ ಅವರ ಫೋಟೋ ಬೇರೆ ಹೆಸರಿನಲ್ಲಿ (half boil) ಅಂತ ನಮೂದಿಸಲಾಗಿದೆ. ದಯಮಾಡಿ ಅದನ್ನು ಗೂಗಲ್​ಗೆ ರಿಪೋರ್ಟ್​ ಮಾಡಿ. ತಪ್ಪು ಸರಿ ಹೋಗಲಿ’ ಎಂದು ರಿಷಬ್​ ಟ್ವೀಟ್​ ಮಾಡಿದ್ದಾರೆ.

ರಿಷಬ್​ ಅವರ ಮಾತಿಗೆ ಸ್ಪಂದಿಸಿರುವ ಅನೇಕರು ರಿಪೋರ್ಟ್​ ಮಾಡಿದ್ದಾರೆ. ‘ನಮ್ಮ ಗಮನಕ್ಕೆ ತಂದಿದ್ದಕ್ಕೆ ಧನ್ಯವಾದಗಳು. ರಿಪೋರ್ಟ್​ ಮಾಡಿದ್ದೇವೆ’ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಅನೇಕರು ತಾವು ರಿಪೋರ್ಟ್​ ಮಾಡಿದ ಸ್ಕ್ರೀನ್​ ಶಾಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

2017ರಲ್ಲಿ ತೆರೆಕಂಡ ತಮಿಳಿನ ‘ವಿಕ್ರಂ ವೇದ’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಮುಖ್ಯ ಪಾತ್ರದಲ್ಲಿ ವಿಜಯ್​ ಸೇತುಪತಿ ಮತ್ತು ಆರ್​. ಮಾಧವನ್ ನಟಿಸಿದ್ದರು. ಕನ್ನಡದ ಕಲಾವಿದರಾದ ಅಚ್ಯುತ್​ ಕುಮಾರ್​ ಮತ್ತು ಶ್ರದ್ಧಾ ಶ್ರೀನಾಥ್ ಕೂಡ ಅಭಿನಯಿಸಿದ್ದರು.

ಇದನ್ನೂ ಓದಿ:

Kannada Language: ಕನ್ನಡಕ್ಕೆ ಅವಮಾನ; ಸಿಡಿದೆದ್ದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು

ಕನ್ನಡಕ್ಕೆ ಅನ್ಯಾಯ ಆಗುತ್ತಿರುವ ಬಗ್ಗೆ ಸದನದಲ್ಲಿ ಮಾತನಾಡುವವರೇ ಇಲ್ಲವಾಗಿದ್ದಾರೆ: ವಾಟಾಳ್ ನಾಗರಾಜ್

Published On - 9:56 am, Tue, 22 June 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್