AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ಡಾ. ರಾಜ್‌ಕುಮಾರ್ ಅವರ 20ನೇ ಪುಣ್ಯಸ್ಮರಣೆಯನ್ನು ಏಪ್ರಿಲ್ 12ರಂದು ಆಚರಿಸಲಾಗುತ್ತಿದೆ. ಗಾಜನೂರಿನಲ್ಲಿ ಜನಿಸಿದ ಅವರು ತಮ್ಮ ಕೃಷಿ ಹಿನ್ನೆಲೆ ಮತ್ತು ಹಸಿರಿನ ಮೇಲಿನ ಪ್ರೀತಿಗೆ ಹೆಸರುವಾಸಿಯಾಗಿದ್ದರು. 'ಬೇಡರ ಕಣ್ಣಪ್ಪ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ಕುಮಾರ್, ತಮ್ಮ ತಂದೆ-ತಾಯಿಯ ತ್ಯಾಗ ಮತ್ತು ಪ್ರೀತಿಯನ್ನು ಸದಾ ಸ್ಮರಿಸುತ್ತಿದ್ದರು.

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 11, 2026 | 7:39 AM

Share

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು.

ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು ತುಂಬಾನೇ ಇಷ್ಟಪಡುತ್ತಿದ್ದರು. ಗುಡ್ಡ ಬೆಟ್ಟಗಳು ಎಂದರೆ ಅವರಿಗೆ ಇಷ್ಟ. ಗಾಜನೂರು ಈ ಎಲ್ಲಾ ಅಂಶಗಳನ್ನು ಹೊಂದಿದ್ದರಿಂದ ಅದರ ಮೇಲೆ ಅವರಿಗೆ ಅಪಾರ ಮಮತೆ ಇತ್ತು.

‘ಬಂಗಲೆ ನೋಡಿದಾಗ ಆಗದ ಆನಂದ ಈ ಪುಟ್ಟ ಮನೆ ಕಂಡಾಗ ಆಗುತ್ತದೆ’ ಎಂದು ರಾಜ್​​ಕುಮಾರ್ ಹೇಳಿದ್ದರು. ರಾಜ್​​ಕುಮಾರ್ ತಂದೆಯೂ ನಾಟಕಾಭ್ಯಸ ನಡೆಸುತ್ತಿದ್ದರು. ‘ತಂದೆ-ತಾಯಿ ಇಬ್ಬರೂ ನಮ್ಮನ್ನು ಉತ್ತಮವಾಗಿ ಸಾಕಿದ್ದಾರೆ. ಯಾರಿಗೂ ತೋರದ ಪ್ರಿತಿಯನ್ನು ನಮಗೆ ತೋರಿಸುತ್ತಿದ್ದರು. ಅವರು ಹಸಿವಿದ್ದುಕೊಂಡು ನಮಗೆ ಊಟ ಹಾಕುತ್ತಿದ್ದರು’ ಎಂದು ರಾಜ್​​ಕುಮಾರ್ ಅವರು ವಿವರಿಸಿದ್ದರು.

ಇದನ್ನೂ ಓದಿ: ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ

ರಾಜ್​​ಕುಮಾರ್ ಅವರು ‘ಬೇಡರಕಣ್ಣಪ್ಪ’ ಸಿನಿಮಾ 1954ರಲ್ಲಿ ರಿಲೀಸ್ ಆಯಿತು. ಮುತ್ತುರಾಜ್ ಅವರು ಈ ಸಿನಿಮಾ ಮೂಲಕ ರಾಜ್​ಕುಮಾರ್ ಆಗಿ ಬದಲಾದರು. ಆ ಬಳಿಕ ರಾಜ್​​ಕುಮಾರ್ ಅವರು ಹಿಂದಿರುಗಿ ನೋಡಲೇ ಇಲ್ಲ. ರಾಜ್​​ಕುಮಾರ್ ಅವರು ಕೊನೆಯವರೆಗೂ ಸಿನಿಮಾ ಮಾಡುತ್ತಿದ್ದರು. ಈ ಚಿತ್ರಕ್ಕೆ ಪಂಡರೀಬಾಯಿ ನಾಯಕಿ ಆಗಿದ್ದರು. ಹಲವು ಹಾಡುಗಳನ್ನು ರಾಜ್​​ಕುಮಾರ್ ಹಾಡಿದ್ದರು ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್