AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?

ಡಾ. ರಾಜ್‌ಕುಮಾರ್ ಅವರ 20ನೇ ಪುಣ್ಯಸ್ಮರಣೆಯನ್ನು ಏಪ್ರಿಲ್ 12ರಂದು ಆಚರಿಸಲಾಗುತ್ತಿದೆ. ಗಾಜನೂರಿನಲ್ಲಿ ಜನಿಸಿದ ಅವರು ತಮ್ಮ ಕೃಷಿ ಹಿನ್ನೆಲೆ ಮತ್ತು ಹಸಿರಿನ ಮೇಲಿನ ಪ್ರೀತಿಗೆ ಹೆಸರುವಾಸಿಯಾಗಿದ್ದರು. 'ಬೇಡರ ಕಣ್ಣಪ್ಪ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಾಜ್‌ಕುಮಾರ್, ತಮ್ಮ ತಂದೆ-ತಾಯಿಯ ತ್ಯಾಗ ಮತ್ತು ಪ್ರೀತಿಯನ್ನು ಸದಾ ಸ್ಮರಿಸುತ್ತಿದ್ದರು.

ಹುಟ್ಟಿದ ಊರಿನ ಮೇಲೆ ರಾಜ್​​ಕುಮಾರ್​​ಗೆ ಇತ್ತು ಅಪಾರ ಮಮತೆ; ಕಾರಣ ಏನು?
ರಾಜ್​ಕುಮಾರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 11, 2026 | 7:39 AM

Share

ರಾಜ್​​ಕುಮಾರ್ ಅವರ ಪುಣ್ಯಸ್ಮರಣೆ ಏಪ್ರಿಲ್ 12ರಂದು ನಡೆಯಲಿದೆ. ಈ ಸಂದರ್ಭದಂದು ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅವರು ಇಲ್ಲದೆ ಬರೋಬ್ಬರಿ 20 ವರ್ಷಗಳು ಕಳೆದಿವೆ. ಏಪ್ರಿಲ್ 12ರ , 2006ರಲ್ಲಿ ರಾಜ್​​ಕುಮಾರ್ ಅವರು ಅನಾರೋಗ್ಯದಿಂದ ಮೃತಪಟ್ಟರು. ರಾಜ್​ಕುಮಾರ್ ಅವರು ಹುಟ್ಟಿದ್ದು ಗಾಜನೂರಿನಲ್ಲಿ. ಆ ಊರಿನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು. ಇದನ್ನು ಅನೇಕ ಬಾರಿ ಅವರು ಹಂಚಿಕೊಂಡಿದ್ದರು.

ರಾಜ್​​ಕುಮಾರ್ ಕೃಷಿ ಹಿನ್ನೆಲೆ ಕುಟುಂಬದಿಂದ ಬಂದವರು. ಗಾಜನೂರಿನಲ್ಲಿ ಸಣ್ಣ ಮನೆ ಹೊಂದಿದ್ದ ಅವರು ಅಲ್ಲಿಯೇ ವಾಸಿಸಲು ಬಯಸುತ್ತಿದ್ದರು. ಹಸಿರನ್ನು ತುಂಬಾನೇ ಇಷ್ಟಪಡುತ್ತಿದ್ದರು. ಗುಡ್ಡ ಬೆಟ್ಟಗಳು ಎಂದರೆ ಅವರಿಗೆ ಇಷ್ಟ. ಗಾಜನೂರು ಈ ಎಲ್ಲಾ ಅಂಶಗಳನ್ನು ಹೊಂದಿದ್ದರಿಂದ ಅದರ ಮೇಲೆ ಅವರಿಗೆ ಅಪಾರ ಮಮತೆ ಇತ್ತು.

‘ಬಂಗಲೆ ನೋಡಿದಾಗ ಆಗದ ಆನಂದ ಈ ಪುಟ್ಟ ಮನೆ ಕಂಡಾಗ ಆಗುತ್ತದೆ’ ಎಂದು ರಾಜ್​​ಕುಮಾರ್ ಹೇಳಿದ್ದರು. ರಾಜ್​​ಕುಮಾರ್ ತಂದೆಯೂ ನಾಟಕಾಭ್ಯಸ ನಡೆಸುತ್ತಿದ್ದರು. ‘ತಂದೆ-ತಾಯಿ ಇಬ್ಬರೂ ನಮ್ಮನ್ನು ಉತ್ತಮವಾಗಿ ಸಾಕಿದ್ದಾರೆ. ಯಾರಿಗೂ ತೋರದ ಪ್ರಿತಿಯನ್ನು ನಮಗೆ ತೋರಿಸುತ್ತಿದ್ದರು. ಅವರು ಹಸಿವಿದ್ದುಕೊಂಡು ನಮಗೆ ಊಟ ಹಾಕುತ್ತಿದ್ದರು’ ಎಂದು ರಾಜ್​​ಕುಮಾರ್ ಅವರು ವಿವರಿಸಿದ್ದರು.

ಇದನ್ನೂ ಓದಿ: ರಾಜ್​​ಕುಮಾರ್ ಹಾಗೂ ಪಾರ್ವತಮ್ಮಗೆ ಇಷ್ಟ ಆಗಿತ್ತು ಆ ಒಂದು ಸಿನಿಮಾ

ರಾಜ್​​ಕುಮಾರ್ ಅವರು ‘ಬೇಡರಕಣ್ಣಪ್ಪ’ ಸಿನಿಮಾ 1954ರಲ್ಲಿ ರಿಲೀಸ್ ಆಯಿತು. ಮುತ್ತುರಾಜ್ ಅವರು ಈ ಸಿನಿಮಾ ಮೂಲಕ ರಾಜ್​ಕುಮಾರ್ ಆಗಿ ಬದಲಾದರು. ಆ ಬಳಿಕ ರಾಜ್​​ಕುಮಾರ್ ಅವರು ಹಿಂದಿರುಗಿ ನೋಡಲೇ ಇಲ್ಲ. ರಾಜ್​​ಕುಮಾರ್ ಅವರು ಕೊನೆಯವರೆಗೂ ಸಿನಿಮಾ ಮಾಡುತ್ತಿದ್ದರು. ಈ ಚಿತ್ರಕ್ಕೆ ಪಂಡರೀಬಾಯಿ ನಾಯಕಿ ಆಗಿದ್ದರು. ಹಲವು ಹಾಡುಗಳನ್ನು ರಾಜ್​​ಕುಮಾರ್ ಹಾಡಿದ್ದರು ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು