AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು

ಚಿತ್ರರಂಗದ ಮೇರುನಟ ಡಾ. ರಾಜ್‌ಕುಮಾರ್ ಅವರ ಅದಮ್ಯ ವಿನಯ ಗುಣವನ್ನು ಉಪೇಂದ್ರ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಮಸ್ಕರಿಸಿದಾಗ, ಅದು ತನಗೆ ಸಲ್ಲುವ ಗೌರವವಲ್ಲ, ತನ್ನೊಳಗೆ ಇರುವ ಕಲಾ ದೇವಿಗೆ ಎಂದು ರಾಜ್‌ಕುಮಾರ್ ಹೇಳುತ್ತಿದ್ದರಂತೆ. ಈ ಘಟನೆ ಅವರ ಅಹಂಕಾರ ರಹಿತ ವ್ಯಕ್ತಿತ್ವಕ್ಕೆ ಸಾಕ್ಷಿ.

ಯಾರಾದರೂ ನಮಿಸಿದರೆ ರಾಜ್​​ಕುಮಾರ್ ಏನು ಹೇಳುತ್ತಿದ್ದರು? ರಜನಿ ಕೂಡ ಅಚ್ಚರಿಪಟ್ಟರು
ರಾಜ್-ರಜನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 12, 2026 | 7:56 AM

Share

ರಾಜ್​​ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. ಅವರಿಗೆ ಸರಿಸಾಟಿಯಾಗಿ ಮತ್ತೋರ್ವ ಹೀರೋ ನಿಲ್ಲೋಕೆ ಸಾಧ್ಯವಿಲ್ಲ. ರಾಜ್​​ಕುಮಾರ್ ಅವರು ಇಷ್ಟು ದೊಡ್ಡ ಹೀರೋ ಆದರು ಎಂದಿಗೂ ಅಹಂನಿಂದ ಮೆರೆದವರು ಅಲ್ಲ. ಇದಕ್ಕೆ ಉಪೇಂದ್ರ ಅವರು ಕೊಟ್ಟ ಒಳ್ಳೆಯ ಉದಾಹರಣೆಯನ್ನು ಇಲ್ಲಿ ನೋಡೋಣ.

ಉಪೇಂದ್ರ ನಟನೆಯ ‘45’ ಸಿನಿಮಾ ಕಳೆದ ವರ್ಷಾಂತ್ಯಕ್ಕೆ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರ ಜೊತೆ ಶಿವಣ್ಣ, ರಾಜ್ ಬಿ ಶೆಟ್ಟಿ ಕೂಡ ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರವನ್ನು ಇಡೀ ತಂಡ ಮಾಡಿದೆ. ಅರ್ಜುನ್ ಜನ್ಯ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಂಗೀತ ಸಂಯೋಜನೆ ಕೂಡ ಅವರದ್ದೇ. ಇಡೀ ತಂಡ ಡಿಕೆಡಿ ವೇದಿಕೆ ಏರಿತ್ತು. ಈ ಸಂದರ್ಭದಲ್ಲಿ ಉಪೇಂದ್ರ ಅವರು ಅಪರೂಪದ ಮಾಹಿತಿ ಹಂಚಿಕೊಂಡಿದ್ದರು.

‘ಶೂಟಿಂಗ್ ವೇಳೆ ರಾಜ್​ಕುಮಾರ್ ಅವರಿಗೆ ರಜನಿ ಮೈಸೂರಲ್ಲಿ ಸಿಕ್ತಿದ್ರಂತೆ. ರಾಜ್​ಕುಮಾರ್​ಗೆ ಎಲ್ಲರೂ ನಮಸ್ಕಾರ ಮಾಡ್ತಿದ್ರಂತೆ. ಇದನ್ನು ನೋಡಿ ರಜನಿಗೆ ಅಚ್ಚರಿ ಆಗಿತ್ತು. ನಿಮಗೆ ಎಲ್ಲರೂ ನಮಸ್ಕಾರ ಮಾಡುತ್ತಾರಲ್ಲ, ಅದು ಹೇಗೆ ಅನಿಸುತ್ತದೆ ಎಂದು ಕೇಳಿದಾಗ, ಅವರು ನಮಸ್ಕಾರ ಮಾಡುತ್ತಿರುವುದು ನನಗಲ್ಲ, ನನ್ನ ಒಳಗೆ ಇರುವ ಕಲಾ ದೇವಿಗೆ ಎಂದು ಹೇಳುತ್ತಿದ್ದರಂತೆ. ಇದು ಅವರ ದೊಡ್ಡ ಗುಣ’ ಎಂದರು ಉಪೇಂದ್ರ.

ಇದನ್ನೂ ಓದಿ: ಅಶ್ವಿನಿ ಪುನೀತ್ ರಾಜ್​​ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ

ಯಾರಾದರೂ ನಮಸ್ಕಾರ ಮಾಡಿದರೆ ಹೆಮ್ಮೆ ಆಗುತ್ತದೆ. ನನಗೆ ಅವರು ನಮಸ್ಕಾರ ಮಾಡುತ್ತಾರೆ ಎಂದು ಮೆರೆಯುತ್ತಾರೆ. ಆದರೆ, ರಾಜ್​​ಕುಮಾರ್ ಮಾತ್ರ ಆ ರೀತಿ ಆಗಿರಲೇ ಇಲ್ಲ. ಈ ಘಟನೆಯೇ ಅದಕ್ಕೆ ಸಾಕ್ಷಿ ‘ನಾನು ಸಿನಿಮಾ ತಿಳಿದುಕೊಂಡು ಮಾಡಿದ್ರೆ ಏನು ಮಾಡ್ತಿದ್ನೋ ಗೊತ್ತಿಲ್ಲ. ಆದರೆ, ಕಲಿಯದೆ ಮಾಡಿಕೊಂಡು ಹೋದೆ. ಶಕ್ತಿ ಎಲ್ಲವನ್ನೂ ಮಾಡಿಸುತ್ತದೆ ಎಂದು ರಾಜ್​​ಕುಮಾರ್ ಹೇಳುತ್ತಿದ್ದರು. ಕಾರಂತರಿಗೆ ಪ್ರಕೃತಿಯಲ್ಲಿ, ಕುವೆಂಪುಗೆ ಅಕ್ಷರಗಳಲ್ಲಿ ಹಾಗೂ ರಾಜ್​​ಕುಮಾರ್​ಗೆ ಅಭಿಮಾನಿಗಳಲ್ಲಿ ದೇವರು ಕಾಣಿಸಿದರು. ನನಗೆ ಈಗ ಎಲ್ಲ ಕಡೆಗಳಲ್ಲಿ ದೇವರು ಕಾಣಿಸುತ್ತಿದ್ದಾರೆ’ ಎಂದರು ಉಪ್ಪಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:52 am, Mon, 12 January 26

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ