AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಜನ್ಮದಿನ: ಎಂದೂ ಮರೆಯಲಾಗದ ವಿಷ್ಣು ದಾದಾಗೆ​ ಸೆಲೆಬ್ರಿಟಿಗಳು ವಿಶ್​ ಮಾಡ್ತಿರೋದು ಹೀಗೆ..

ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ವಿಷ್ಣುವರ್ಧನ್​ ಜೊತೆ ತಾವಿರುವ ಫೋಟೋಗಳನ್ನು ಶೇರ್​ ಮಾಡಿಕೊಂಡು ಸಾಹಸ ಸಿಂಹನಿಗೆ ವಿಶ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​, ರಮೇಶ್​ ಅರವಿಂದ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ.

ವಿಷ್ಣುವರ್ಧನ್ ಜನ್ಮದಿನ: ಎಂದೂ ಮರೆಯಲಾಗದ ವಿಷ್ಣು ದಾದಾಗೆ​ ಸೆಲೆಬ್ರಿಟಿಗಳು ವಿಶ್​ ಮಾಡ್ತಿರೋದು ಹೀಗೆ..
ಸಾಹಸ ಸಿಂಹ ವಿಷ್ಣುವರ್ಧನ್ ಜನ್ಮದಿನ
TV9 Web
| Edited By: |

Updated on:Sep 18, 2021 | 4:22 PM

Share

ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದವರು ನಟ ವಿಷ್ಣುವರ್ಧನ್​. ಅಭಿಮಾನಿಗಳ ಪಾಲಿನ ‘ಸಾಹಸ ಸಿಂಹ’ನಾಗಿ ಅವರು ತೆರೆಮೇಲೆ ಮಿಂಚಿದರು. 200 ಸಿನಿಮಾಗಳಲ್ಲಿ ನಟಿಸಿ ಬಣ್ಣದ ಲೋಕದಲ್ಲಿ ಅಮರರಾದರು. ಇಂದು (ಸೆ.18) ವಿಷ್ಣುವರ್ಧನ್​ ಜನ್ಮದಿನ. ಅವರು ಭೌತಿಕವಾಗಿ ಬದುಕಿದಿದ್ದರೆ ಈ ವರ್ಷ 71ನೇ ವಸಂತಕ್ಕೆ ಕಾಲಿಡಬೇಕಿತ್ತು. ಅವರ ಹುಟ್ಟುಹಬ್ಬದ ದಿನವಾದ ಇಂದು ಅಸಂಖ್ಯಾತ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಕೂಡ ವಿಷ್ಣುವರ್ಧನ್​ ಜೊತೆ ತಾವಿರುವ ಫೋಟೋಗಳನ್ನು ಶೇರ್​ ಮಾಡಿಕೊಂಡು ಸಾಹಸ ಸಿಂಹನಿಗೆ ವಿಶ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​, ರಮೇಶ್​ ಅರವಿಂದ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ.

ಆಪ್ತಮಿತ್ರ, ಏಕದಂತ, ವರ್ಷ ಮುಂತಾದ ಸಿನಿಮಾಗಳಲ್ಲಿ ರಮೇಶ್​ ಅರವಿಂದ್​ ಮತ್ತು ವಿಷ್ಣುವರ್ಧನ್​ ಜೊತೆಯಾಗಿ ನಟಿಸಿದ್ದರು. ಹಾಗಾಗಿ ಇಬ್ಬರ ನಡುವೆ ಸ್ನೇಹವಿತ್ತು. ‘ಸ್ನೇಹದ ಕಡಲಲ್ಲಿ.. ನೆನಪಿನ ದೋಣಿಯಲಿ.. ವಿಷ್ಣುವರ್ಧನ್​ ನೆನಪುಗಳು’ ಎಂದು ಅವರೊಂದಿಗಿನ ಫೋಟೋವನ್ನು ರಮೇಶ್​ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ವಿಶ್​ ಮಾಡಿದ್ದಾರೆ.

‘ಕಿಚ್ಚ’ ಸುದೀಪ್​ ಅವರಿಗೂ ವಿಷ್ಣುವರ್ಧನ್​ ಮೇಲೆ ಅಪಾರ ಗೌರವ ಮತ್ತು ಅಭಿಮಾನ. ‘ಇವರಿಗೆ ಅಭಿಮಾನಿಗಳ ಸಾಗರವೇ ಇದೆ. ಅದರಲ್ಲಿ ನಾನೊಂದು ಹನಿ ಮಾತ್ರ. ಇಂದು ಮಾತ್ರವಲ್ಲ, ನೀವು ಪ್ರತಿ ದಿನ ಪ್ರತಿ ಕ್ಷಣ ನೆನಪಾಗುತ್ತೀರಿ’ ಎಂದು ಸುದೀಪ್​ ಪೋಸ್ಟ್​ ಮಾಡಿದ್ದಾರೆ. ವಿಷ್ಣು ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುತ್ತಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ವಿಷ್ಣುವರ್ಧನ್​ ಕುಟುಂಬದವರು ಮೈಸೂರಿನಲ್ಲಿ ಈ ವರ್ಷ ಹುಟ್ಟುಹಬ್ಬದ ಆಚರಿಸುತ್ತಿದ್ದಾರೆ. ಆ ಬಗ್ಗೆ ನಟ ಅನಿರುದ್ಧ ಮಾಹಿತಿ ನೀಡಿದ್ದಾರೆ. ‘ಎಚ್​.ಡಿ. ಕೋಟೆ ರಸ್ತೆಯಲ್ಲಿರುವ ವಿಷ್ಣುವರ್ಧನ್​ ಅವರ ಸ್ಮಾರಕದ ಜಾಗದಲ್ಲಿ ಬೆಳಗ್ಗೆ 11 ಗಂಟೆಗೆ ನಾವು ಜನ್ಮದಿನ ಆಚರಿಸುತ್ತೇವೆ. ಭಾರತಿ ವಿಷ್ಣುವರ್ಧನ್, ಕೀರ್ತಿ ಸೇರಿದಂತೆ ನಾವೆಲ್ಲ ಇರುತ್ತೇವೆ. ಅಭಿಮಾನಿಗಳು ಬರಲೇಬೇಕು ಅಂತ ನಾನು ಹಠ ಹಿಡಿಯುತ್ತಿಲ್ಲ. ಯಾಕೆಂದರೆ ಕೊರೊನಾ ಇದೆ. ಬರಬೇಕು ಎಂಬ ಆಸೆ ಇರುವವರು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿಕೊಂಡು ಬನ್ನಿ’ ಎಂದು ಅನಿರುದ್ಧ ಹೇಳಿದ್ದಾರೆ.​

ಇದನ್ನೂ ಓದಿ:

ಇಂದು ವಿಷ್ಣುವರ್ಧನ್​, ಉಪೇಂದ್ರ, ಶ್ರುತಿ ಜನ್ಮದಿನ; ಅಭಿಮಾನಿಗಳಿಗೆ ಏನೆಲ್ಲ ಸಿಗಲಿದೆ?

ಉಪೇಂದ್ರ ಹುಟ್ಟುಹಬ್ಬಕ್ಕೆ ಒಂದು ಬ್ಯಾಡ್​ ನ್ಯೂಸ್​, ಇನ್ನೊಂದು ಗುಡ್​ ನ್ಯೂಸ್​; ಇಲ್ಲಿದೆ ಉಪ್ಪಿಯ ಮುಖ್ಯ ಸಂದೇಶ

Published On - 8:28 am, Sat, 18 September 21

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ