AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಜೂ.ಎನ್​ಟಿಆರ್ ಅಸಮಾಧಾನ? ಸ್ಕ್ರಿಪ್ಟ್ ಬದಲಿಸಲು ಸೂಚನೆ

ಜೂ. ಎನ್​​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಸಿನಿಮಾ ಒಂದು ಮೂಡಿ ಬರುತ್ತಿದೆ.ಈ ಸಿನಿಮಾದ ಶೂಟಿಂಗ್ ಫೂಟೇಜ್ ಬಗ್ಗೆ NTR ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ವದಂತಿಗಳು ಹರಡಿವೆ. ತಮ್ಮ ಹಿಂದಿನ ಸಿನಿಮಾಗಳ ನಂತರ, ಈ ಪ್ರಾಜೆಕ್ಟ್ ಬಗ್ಗೆ NTR ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಜೂ.ಎನ್​ಟಿಆರ್ ಅಸಮಾಧಾನ? ಸ್ಕ್ರಿಪ್ಟ್ ಬದಲಿಸಲು ಸೂಚನೆ
ನೀಲ್-ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on:Oct 21, 2025 | 7:07 AM

Share

ಜೂನಿಯರ್ ಎನ್​ಟಿಆರ್ (JR NTR) ಹಾಗೂ ಪ್ರಶಾಂತ್ ನೀಲ್ ಸಿನಿಮಾ ಘೋಷಣೆ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಸಿನಿಮಾದ ಕೆಲಸಗಳು ಇನ್ನೂ ಅಧಿಕೃತವಾಗಿ ಆರಂಭ ಆಗಿರಲಿಲ್ಲ. ಈಗ ಕೆಲ ಹಂತದ ಶೂಟಿಂಗ್ ಪೂರ್ಣಗೊಂಡಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಗ್ಗೆ ಶಾಕಿಂಗ್ ವಿಚಾರ ಒಂದು ಹೊರ ಬಿದ್ದಿದೆ. ಶೂಟ್​ನ ಫೂಟೇಜ್ ನೋಡಿರೋ ಜೂನಿಯರ್ ಎನ್​ಟಿಆರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ವರದಿ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವದಂತಿಗಳು ಹಬ್ಬಿವೆ.

ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಸಾಧಾರಣ ಎನಿಸಿಕೊಂಡಿತು. ಆ ಬಳಿಕ ಬಂದ ‘ವಾರ್ 2’ ಸಿನಿಮಾ ಡಿಸಾಸ್ಟರ್ ಆಯಿತು. ಈ ಚಿತ್ರದ ಮೂಲಕ ಎನ್​ಟಿಆರ್ ಬಾಲಿವುಡ್ ಕದ ತಟ್ಟಿ ಬಂದಿದ್ದರು. ಆದರೆ, ವರ್ಷಾನುಗಟ್ಟಲೆ ಹಾಕಿದ ಶ್ರಮ ವ್ಯರ್ಥವಾಯಿತು. ಈಗ ಜೂ. ಎನ್​ಟಿಆರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ.

ಇದನ್ನೂ ಓದಿ
Image
ಗಂಡು ಮಗುವಿಗೆ ಜನ್ಮ ನೀಡಿದ ನಟಿ ಪರಿಣಿತಿ ಚೋಪ್ರಾ
Image
ಶಾಲಲ್ಲಿ ಚಪ್ಪಲಿ ಸುತ್ತಿ ಹೊಡೆದ ಗಿಲ್ಲಿ ನಟ; ಅಶ್ವಿನಿ-ಜಾನ್ವಿ ಗಪ್ ಚುಪ್
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಪ್ರಶಾಂತ್ ನೀಲ್ ಅವರು ಸಿನಿಮಾ ಕೆಲಸಗಳಲ್ಲಿ ತಮ್ಮದೇ ಆದ ಸ್ಟೈಲ್ ಹೊಂದಿದ್ದಾರೆ. ಅದೇ ಸ್ಟೈಲ್​ನಲ್ಲಿ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆದರೆ, ಸಿನಿಮಾದ ಕೆಲಸ ನೋಡಿದ ಜೂನಿಯರ್ ಎನ್​ಟಿಆರ್ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ, ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ. ಈ ಕ್ಲ್ಯಾಶ್ ಯಾವ ಹಂತಕ್ಕೆ ಹೋಗುತ್ತದೆ ಎಂಬ ಚರ್ಚೆಗಳೂ ನಡೆದಿವೆ.

ಇನ್ನೂ ಕೆಲವು ಫ್ಯಾನ್ಸ್​ಗಳು ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲ ಸುಳ್ಳು, ಇದನ್ನು ನಂಬ ಬೇಡಿ ಎಂದು ಕೋರಿಕೊಂಡಿದ್ದಾರೆ. ಈ ಬಗ್ಗೆ ತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ. ಮೈತ್ರಿ ಮೂವೀ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.

ಇದನ್ನೂ ಓದಿ: ‘ಕಾಂತಾರ: ಚಾಪ್ಟರ್ 1’ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಜೂ. ಎನ್​ಟಿಆರ್ ಅತಿಥಿ

2018ರಲ್ಲಿ ‘ಕೆಜಿಎಫ್’ ಸಿನಿಮಾ ರಿಲೀಸ್ ಆಯಿತು. 2019ರಲ್ಲಿ ನೀಲ್ ಹಾಗೂ ಎನ್​ಟಿಆರ್ ಭೇಟಿ ಮಾಡಿ, ಕಥೆ ಹೇಳಿದರು. ಅಂದಿನಿಂದಲೂ ಈ ಸಿನಿಮಾ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂಬ ಟೈಟಲ್ ಇಡಲಾಗಿದೆ ಎನ್ನಲಾಗುತ್ತಿದೆ. ಏಪ್ರಿಲ್​ನಲ್ಲಿ ಸಿನಿಮಾದ ಶೂಟ್ ಆರಂಭ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:04 am, Tue, 21 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More