AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು​ ‘ದೃಶ್ಯ 2’ ರಿಲೀಸ್​; ರವಿಚಂದ್ರನ್ ನಟನೆಯ ಈ ಸಿನಿಮಾ ನೋಡೋಕೆ ಇಲ್ಲಿವೆ ಕಾರಣ

‘ದೃಶ್ಯ’ ಸಿನಿಮಾದಲ್ಲಿ ಐಜಿ ಹುದ್ದೆಯಲ್ಲಿರುವ ರೂಪಾ ಚಂದ್ರಶೇಖರ್​ ಮಗ ತರುಣ್​ ಚಂದ್ರಶೇಖರ್​ ಅವರನ್ನು ರಾಜೇಂದ್ರ ಪೊನ್ನಪ್ಪ ಅವರು ಪೊಲೀಸ್​ ಠಾಣೆಯಲ್ಲಿ ಹುಗಿದು ಹಾಕಿದ್ದರು. ಆ ನಂತರ ಇಡೀ ಕುಟುಂಬ ಹಾಯಾಗಿ ಜೀವನ ನಡೆಸುತ್ತಿರುತ್ತದೆ.

ಇಂದು​ ‘ದೃಶ್ಯ 2’ ರಿಲೀಸ್​; ರವಿಚಂದ್ರನ್ ನಟನೆಯ ಈ ಸಿನಿಮಾ ನೋಡೋಕೆ ಇಲ್ಲಿವೆ ಕಾರಣ
ದೃಶ್ಯ 2
TV9 Web
| Edited By: |

Updated on: Dec 10, 2021 | 6:00 AM

Share

ರವಿಚಂದ್ರನ್​ ಅಭಿನಯದ ‘ದೃಶ್ಯ’ ಸಿನಿಮಾ 2014ರಲ್ಲಿ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್​ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಸೀಕ್ವೆಲ್​ ಇಂದು (ಡಿಸೆಂಬರ್​ 10) ರಿಲೀಸ್​ ಆಗುತ್ತಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಝಲಕ್​ ಕಳೆದ ತಿಂಗಳು ರಿಲೀಸ್​ ಆದ ಟ್ರೇಲರ್​ನಲ್ಲಿ ಸಿಕ್ಕಿತ್ತು. ಹಾಗಾದರೆ, ಸಿನಿಮಾ ನೋಡೋಕೆ ಕಾರಣಗಳೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕೌತುಕ ಹೆಚ್ಚಿಸಿದ ಟ್ರೇಲರ್​

‘ದೃಶ್ಯ’ ಸಿನಿಮಾದಲ್ಲಿ ಐಜಿ ಹುದ್ದೆಯಲ್ಲಿರುವ ರೂಪಾ ಚಂದ್ರಶೇಖರ್​ ಮಗ ತರುಣ್​ ಚಂದ್ರಶೇಖರ್​ ಅವರನ್ನು ರಾಜೇಂದ್ರ ಪೊನ್ನಪ್ಪ ಅವರು ಪೊಲೀಸ್​ ಠಾಣೆಯಲ್ಲಿ ಹುಗಿದು ಹಾಕಿದ್ದರು. ಆ ನಂತರ ಇಡೀ ಕುಟುಂಬ ಹಾಯಾಗಿ ಜೀವನ ನಡೆಸುತ್ತಿರುತ್ತದೆ. ಆದರೆ, ಈಗ ಈ ವಿಚಾರ ರಿವೀಲ್​ ಆಗಿದೆ. ಇದರಿಂದ ರಾಜೇಂದ್ರ ಪೊನ್ನಪ್ಪ ಹೇಗೆ ತಪ್ಪಿಸಿಕೊಳ್ಳುತ್ತಾರೆ ಅನ್ನೋದು ಸಿನಿಮಾದ ಹೈಲೈಟ್​ ಆಗಲಿದೆ ಎಂಬುದಕ್ಕೆ ‘ದೃಶ್ಯ 2’ ಟ್ರೇಲರ್ ಸಾಕ್ಷ್ಯ ನೀಡಿದೆ. ಈ ಟ್ರೇಲರ್​ ಈಗಾಗಲೇ ಸಾಕಷ್ಟು ಕೌತುಕ ಮೂಡಿಸಿದೆ.

ಪಾತ್ರವರ್ಗ

‘ದೃಶ್ಯ 2’ ಸಿನಿಮಾದಲ್ಲೂ ರವಿಚಂದ್ರನ್​ ಮತ್ತು ನವ್ಯಾ ನಾಯರ್​ ಮುಂದುವರಿದಿದ್ದಾರೆ. ಪುತ್ರಿ ಪಾತ್ರದಲ್ಲಿ ನಟಿ ಆರೋಹಿ ನಾರಾಯಣ್​ ಅಭಿನಯಿಸಿದ್ದಾರೆ. ಸಿನಿಮಾದ ಟ್ರೇಲರ್​ ಸಾಕಷ್ಟು ಸಸ್ಪೆನ್ಸ್​ಗಳಿಂದ ಕೂಡಿದೆ. ಹೀಗಾಗಿ, ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಮೂಡಿದೆ. ಅನಂತ್​ ನಾಗ್​ ಪಾತ್ರ ಕೂಡ ಟ್ರೇಲರ್​ನಲ್ಲಿ ರಿವೀಲ್​ ಆಗಿದೆ. ಇತ್ತೀಚೆಗೆ ಅವರು ಚಿತ್ರತಂಡ ಸೇರಿಕೊಂಡ ಬಗ್ಗೆ ಮಾಹಿತಿ ಅಧಿಕೃತವಾಗಿತ್ತು.

ಪಿ. ವಾಸು ನಿರ್ದೇಶನ

ಸಾಕಷ್ಟು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಪಿ. ವಾಸು ಅವರಿಗೆ ಇದೆ. ಈ ಮೊದಲು ‘ದೃಶ್ಯ’ ಸಿನಿಮಾ ನಿರ್ದೇಶನ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ. ಈಗ ‘ದೃಶ್ಯ 2’ಗೆ ನಿರ್ದೇಶನ ಮಾಡಿದ್ದಾರೆ. E4 Entertainment ಬ್ಯಾನರ್​ನಲ್ಲಿ ‘ದೃಶ್ಯ 2’ ಸಿನಿಮಾ ಮೂಡಿಬಂದಿದೆ. ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಿ.ವಿ. ಸಾರಥಿ ಕೆಲಸ ಮಾಡಿದ್ದಾರೆ. ಜಿ.ಎಸ್.ವಿ. ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ, ಭರತ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ‌. ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ ರವಿಚಂದ್ರನ್ ‘ದೃಶ್ಯ 2’ ತೆರೆಗೆ ಬರುವುದಕ್ಕೂ ಮೊದಲು ಮತ್ತೊಮ್ಮೆ ರಿಲೀಸ್ ಆಗ್ತಿದೆ ‘ದೃಶ್ಯ’; ಎಲ್ಲೆಲ್ಲಿ ಶೋ?

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!