AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು​ ‘ದೃಶ್ಯ 2’ ರಿಲೀಸ್​; ರವಿಚಂದ್ರನ್ ನಟನೆಯ ಈ ಸಿನಿಮಾ ನೋಡೋಕೆ ಇಲ್ಲಿವೆ ಕಾರಣ

‘ದೃಶ್ಯ’ ಸಿನಿಮಾದಲ್ಲಿ ಐಜಿ ಹುದ್ದೆಯಲ್ಲಿರುವ ರೂಪಾ ಚಂದ್ರಶೇಖರ್​ ಮಗ ತರುಣ್​ ಚಂದ್ರಶೇಖರ್​ ಅವರನ್ನು ರಾಜೇಂದ್ರ ಪೊನ್ನಪ್ಪ ಅವರು ಪೊಲೀಸ್​ ಠಾಣೆಯಲ್ಲಿ ಹುಗಿದು ಹಾಕಿದ್ದರು. ಆ ನಂತರ ಇಡೀ ಕುಟುಂಬ ಹಾಯಾಗಿ ಜೀವನ ನಡೆಸುತ್ತಿರುತ್ತದೆ.

ಇಂದು​ ‘ದೃಶ್ಯ 2’ ರಿಲೀಸ್​; ರವಿಚಂದ್ರನ್ ನಟನೆಯ ಈ ಸಿನಿಮಾ ನೋಡೋಕೆ ಇಲ್ಲಿವೆ ಕಾರಣ
ದೃಶ್ಯ 2
TV9 Web
| Edited By: |

Updated on: Dec 10, 2021 | 6:00 AM

Share

ರವಿಚಂದ್ರನ್​ ಅಭಿನಯದ ‘ದೃಶ್ಯ’ ಸಿನಿಮಾ 2014ರಲ್ಲಿ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್​ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಸೀಕ್ವೆಲ್​ ಇಂದು (ಡಿಸೆಂಬರ್​ 10) ರಿಲೀಸ್​ ಆಗುತ್ತಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಝಲಕ್​ ಕಳೆದ ತಿಂಗಳು ರಿಲೀಸ್​ ಆದ ಟ್ರೇಲರ್​ನಲ್ಲಿ ಸಿಕ್ಕಿತ್ತು. ಹಾಗಾದರೆ, ಸಿನಿಮಾ ನೋಡೋಕೆ ಕಾರಣಗಳೇನು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಕೌತುಕ ಹೆಚ್ಚಿಸಿದ ಟ್ರೇಲರ್​

‘ದೃಶ್ಯ’ ಸಿನಿಮಾದಲ್ಲಿ ಐಜಿ ಹುದ್ದೆಯಲ್ಲಿರುವ ರೂಪಾ ಚಂದ್ರಶೇಖರ್​ ಮಗ ತರುಣ್​ ಚಂದ್ರಶೇಖರ್​ ಅವರನ್ನು ರಾಜೇಂದ್ರ ಪೊನ್ನಪ್ಪ ಅವರು ಪೊಲೀಸ್​ ಠಾಣೆಯಲ್ಲಿ ಹುಗಿದು ಹಾಕಿದ್ದರು. ಆ ನಂತರ ಇಡೀ ಕುಟುಂಬ ಹಾಯಾಗಿ ಜೀವನ ನಡೆಸುತ್ತಿರುತ್ತದೆ. ಆದರೆ, ಈಗ ಈ ವಿಚಾರ ರಿವೀಲ್​ ಆಗಿದೆ. ಇದರಿಂದ ರಾಜೇಂದ್ರ ಪೊನ್ನಪ್ಪ ಹೇಗೆ ತಪ್ಪಿಸಿಕೊಳ್ಳುತ್ತಾರೆ ಅನ್ನೋದು ಸಿನಿಮಾದ ಹೈಲೈಟ್​ ಆಗಲಿದೆ ಎಂಬುದಕ್ಕೆ ‘ದೃಶ್ಯ 2’ ಟ್ರೇಲರ್ ಸಾಕ್ಷ್ಯ ನೀಡಿದೆ. ಈ ಟ್ರೇಲರ್​ ಈಗಾಗಲೇ ಸಾಕಷ್ಟು ಕೌತುಕ ಮೂಡಿಸಿದೆ.

ಪಾತ್ರವರ್ಗ

‘ದೃಶ್ಯ 2’ ಸಿನಿಮಾದಲ್ಲೂ ರವಿಚಂದ್ರನ್​ ಮತ್ತು ನವ್ಯಾ ನಾಯರ್​ ಮುಂದುವರಿದಿದ್ದಾರೆ. ಪುತ್ರಿ ಪಾತ್ರದಲ್ಲಿ ನಟಿ ಆರೋಹಿ ನಾರಾಯಣ್​ ಅಭಿನಯಿಸಿದ್ದಾರೆ. ಸಿನಿಮಾದ ಟ್ರೇಲರ್​ ಸಾಕಷ್ಟು ಸಸ್ಪೆನ್ಸ್​ಗಳಿಂದ ಕೂಡಿದೆ. ಹೀಗಾಗಿ, ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಮೂಡಿದೆ. ಅನಂತ್​ ನಾಗ್​ ಪಾತ್ರ ಕೂಡ ಟ್ರೇಲರ್​ನಲ್ಲಿ ರಿವೀಲ್​ ಆಗಿದೆ. ಇತ್ತೀಚೆಗೆ ಅವರು ಚಿತ್ರತಂಡ ಸೇರಿಕೊಂಡ ಬಗ್ಗೆ ಮಾಹಿತಿ ಅಧಿಕೃತವಾಗಿತ್ತು.

ಪಿ. ವಾಸು ನಿರ್ದೇಶನ

ಸಾಕಷ್ಟು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಪಿ. ವಾಸು ಅವರಿಗೆ ಇದೆ. ಈ ಮೊದಲು ‘ದೃಶ್ಯ’ ಸಿನಿಮಾ ನಿರ್ದೇಶನ ಮಾಡಿ ಅವರು ಭೇಷ್​ ಎನಿಸಿಕೊಂಡಿದ್ದಾರೆ. ಈಗ ‘ದೃಶ್ಯ 2’ಗೆ ನಿರ್ದೇಶನ ಮಾಡಿದ್ದಾರೆ. E4 Entertainment ಬ್ಯಾನರ್​ನಲ್ಲಿ ‘ದೃಶ್ಯ 2’ ಸಿನಿಮಾ ಮೂಡಿಬಂದಿದೆ. ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಿ.ವಿ. ಸಾರಥಿ ಕೆಲಸ ಮಾಡಿದ್ದಾರೆ. ಜಿ.ಎಸ್.ವಿ. ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ, ಭರತ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ‌. ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ ರವಿಚಂದ್ರನ್ ‘ದೃಶ್ಯ 2’ ತೆರೆಗೆ ಬರುವುದಕ್ಕೂ ಮೊದಲು ಮತ್ತೊಮ್ಮೆ ರಿಲೀಸ್ ಆಗ್ತಿದೆ ‘ದೃಶ್ಯ’; ಎಲ್ಲೆಲ್ಲಿ ಶೋ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ