AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drishya 2 Trailer: ಕುತೂಹಲ ಹೆಚ್ಚಿಸಿದ ‘ದೃಶ್ಯ 2’ ಟ್ರೇಲರ್​; ರವಿಚಂದ್ರನ್​ ಚಿತ್ರಕ್ಕೆ ಸುದೀಪ್​ ಬೆಂಬಲ

‘ದೃಶ್ಯ’ ಸಿನಿಮಾದಲ್ಲಿ ಐಜಿ ಹುದ್ದೆಯಲ್ಲಿರುವ ರೂಪಾ ಚಂದ್ರಶೇಖರ್​ ಮಗ ತರುಣ್​ ಚಂದ್ರಶೇಖರ್​ ಅವರನ್ನು ರಾಜೇಂದ್ರ ಪೊನ್ನಪ್ಪ ಅವರು ಪೊಲೀಸ್​ ಠಾಣೆಯಲ್ಲಿ ಹುಗಿದು ಹಾಕಿದ್ದರು. ಎರಡನೇ ಭಾಗದಲ್ಲಿ ಈ ವಿಚಾರ ರಿವೀಲ್​ ಆಗಲಿದೆ.

Drishya 2 Trailer: ಕುತೂಹಲ ಹೆಚ್ಚಿಸಿದ ‘ದೃಶ್ಯ 2’ ಟ್ರೇಲರ್​; ರವಿಚಂದ್ರನ್​ ಚಿತ್ರಕ್ಕೆ ಸುದೀಪ್​ ಬೆಂಬಲ
ರವಿಚಂದ್ರನ್​-ಸುದೀಪ್​
TV9 Web
| Edited By: |

Updated on:Nov 26, 2021 | 9:24 PM

Share

ರವಿಚಂದ್ರನ್​ ಅಭಿನಯದ ‘ದೃಶ್ಯ’ ಸಿನಿಮಾ 2014ರಲ್ಲಿ ತೆರೆಗೆ ಬಂದು ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ರಾಜೇಂದ್ರ ಪೊನ್ನಪ್ಪ ಆಗಿ ರವಿಚಂದ್ರನ್​ ಕಾಣಿಸಿಕೊಂಡಿದ್ದರು. ಈ ಸಿನಿಮಾದ ಸೀಕ್ವೆಲ್​ ಈಗ ಸಿದ್ಧಗೊಂಡಿದೆ. ಈ ಸಿನಿಮಾ ಹೇಗಿರಲಿದೆ ಎನ್ನುವ ಝಲಕ್​ ಇಂದು (ನವೆಂಬರ್​ 26) ರಿಲೀಸ್​ ಆದ ಟ್ರೇಲರ್​ನಲ್ಲಿ ಸಿಕ್ಕಿದೆ. ಈ ಸಿನಿಮಾದ ಟ್ರೇಲರ್​ಅನ್ನು ಕಿಚ್ಚ ಸುದೀಪ್​ ಅನಾವರಣ ಮಾಡಿದ್ದು ವಿಶೇಷವಾಗಿತ್ತು.

‘ದೃಶ್ಯ’ ಸಿನಿಮಾದಲ್ಲಿ ಐಜಿ ಹುದ್ದೆಯಲ್ಲಿರುವ ರೂಪಾ ಚಂದ್ರಶೇಖರ್​ ಮಗ ತರುಣ್​ ಚಂದ್ರಶೇಖರ್​ ಅವರನ್ನು ರಾಜೇಂದ್ರ ಪೊನ್ನಪ್ಪ ಅವರು ಪೊಲೀಸ್​ ಠಾಣೆಯಲ್ಲಿ ಹುಗಿದು ಹಾಕಿದ್ದರು. ಆ ನಂತರ ಇಡೀ ಕುಟುಂಬ ಹಾಯಾಗಿ ಜೀವನ ನಡೆಸುತ್ತಿರುತ್ತದೆ. ಆದರೆ, ಈಗ ಈ ವಿಚಾರ ರಿವೀಲ್​ ಆಗಿದೆ. ಇದರಿಂದ ರಾಜೇಂದ್ರ ಪೊನ್ನಪ್ಪ ಹೇಗೆ ತಪ್ಪಿಸಿಕೊಳ್ಳುತ್ತಾರೆ ಅನ್ನೋದು ಸಿನಿಮಾದ ಹೈಲೈಟ್​ ಆಗಲಿದೆ ಎಂಬುದಕ್ಕೆ ‘ದೃಶ್ಯ 2’ ಟ್ರೇಲರ್ ಸಾಕ್ಷ್ಯ ನೀಡಿದೆ. ಈ ಸಿನಿಮಾ ಡಿಸೆಂಬರ್​ 10ಕ್ಕೆ ರಿಲೀಸ್​ ಆಗುತ್ತಿದೆ.

‘ದೃಶ್ಯ 2’ ಸಿನಿಮಾದಲ್ಲೂ ರವಿಚಂದ್ರನ್​ ಮತ್ತು ನವ್ಯಾ ನಾಯರ್​ ಮುಂದುವರಿದಿದ್ದಾರೆ. ಪುತ್ರಿ ಪಾತ್ರದಲ್ಲಿ ನಟಿ ಆರೋಹಿ ನಾರಾಯಣ್​ ಅಭಿನಯಿಸಿದ್ದಾರೆ. ಸಿನಿಮಾದ ಟ್ರೇಲರ್​ ಸಾಕಷ್ಟು ಸಸ್ಪೆನ್ಸ್​ಗಳಿಂದ ಕೂಡಿದೆ. ಹೀಗಾಗಿ, ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಮೂಡಿದೆ. ಅನಂತ್​ ನಾಗ್​ ಪಾತ್ರ ಕೂಡ ಟ್ರೇಲರ್​ನಲ್ಲಿ ರಿವೀಲ್​ ಆಗಿದೆ. ಇತ್ತೀಚೆಗೆ ಅವರು ಚಿತ್ರತಂಡ ಸೇರಿಕೊಂಡ ಬಗ್ಗೆ ಮಾಹಿತಿ ಅಧಿಕೃತವಾಗಿತ್ತು.

‘ನಾನು ‘ದೃಶ್ಯ’ ಸಿನಿಮಾವನ್ನು ಕನ್ನಡದಲ್ಲಿ ನೋಡಿದ್ದೆ. ಇದರ ಸೀಕ್ವೆಲ್​ ಕೂಡ ಕನ್ನಡದಲ್ಲೇ ನೋಡುತ್ತೇನೆ. ಇಲ್ಲಿ ಸಿನಿಮಾ ನೋಡಿದಾಗ ಹೆಚ್ಚು ಕನೆಕ್ಟ್​ ಆಗುತ್ತೇವೆ. ‘ದೃಶ್ಯ 3’ ಕನ್ನಡದಲ್ಲಿ ಮೊದಲು ಮಾಡಿ’ ಎಂದು ಮನವಿ ಮಾಡಿದರು ಸುದೀಪ್​.

E4 Entertainment ಬ್ಯಾನರ್​ನಲ್ಲಿ ‘ದೃಶ್ಯ 2’ ಸಿನಿಮಾ ಮೂಡಿಬಂದಿದೆ. ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಿ.ವಿ. ಸಾರಥಿ ಕೆಲಸ ಮಾಡಿದ್ದಾರೆ. ಜಿ.ಎಸ್.ವಿ. ಸೀತಾರಾಂ ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ರವಿ ಸಂತೆಹುಕ್ಲು ಕಲಾ ನಿರ್ದೇಶನ ಹಾಗೂ ಲೋಕೇಶ್ ಬಿಕೆ ಗೌಡ, ಭರತ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ‌. ಪ್ರಭು ಶಿವಾಜಿ, ಸಾಧುಕೋಕಿಲ, ನೀತು ರೈ, ಪ್ರಮೋದ್ ಶೆಟ್ಟಿ, ಅಶೋಕ್, ಶಿವರಾಂ, ಉನ್ನತಿ, ಕೃಷ್ಣ ಯಟರ್ನ್, ನಾರಾಯಣ್ ಸ್ವಾಮಿ, ಲಾಸ್ಯ ನಾಗರಾಜ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ಪುನೀತ ನಮನ: ಕಣ್ಣೀರು ತರಿಸಿತು ಸುದೀಪ್​ ಧ್ವನಿಯಲ್ಲಿ ಮೂಡಿಬಂದ ಪುನೀತ್​ ವಿಡಿಯೋ

‘ದೃಶ್ಯ 2’ ಟ್ರೇಲರ್​ ರಿಲೀಸ್​ ಕಾರ್ಯಕ್ರಮಕ್ಕೆ ಬಂದ ಕಿಚ್ಚ ಸುದೀಪ್​; ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 8:41 pm, Fri, 26 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ