ಪ್ರತಾಪ್​ಗೆ ಸಂಕಷ್ಟ; 49 ಲಕ್ಷ ರೂ. ಮಾನನಷ್ಟ ಕೇಸ್ ಹಾಕಲು ಮುಂದಾದ ಅಧಿಕಾರಿ

ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಕಷ್ಟಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಆಗ ಪ್ರತಾಪ್ ಅವರು ಒಂದು ಘಟನೆ ಬಗ್ಗೆ ಮಾತನಾಡಿದ್ದರು. ಈ ಕುರಿತು ಕೇಸ್ ಹಾಕಲಾಗುತ್ತಿದೆ.

ಪ್ರತಾಪ್​ಗೆ ಸಂಕಷ್ಟ; 49 ಲಕ್ಷ ರೂ. ಮಾನನಷ್ಟ ಕೇಸ್ ಹಾಕಲು ಮುಂದಾದ ಅಧಿಕಾರಿ
ಡ್ರೋನ್ ಪ್ರತಾಪ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 18, 2024 | 1:29 PM

ಬಿಗ್ ಬಾಸ್ ಮನೆಯಲ್ಲಿರುವ ಡ್ರೋನ್ ಪ್ರತಾಪ್​ಗೆ (Drone Prathap) ಸಂಕಷ್ಟ ಎದುರಾಗಿದೆ. ಮಾನನಷ್ಟ ಪರಿಹಾರ ಕೋರಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ್ ಅವರು ಪ್ರತಾಪ್ ವಿರುದ್ಧ ಇಂದು (ಜನವರಿ 18) ದಾವೆ ಹೂಡಲಿದ್ದಾರೆ. 49 ಲಕ್ಷ ರೂಪಾಯಿ ಪರಿಹಾರ ಬೇಕು ಎಂದು ಅವರು ಕೇಸ್ ಹಾಕಲಿದ್ದಾರೆ. ಈ ಹಿಂದೆ ಅವರು ವಕೀಲರ ಮೂಲಕ ಲೀಗಲ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಪರಿಹಾರ ಕೋರಿ ಮಾನಹಾನಿ ಕೇಸ್ ಹಾಕುತ್ತಿದ್ದಾರೆ.

ಪ್ರತಾಪ್ ಅವರು ಡ್ರೋನ್ ತಯಾರಿಕೆ ವಿಚಾರದಲ್ಲಿ ಸಾಕಷ್ಟು ಸುಳ್ಳು ಹೇಳಿದ್ದಾರೆ ಎಂದು ಅವರ ವಿರುದ್ಧ ಆರೋಪಗಳು ಬಂದವು. ಆದರೆ, ಬಿಗ್ ಬಾಸ್​ಗೆ ತೆರಳಿದ ಬಳಿಕ ಅವರ ಬಗ್ಗೆ ಇದ್ದ ಅಭಿಪ್ರಾಯ ಬದಲಾಯಿತು. ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಸಾಕಷ್ಟು ಫ್ಯಾನ್​ಪೇಜ್​ಗಳು ಸೃಷ್ಟಿ ಆದವು. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಕಷ್ಟಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಆಗ ಪ್ರತಾಪ್ ಅವರು ಒಂದು ಘಟನೆ ಬಗ್ಗೆ ಮಾತನಾಡಿದ್ದರು.

‘ಕೊವಿಡ್ ಸಮಯದಲ್ಲಿ ನಾನು ಸಾಕಷ್ಟು ಚಿತ್ರ ಹಿಂಸೆ ಅನುಭವಿಸಿದ್ದೆ. ಕ್ವಾರಂಟೈನ್ ಟೈಮ್​ನಲ್ಲಿ ಅಧಿಕಾರಿಗಳು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರು. ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಒತ್ತಾಯಪೂರ್ವಕವಾಗಿ ಸಹಿ ಮಾಡುವಂತೆ ಹೇಳಿದ್ದರು’ ಎಂಬಿತ್ಯಾದಿ ಆರೋಪಗಳನ್ನು ಮಾಡಿ ಕಣ್ಣೀರು ಹಾಕಿದ್ದರು. ಈ ಕಾರಣಕ್ಕೆ ಅವರ ಮೇಲೆ ಕೇಸ್ ಹಾಕಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜನವರಿ 27 ಹಾಗೂ 28ರಂದು ಫಿನಾಲೆ ನಡೆಯಲಿದೆ. ಈಗಿರುವ ಏಳು ಸ್ಪರ್ಧಿಗಳ ಪೈಕಿ ಪ್ರತಾಪ್ ಕೂಡ ರೇಸ್​ನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Thu, 18 January 24

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ