AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ಗೆ ಸಂಕಷ್ಟ; 49 ಲಕ್ಷ ರೂ. ಮಾನನಷ್ಟ ಕೇಸ್ ಹಾಕಲು ಮುಂದಾದ ಅಧಿಕಾರಿ

ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಕಷ್ಟಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಆಗ ಪ್ರತಾಪ್ ಅವರು ಒಂದು ಘಟನೆ ಬಗ್ಗೆ ಮಾತನಾಡಿದ್ದರು. ಈ ಕುರಿತು ಕೇಸ್ ಹಾಕಲಾಗುತ್ತಿದೆ.

ಪ್ರತಾಪ್​ಗೆ ಸಂಕಷ್ಟ; 49 ಲಕ್ಷ ರೂ. ಮಾನನಷ್ಟ ಕೇಸ್ ಹಾಕಲು ಮುಂದಾದ ಅಧಿಕಾರಿ
ಡ್ರೋನ್ ಪ್ರತಾಪ್
Follow us
Mangala RR
| Updated By: ರಾಜೇಶ್ ದುಗ್ಗುಮನೆ

Updated on:Jan 18, 2024 | 1:29 PM

ಬಿಗ್ ಬಾಸ್ ಮನೆಯಲ್ಲಿರುವ ಡ್ರೋನ್ ಪ್ರತಾಪ್​ಗೆ (Drone Prathap) ಸಂಕಷ್ಟ ಎದುರಾಗಿದೆ. ಮಾನನಷ್ಟ ಪರಿಹಾರ ಕೋರಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ್ ಅವರು ಪ್ರತಾಪ್ ವಿರುದ್ಧ ಇಂದು (ಜನವರಿ 18) ದಾವೆ ಹೂಡಲಿದ್ದಾರೆ. 49 ಲಕ್ಷ ರೂಪಾಯಿ ಪರಿಹಾರ ಬೇಕು ಎಂದು ಅವರು ಕೇಸ್ ಹಾಕಲಿದ್ದಾರೆ. ಈ ಹಿಂದೆ ಅವರು ವಕೀಲರ ಮೂಲಕ ಲೀಗಲ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಪರಿಹಾರ ಕೋರಿ ಮಾನಹಾನಿ ಕೇಸ್ ಹಾಕುತ್ತಿದ್ದಾರೆ.

ಪ್ರತಾಪ್ ಅವರು ಡ್ರೋನ್ ತಯಾರಿಕೆ ವಿಚಾರದಲ್ಲಿ ಸಾಕಷ್ಟು ಸುಳ್ಳು ಹೇಳಿದ್ದಾರೆ ಎಂದು ಅವರ ವಿರುದ್ಧ ಆರೋಪಗಳು ಬಂದವು. ಆದರೆ, ಬಿಗ್ ಬಾಸ್​ಗೆ ತೆರಳಿದ ಬಳಿಕ ಅವರ ಬಗ್ಗೆ ಇದ್ದ ಅಭಿಪ್ರಾಯ ಬದಲಾಯಿತು. ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಸಾಕಷ್ಟು ಫ್ಯಾನ್​ಪೇಜ್​ಗಳು ಸೃಷ್ಟಿ ಆದವು. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಕಷ್ಟಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಆಗ ಪ್ರತಾಪ್ ಅವರು ಒಂದು ಘಟನೆ ಬಗ್ಗೆ ಮಾತನಾಡಿದ್ದರು.

‘ಕೊವಿಡ್ ಸಮಯದಲ್ಲಿ ನಾನು ಸಾಕಷ್ಟು ಚಿತ್ರ ಹಿಂಸೆ ಅನುಭವಿಸಿದ್ದೆ. ಕ್ವಾರಂಟೈನ್ ಟೈಮ್​ನಲ್ಲಿ ಅಧಿಕಾರಿಗಳು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರು. ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಒತ್ತಾಯಪೂರ್ವಕವಾಗಿ ಸಹಿ ಮಾಡುವಂತೆ ಹೇಳಿದ್ದರು’ ಎಂಬಿತ್ಯಾದಿ ಆರೋಪಗಳನ್ನು ಮಾಡಿ ಕಣ್ಣೀರು ಹಾಕಿದ್ದರು. ಈ ಕಾರಣಕ್ಕೆ ಅವರ ಮೇಲೆ ಕೇಸ್ ಹಾಕಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜನವರಿ 27 ಹಾಗೂ 28ರಂದು ಫಿನಾಲೆ ನಡೆಯಲಿದೆ. ಈಗಿರುವ ಏಳು ಸ್ಪರ್ಧಿಗಳ ಪೈಕಿ ಪ್ರತಾಪ್ ಕೂಡ ರೇಸ್​ನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Thu, 18 January 24

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ