AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್​ಗೆ ಸಂಕಷ್ಟ; 49 ಲಕ್ಷ ರೂ. ಮಾನನಷ್ಟ ಕೇಸ್ ಹಾಕಲು ಮುಂದಾದ ಅಧಿಕಾರಿ

ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಕಷ್ಟಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಆಗ ಪ್ರತಾಪ್ ಅವರು ಒಂದು ಘಟನೆ ಬಗ್ಗೆ ಮಾತನಾಡಿದ್ದರು. ಈ ಕುರಿತು ಕೇಸ್ ಹಾಕಲಾಗುತ್ತಿದೆ.

ಪ್ರತಾಪ್​ಗೆ ಸಂಕಷ್ಟ; 49 ಲಕ್ಷ ರೂ. ಮಾನನಷ್ಟ ಕೇಸ್ ಹಾಕಲು ಮುಂದಾದ ಅಧಿಕಾರಿ
ಡ್ರೋನ್ ಪ್ರತಾಪ್
Mangala RR
| Edited By: |

Updated on:Jan 18, 2024 | 1:29 PM

Share

ಬಿಗ್ ಬಾಸ್ ಮನೆಯಲ್ಲಿರುವ ಡ್ರೋನ್ ಪ್ರತಾಪ್​ಗೆ (Drone Prathap) ಸಂಕಷ್ಟ ಎದುರಾಗಿದೆ. ಮಾನನಷ್ಟ ಪರಿಹಾರ ಕೋರಿ ಬಿಬಿಎಂಪಿ ನೋಡಲ್ ಅಧಿಕಾರಿ ಪ್ರಯಾಗ್ ಅವರು ಪ್ರತಾಪ್ ವಿರುದ್ಧ ಇಂದು (ಜನವರಿ 18) ದಾವೆ ಹೂಡಲಿದ್ದಾರೆ. 49 ಲಕ್ಷ ರೂಪಾಯಿ ಪರಿಹಾರ ಬೇಕು ಎಂದು ಅವರು ಕೇಸ್ ಹಾಕಲಿದ್ದಾರೆ. ಈ ಹಿಂದೆ ಅವರು ವಕೀಲರ ಮೂಲಕ ಲೀಗಲ್ ನೋಟಿಸ್ ಜಾರಿಗೊಳಿಸಿದ್ದರು. ಇದೀಗ ಪರಿಹಾರ ಕೋರಿ ಮಾನಹಾನಿ ಕೇಸ್ ಹಾಕುತ್ತಿದ್ದಾರೆ.

ಪ್ರತಾಪ್ ಅವರು ಡ್ರೋನ್ ತಯಾರಿಕೆ ವಿಚಾರದಲ್ಲಿ ಸಾಕಷ್ಟು ಸುಳ್ಳು ಹೇಳಿದ್ದಾರೆ ಎಂದು ಅವರ ವಿರುದ್ಧ ಆರೋಪಗಳು ಬಂದವು. ಆದರೆ, ಬಿಗ್ ಬಾಸ್​ಗೆ ತೆರಳಿದ ಬಳಿಕ ಅವರ ಬಗ್ಗೆ ಇದ್ದ ಅಭಿಪ್ರಾಯ ಬದಲಾಯಿತು. ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಸಾಕಷ್ಟು ಫ್ಯಾನ್​ಪೇಜ್​ಗಳು ಸೃಷ್ಟಿ ಆದವು. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ. ಇತ್ತೀಚೆಗೆ ತಮ್ಮ ಜೀವನದಲ್ಲಿ ನಡೆದ ಕಷ್ಟಗಳನ್ನು ಹೇಳಿಕೊಳ್ಳಲು ಬಿಗ್ ಬಾಸ್ ಅವಕಾಶ ನೀಡಿದ್ದರು. ಆಗ ಪ್ರತಾಪ್ ಅವರು ಒಂದು ಘಟನೆ ಬಗ್ಗೆ ಮಾತನಾಡಿದ್ದರು.

‘ಕೊವಿಡ್ ಸಮಯದಲ್ಲಿ ನಾನು ಸಾಕಷ್ಟು ಚಿತ್ರ ಹಿಂಸೆ ಅನುಭವಿಸಿದ್ದೆ. ಕ್ವಾರಂಟೈನ್ ಟೈಮ್​ನಲ್ಲಿ ಅಧಿಕಾರಿಗಳು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರು. ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಒತ್ತಾಯಪೂರ್ವಕವಾಗಿ ಸಹಿ ಮಾಡುವಂತೆ ಹೇಳಿದ್ದರು’ ಎಂಬಿತ್ಯಾದಿ ಆರೋಪಗಳನ್ನು ಮಾಡಿ ಕಣ್ಣೀರು ಹಾಕಿದ್ದರು. ಈ ಕಾರಣಕ್ಕೆ ಅವರ ಮೇಲೆ ಕೇಸ್ ಹಾಕಲು ಸಿದ್ಧತೆ ನಡೆದಿದೆ.

ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಜನವರಿ 27 ಹಾಗೂ 28ರಂದು ಫಿನಾಲೆ ನಡೆಯಲಿದೆ. ಈಗಿರುವ ಏಳು ಸ್ಪರ್ಧಿಗಳ ಪೈಕಿ ಪ್ರತಾಪ್ ಕೂಡ ರೇಸ್​ನಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Thu, 18 January 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ