UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು […]

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB
ಸಾಧು ಶ್ರೀನಾಥ್​ Edited By:

Updated on: Oct 21, 2020 | 4:43 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಯಾವ ವಿಚಾರಕ್ಕೆ ನಟಿ ಸಂಜನಾ ನಿಮಗೆ ಹಣ ಕಳುಹಿಸಿದ್ದಳು? ನಿಮ್ಮ ಮತ್ತು ಸಂಜನಾ ನಡುವೆ ಏನೆಲ್ಲಾ ವ್ಯವಹಾರ ನಡೆದಿದೆ? ಎಂದು ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳು ವಿ.ಗಣೇಶ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಸ್ಯಾಂಡಲ್​ವುಡ್​ Drugs ಜಾಲ: ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕನಿಗೆ CCB ಬುಲಾವ್​

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us