AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rapido: ರ‍್ಯಾಪಿಡೋ ಚಾಲಕನ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಕೇಸ್​ ಹಾಕಿದ ನಟಿ​; ತನಿಖೆಯಿಂದ ಸತ್ಯ ಬಯಲು

Bengaluru Crime: ರ‍್ಯಾಪಿಡೋ ಚಾಲಕನಿಂದ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಯುವತಿ ದೂರು ನೀಡಿದ್ದರು. ದೇಹದ ಅಂಗಾಂಗಗಳನ್ನು ಮುಟ್ಟಿ, ಅಸಭ್ಯವಾಗಿ ನಡೆದುಕೊಂಡ ಎಂದು ಅವರು ಆರೋಪಿಸಿದ್ದರು.

Rapido: ರ‍್ಯಾಪಿಡೋ ಚಾಲಕನ ವಿರುದ್ಧ ಸುಳ್ಳು ಲೈಂಗಿಕ ಕಿರುಕುಳ ಕೇಸ್​ ಹಾಕಿದ ನಟಿ​; ತನಿಖೆಯಿಂದ ಸತ್ಯ ಬಯಲು
ಡಬ್ಬಿಂಗ್ ಆರ್ಟಿಸ್ಟ್
TV9 Web
| Edited By: |

Updated on: Nov 16, 2022 | 3:39 PM

Share

ನಟಿ, ಮಾಡೆಲ್​ ಹಾಗೂ ಡಬ್ಬಿಂಗ್​ ಆರ್ಟಿಸ್ಟ್ (Dubbing Artist) ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯದ ಸುಳ್ಳು ದೂರು ನೀಡಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾತ್ರಿ ಸಮಯದಲ್ಲಿ ಓಡಾಡಲು ಜನರು ಭಯಪಡುವಂತಹ ವಾತಾವರಣ ಇದೆ. ಅದರ ನಡುವೆಯೂ ಸಾವಿರಾರು ಕ್ಯಾಬ್​, ಟ್ಯಾಕ್ಸಿ ಚಾಲಕರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ರ‍್ಯಾಪಿಡೋ ಬೈಕ್​ ಚಾಲಕನ (Rapido Driver) ಮೇಲೆ ಸುಳ್ಳು ಲೈಂಗಿಕ ದೌರ್ಜನ್ಯದ (Molestation) ಕೇಸ್​ ದಾಖಲಿಸಿರುವುದು ತಿಳಿದುಬಂದಿದೆ. ಬೆಂಗಳೂರಿನ ಹೆಣ್ಣೂರು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿ ಸುಳ್ಳು ದೂರು ನೀಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಏನಿದು ಘಟನೆ?

ಅಕ್ಟೋಬರ್​ 30ರ ರಾತ್ರಿ 10.30ರ ಸುಮಾರಿಗೆ ತಮ್ಮ ಮೇಲೆ ರ‍್ಯಾಪಿಡೋ ಚಾಲಕನಿಂದ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಯುವತಿಯು ದೂರು ನೀಡಿದ್ದರು. ರ‍್ಯಾಪಿಡೋ ಬುಕ್​ ಮಾಡಿಕೊಂಡು ಬರುವಾಗ ಚಾಲಕನು ತನ್ನ ದೇಹದ ಅಂಗಾಂಗಗಳನ್ನು ಮುಟ್ಟಿ, ಅಸಭ್ಯವಾಗಿ ನಡೆದುಕೊಂಡ ಎಂದು ಆ ದೂರಿನಲ್ಲಿ ಯುವತಿ ತಿಳಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದಾಗ ಬೇರೊಂದು ಕಹಾನಿ ತೆರೆದುಕೊಂಡಿದೆ.

ಇದನ್ನೂ ಓದಿ
Image
‘ತುಟಿಗೆ ಕಿಸ್ ಮಾಡುತ್ತಿದ್ದ, ತೊಡೆ ಸವರುತ್ತಿದ್ದ’; ಕುಬ್ರಾ ಸೇಠ್​​ಗೆ ಬೆಂಗಳೂರು ಹೋಟೆಲ್​ನಲ್ಲಾಗಿತ್ತು ಲೈಂಗಿಕ ದೌರ್ಜನ್ಯ
Image
ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಸೊಸೆ ಆರೋಪ: ಆತ್ಮಹತ್ಯೆ ಮಾಡಿಕೊಂಡ ಉತ್ತರಾಖಂಡ್​​ ಮಾಜಿ ಸಚಿವ ರಾಜೇಂದ್ರ ಬಹುಗುಣ
Image
ಬೆಳಗಾವಿ: ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ಚಪ್ಪಲಿ ಏಟು ನೀಡಿ ಬುದ್ದಿ ಕಲಿಸಿದ ಅತಿಥಿ ಉಪನ್ಯಾಸಕಿಯರು, ವಿಡಿಯೋ ವೈರಲ್
Image
ಪ್ರಜ್ಞೆ ತಪ್ಪಿಸಿ ಲೈಂಗಿಕ ಕಿರುಕುಳ ಆರೋಪ; ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಮಹಿಳೆ

ಅಸಲಿಗೆ ಅಲ್ಲಿ ನಡೆದಿದ್ದು ಏನು?

ಯುವತಿ ನೀಡಿರುವುದು ಸುಳ್ಳು ದೂರು ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ದೂರಿನಲ್ಲಿ ಯುವತಿ ಹೇಳಿದ ರೀತಿ ಆ ದಿನ ಏನೂ ನಡೆದಿರಲಿಲ್ಲ. ಅವರು ರ‍್ಯಾಪಿಡೋ ಬೈಕ್​ ಬುಕ್​ ಮಾಡಿದ್ದು ನಿಜ. ಆದರೆ ಕೆಲವೇ ಹೊತ್ತಿನಲ್ಲಿ ಯುವತಿಯೇ ಕ್ಯಾನ್ಸಲ್​ ಮಾಡಿಕೊಂಡಿದ್ದಾರೆ. ಕ್ಯಾನ್ಸಲ್​ ಆಗಿದ್ದರಿಂದ ರ‍್ಯಾಪಿಡೋ ಚಾಲಕ ಆ ಚಾಗಕ್ಕೆ ಬರಲೇ ಇಲ್ಲ ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಹಾಗಾಗಿ ಚಾಲಕನನ್ನು ಬಂಧಿಸಲಿಲ್ಲ.

ಪೊಲೀಸರು ಹೇಳೋದೇನು?

ಈ ಘಟನೆಗೆ ಸಂಬಂಧಿಸಿದಂತೆ ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರು ಹೇಳಿಕೆ ನೀಡಿದ್ದಾರೆ. ‘ಮಹಿಳೆ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಆ ವ್ಯಕ್ತಿ ಅಲ್ಲಿಗೆ ಬಂದಿದ್ದಕ್ಕೆ ಯಾವುದೇ ಪುರಾವೆ ಇಲ್ಲ. ಹಾಗಾಗಿ‌ ಇದು ಸುಳ್ಳು ಕೇಸ್ ಅನ್ನೋದು ಗೊತ್ತಾಗಿದೆ. ಅವರು ಯಾವ ಕಾರಣಕ್ಕೆ ಸುಳ್ಳು ದೂರು ದಾಖಲಿಸಿದ್ರೋ ಗೊತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ