AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ

ಸಿನಿಮಾ ಜನರಿಗೆ ತಲುಪಬೇಕು ಎಂದರೆ ಅದಕ್ಕೆ ಪ್ರಚಾರ ಮುಖ್ಯವಾಗುತ್ತದೆ. ಪ್ರಚಾರವಿಲ್ಲದೆ ಸಿನಿಮಾ ರಿಲೀಸ್ ಮಾಡೋಕೆ ಸಾಧ್ಯವಿಲ್ಲ. ಈ ಕಾರಣದಿಂದ ‘ಕದ್ದ ಚಿತ್ರ’ ತಂಡ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಸಂದರ್ಭದಲ್ಲಿ ವಿಜಯ್ ರಾಘವೇಂದ್ರ ಅವರು ಪ್ರಚಾರದಲ್ಲಿ ಭಾಗಿ ಆಗಲು ಸಾಧ್ಯವಿಲ್ಲ. ಹೀಗಾಗಿ, ಈ ನಿರ್ಧಾರಕ್ಕೆ ಬರಲಾಗಿದೆ.

ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ
ಸ್ಪಂದನಾ
Follow us
ರಾಜೇಶ್ ದುಗ್ಗುಮನೆ
|

Updated on: Aug 21, 2023 | 12:11 PM

ನಟಿ ಸ್ಪಂದನಾ ವಿಜಯ್ ರಾಘವೇಂದ್ರ (Vijay Raghavendra) ಅವರು ಆಗಸ್ಟ್ 6ರಂದು ಮೃತಪಟ್ಟರು. ಥೈಲ್ಯಾಂಡ್ ಪ್ರವಾಸ ತೆರಳಿದ್ದ ಅವರು ಮರಳಿ ಭಾರತಕ್ಕೆ ಜೀವಂತ ಬರಲೇ ಇಲ್ಲ. ಈ ದುಃಖ ಇಡೀ ಕುಟುಂಬವನ್ನು ಆವರಿಸಿದೆ. ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕಳೆದುಕೊಂಡ ವಿಜಯ್ ಅವರು ತೀವ್ರ ನೋವಿನಲ್ಲಿದ್ದಾರೆ. ಸದ್ಯ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಈ ಮಧ್ಯೆ ಆಗಸ್ಟ್ 25ರಂದು ರಿಲೀಸ್ ಆಗಬೇಕಿದ್ದ ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಸಿನಿಮಾ (Kadda Chitra Movie) ರಿಲೀಸ್ ದಿನಾಂಕವನ್ನು ತಂಡ ಮುಂದೂಡಿಕೊಂಡಿದೆ. ಈ ಮೂಲಕ ಸ್ಪಂದನಾಗೆ ಚಿತ್ರತಂಡ ಗೌರವ ಸೂಚಿಸಿದೆ.

ಸಿನಿಮಾ ಜನರಿಗೆ ತಲುಪಬೇಕು ಎಂದರೆ ಅದಕ್ಕೆ ಪ್ರಚಾರ ಮುಖ್ಯವಾಗುತ್ತದೆ. ಪ್ರಚಾರವಿಲ್ಲದೆ ಸಿನಿಮಾ ರಿಲೀಸ್ ಮಾಡೋಕೆ ಸಾಧ್ಯವಿಲ್ಲ. ಈ ಕಾರಣದಿಂದ ‘ಕದ್ದ ಚಿತ್ರ’ ತಂಡ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಸಂದರ್ಭದಲ್ಲಿ ವಿಜಯ್ ರಾಘವೇಂದ್ರ ಅವರು ಪ್ರಚಾರದಲ್ಲಿ ಭಾಗಿ ಆಗಲು ಸಾಧ್ಯವಿಲ್ಲ. ಹೀಗಾಗಿ, ಈ ನಿರ್ಧಾರಕ್ಕೆ ಬರಲಾಗಿದೆ.

‘ಸ್ಪಂದನಾ ಅಕ್ಕ, ಪರಿಶುದ್ಧ ಹಾಗೂ ಒಂದು ಸುಂದರವಾದ ಆತ್ಮ. ಬಹುಬೇಗ ನಮ್ಮನ್ನೆಲ್ಲಾ ಶಾಶ್ವತವಾಗಿ ತೊರೆದು ಅನಂತದೆಡೆಗೆ ಸಾಗಿದ್ದೀರಿ. ನೀವಿಲ್ಲದ ನಮ್ಮೆಲ್ಲರ ಪ್ರಪಂಚಕ್ಕೆ ಮಂಕು ಕವಿದಂತಾಗಿದೆ. ಆದರೂ ನೀವಿಟ್ಟ ಮಾರ್ಗದರ್ಶನ ನಮ್ಮೆಲ್ಲರನ್ನು ಬೆಳಕಿನತ್ತ ಕೊಂಡೊಯ್ಯುತ್ತಿದೆ. ಎಲ್ಲರೊಂದಿಗಿನ ನಿಮ್ಮ ಉಪಸ್ಥಿತಿ, ಸಹನೆ, ಉದಾರತೆ ಸದಾ ನೆನಪಿನಲ್ಲಿ ಉಳಿಯುವಂಥದ್ದು. ನಮ್ಮೆಲ್ಲರ ಆತ್ಮೀಯರಾದಂಥ ವಿಜಯ್ ರಾಘವೇಂದ್ರ ಅವರಿಗೆ ನಿಮ್ಮ ಅಗಲಿಕೆಯಿಂದಾಗಿರುವ ನಷ್ಟ, ದುಃಖ, ನಿಮ್ಮ ಅನುಪಸ್ಥಿತಿ, ನೋವಿನ ತೀವ್ರತೆ ತುಂಬಾ ಆಳವಾದದ್ದು. ಅವರಿಗೆ ದೇವರು ಈ ದುಃಖದಿಂದ ಹೊರಬರುವ ಶಕ್ತಿ ನೀಡಲಿ’ ಎಂದು ಬರೆದುಕೊಂಡಿದೆ ಚಿತ್ರತಂಡ.

ಇದನ್ನೂ ಓದಿ: ಸ್ಪಂದನಾ ನಿಧನದ ಬಳಿಕ ಹೇಗಿತ್ತು ವಿಜಯ್ ರಾಘವೇಂದ್ರ ಪರಿಸ್ಥಿತಿ? ಯಾರಿಗೂ ಬೇಡ ಈ ನೋವು

‘ಒಂದಂತೂ ನಮ್ಮಕಡೆಯಿಂದ ಹೇಳಬಹುದಾದ್ದು ಏನೆಂದರೆ ವಿಜಯ್ ರಾಘವೇಂದ್ರ ಸರ್ ನಾವೆಂದೂ ಸದಾ ನಿಮ್ಮ ಜೊತೆ ಇರುತ್ತೇವೆ. ಈ ಮೊದಲೇ ನಿಗದಿಯಾದಂತೆ ನಮ್ಮ ‘ಕದ್ದ ಚಿತ್ರ’ ಇದೇ ತಿಂಗಳು 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಸ್ಪಂದನಾ ಅಕ್ಕನ ಅಗಲಿಕೆಯಿಂದ ಬಿಡುಗಡೆಯ ದಿನಾಂಕವನ್ನು ಮುಂದೂಡುತ್ತಿದ್ದೇವೆ. ಶೀಘ್ರದಲ್ಲಿ ಹೊಸ ದಿನಾಂಕ ಘೋಷಿಸುತ್ತೇವೆ’ ಎಂದು ಬರೆದುಕೊಂಡಿದೆ ಚಿತ್ರತಂಡ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
Daily Horoscope: ಉದ್ಯೋಗ ಬದಲಾವಣೆ ಸಾಧ್ಯತೆ, ಆದಾಯದಲ್ಲಿ ಏರಿಕೆ
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್