AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ

ಸಿನಿಮಾ ಜನರಿಗೆ ತಲುಪಬೇಕು ಎಂದರೆ ಅದಕ್ಕೆ ಪ್ರಚಾರ ಮುಖ್ಯವಾಗುತ್ತದೆ. ಪ್ರಚಾರವಿಲ್ಲದೆ ಸಿನಿಮಾ ರಿಲೀಸ್ ಮಾಡೋಕೆ ಸಾಧ್ಯವಿಲ್ಲ. ಈ ಕಾರಣದಿಂದ ‘ಕದ್ದ ಚಿತ್ರ’ ತಂಡ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಸಂದರ್ಭದಲ್ಲಿ ವಿಜಯ್ ರಾಘವೇಂದ್ರ ಅವರು ಪ್ರಚಾರದಲ್ಲಿ ಭಾಗಿ ಆಗಲು ಸಾಧ್ಯವಿಲ್ಲ. ಹೀಗಾಗಿ, ಈ ನಿರ್ಧಾರಕ್ಕೆ ಬರಲಾಗಿದೆ.

ಸ್ಪಂದನಾ ಅಗಲಿಕೆ ಹಿನ್ನೆಲೆ; ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ರಿಲೀಸ್ ದಿನಾಂಕ ಮುಂದಕ್ಕೆ
ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on: Aug 21, 2023 | 12:11 PM

Share

ನಟಿ ಸ್ಪಂದನಾ ವಿಜಯ್ ರಾಘವೇಂದ್ರ (Vijay Raghavendra) ಅವರು ಆಗಸ್ಟ್ 6ರಂದು ಮೃತಪಟ್ಟರು. ಥೈಲ್ಯಾಂಡ್ ಪ್ರವಾಸ ತೆರಳಿದ್ದ ಅವರು ಮರಳಿ ಭಾರತಕ್ಕೆ ಜೀವಂತ ಬರಲೇ ಇಲ್ಲ. ಈ ದುಃಖ ಇಡೀ ಕುಟುಂಬವನ್ನು ಆವರಿಸಿದೆ. ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕಳೆದುಕೊಂಡ ವಿಜಯ್ ಅವರು ತೀವ್ರ ನೋವಿನಲ್ಲಿದ್ದಾರೆ. ಸದ್ಯ ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡಿದ್ದಾರೆ. ಈ ಮಧ್ಯೆ ಆಗಸ್ಟ್ 25ರಂದು ರಿಲೀಸ್ ಆಗಬೇಕಿದ್ದ ವಿಜಯ್ ರಾಘವೇಂದ್ರ ನಟನೆಯ ‘ಕದ್ದ ಚಿತ್ರ’ ಸಿನಿಮಾ (Kadda Chitra Movie) ರಿಲೀಸ್ ದಿನಾಂಕವನ್ನು ತಂಡ ಮುಂದೂಡಿಕೊಂಡಿದೆ. ಈ ಮೂಲಕ ಸ್ಪಂದನಾಗೆ ಚಿತ್ರತಂಡ ಗೌರವ ಸೂಚಿಸಿದೆ.

ಸಿನಿಮಾ ಜನರಿಗೆ ತಲುಪಬೇಕು ಎಂದರೆ ಅದಕ್ಕೆ ಪ್ರಚಾರ ಮುಖ್ಯವಾಗುತ್ತದೆ. ಪ್ರಚಾರವಿಲ್ಲದೆ ಸಿನಿಮಾ ರಿಲೀಸ್ ಮಾಡೋಕೆ ಸಾಧ್ಯವಿಲ್ಲ. ಈ ಕಾರಣದಿಂದ ‘ಕದ್ದ ಚಿತ್ರ’ ತಂಡ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದೆ. ಈ ಸಂದರ್ಭದಲ್ಲಿ ವಿಜಯ್ ರಾಘವೇಂದ್ರ ಅವರು ಪ್ರಚಾರದಲ್ಲಿ ಭಾಗಿ ಆಗಲು ಸಾಧ್ಯವಿಲ್ಲ. ಹೀಗಾಗಿ, ಈ ನಿರ್ಧಾರಕ್ಕೆ ಬರಲಾಗಿದೆ.

‘ಸ್ಪಂದನಾ ಅಕ್ಕ, ಪರಿಶುದ್ಧ ಹಾಗೂ ಒಂದು ಸುಂದರವಾದ ಆತ್ಮ. ಬಹುಬೇಗ ನಮ್ಮನ್ನೆಲ್ಲಾ ಶಾಶ್ವತವಾಗಿ ತೊರೆದು ಅನಂತದೆಡೆಗೆ ಸಾಗಿದ್ದೀರಿ. ನೀವಿಲ್ಲದ ನಮ್ಮೆಲ್ಲರ ಪ್ರಪಂಚಕ್ಕೆ ಮಂಕು ಕವಿದಂತಾಗಿದೆ. ಆದರೂ ನೀವಿಟ್ಟ ಮಾರ್ಗದರ್ಶನ ನಮ್ಮೆಲ್ಲರನ್ನು ಬೆಳಕಿನತ್ತ ಕೊಂಡೊಯ್ಯುತ್ತಿದೆ. ಎಲ್ಲರೊಂದಿಗಿನ ನಿಮ್ಮ ಉಪಸ್ಥಿತಿ, ಸಹನೆ, ಉದಾರತೆ ಸದಾ ನೆನಪಿನಲ್ಲಿ ಉಳಿಯುವಂಥದ್ದು. ನಮ್ಮೆಲ್ಲರ ಆತ್ಮೀಯರಾದಂಥ ವಿಜಯ್ ರಾಘವೇಂದ್ರ ಅವರಿಗೆ ನಿಮ್ಮ ಅಗಲಿಕೆಯಿಂದಾಗಿರುವ ನಷ್ಟ, ದುಃಖ, ನಿಮ್ಮ ಅನುಪಸ್ಥಿತಿ, ನೋವಿನ ತೀವ್ರತೆ ತುಂಬಾ ಆಳವಾದದ್ದು. ಅವರಿಗೆ ದೇವರು ಈ ದುಃಖದಿಂದ ಹೊರಬರುವ ಶಕ್ತಿ ನೀಡಲಿ’ ಎಂದು ಬರೆದುಕೊಂಡಿದೆ ಚಿತ್ರತಂಡ.

ಇದನ್ನೂ ಓದಿ: ಸ್ಪಂದನಾ ನಿಧನದ ಬಳಿಕ ಹೇಗಿತ್ತು ವಿಜಯ್ ರಾಘವೇಂದ್ರ ಪರಿಸ್ಥಿತಿ? ಯಾರಿಗೂ ಬೇಡ ಈ ನೋವು

‘ಒಂದಂತೂ ನಮ್ಮಕಡೆಯಿಂದ ಹೇಳಬಹುದಾದ್ದು ಏನೆಂದರೆ ವಿಜಯ್ ರಾಘವೇಂದ್ರ ಸರ್ ನಾವೆಂದೂ ಸದಾ ನಿಮ್ಮ ಜೊತೆ ಇರುತ್ತೇವೆ. ಈ ಮೊದಲೇ ನಿಗದಿಯಾದಂತೆ ನಮ್ಮ ‘ಕದ್ದ ಚಿತ್ರ’ ಇದೇ ತಿಂಗಳು 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಸ್ಪಂದನಾ ಅಕ್ಕನ ಅಗಲಿಕೆಯಿಂದ ಬಿಡುಗಡೆಯ ದಿನಾಂಕವನ್ನು ಮುಂದೂಡುತ್ತಿದ್ದೇವೆ. ಶೀಘ್ರದಲ್ಲಿ ಹೊಸ ದಿನಾಂಕ ಘೋಷಿಸುತ್ತೇವೆ’ ಎಂದು ಬರೆದುಕೊಂಡಿದೆ ಚಿತ್ರತಂಡ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು