AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಕ್ಕ’ ನಿರ್ಮಾಪಕರ ಹೊಸ ಸಿನಿಮಾದಲ್ಲಿ ಯುವ, ರಿತನ್ಯಾ ಜೋಡಿ; ಸೂರಿ ನಿರ್ದೇಶನ

ಅಕ್ಷಯ ತೃತೀಯ ಪ್ರಯುಕ್ತ ಯುವ ರಾಜ್​ಕುಮಾರ್ ಅವರ ಹೊಸ ಸಿನಿಮಾಗೆ ಚಾಲನೆ ನೀಡಲಾಗಿದೆ. ಈ ಸಿನಿಮಾದಲ್ಲಿ ಅವರಿಗೆ ರಿತನ್ಯಾ ವಿಜಯ್ ಕುಮಾರ್ ಜೋಡಿ ಆಗುತ್ತಿದ್ದಾರೆ. ದುನಿಯಾ ಸೂರಿ ನಿರ್ದೇಶನ ಮಾಡಲಿದ್ದಾರೆ. ಪಿಆರ್‌ಕೆ ಪ್ರೊಡಕ್ಷನ್ಸ್, ಕೆಆರ್‌ಜಿ ಸ್ಟುಡಿಯೋಸ್, ಜಯಣ್ಣ ಫಿಲ್ಮ್ಸ್​ ಬ್ಯಾನರ್​ಗಳ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

‘ಎಕ್ಕ’ ನಿರ್ಮಾಪಕರ ಹೊಸ ಸಿನಿಮಾದಲ್ಲಿ ಯುವ, ರಿತನ್ಯಾ ಜೋಡಿ; ಸೂರಿ ನಿರ್ದೇಶನ
Yuva Rajkumar New Movie Muhurtha
ಮದನ್​ ಕುಮಾರ್​
|

Updated on: Apr 30, 2025 | 5:06 PM

Share

ನಟ ಯುವ ರಾಜ್‌ಕುಮಾರ್‌ (Yuva Rajkumar) ಮತ್ತು ನಿರ್ದೇಶಕ ಸೂರಿ (Duniya Suri) ಕಾಂಬಿನೇಷನ್​ನ ಹೊಸ ಸಿನಿಮಾಗೆ ಇಂದು (ಏಪ್ರಿಲ್ 30) ಅಧಿಕೃತ ಚಾಲನೆ ಸಿಕ್ಕಿದೆ. ಅಕ್ಷಯ ತೃತೀಯ ಪ್ರಯುಕ್ತ ಬೆಂಗಳೂರಿನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಳವಾಗಿ ಮುಹೂರ್ತ ಮಾಡಲಾಗಿದೆ. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರ ‘ಪಿಆರ್‌ಕೆ ಪ್ರೊಡಕ್ಷನ್ಸ್’, ಕಾರ್ತಿಕ್‌ ಗೌಡ-ಯೋಗಿ ಜಿ. ರಾಜ್‌ ಒಡೆತನದ ‘ಕೆಆರ್‌ಜಿ ಸ್ಟುಡಿಯೋಸ್’ ಮತ್ತು ಜಯಣ್ಣ-ಭೋಗೇಂದ್ರ ಒಡೆತನದ ‘ಜಯಣ್ಣ ಫಿಲ್ಮ್ಸ್​’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈಗಾಗಲೇ ಇದೇ ನಿರ್ಮಾಣ ಸಂಸ್ಥೆಗಳು ‘ಎಕ್ಕ’ ಚಿತ್ರಕ್ಕೆ ಕೂಡ ಬಂಡವಾಳ ಹೂಡುತ್ತಿವೆ.

ಯುವ ರಾಜ್‌ಕುಮಾರ್‌ ಹಾಗೂ ಸೂರಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಹೊಸ ಚಿತ್ರಕ್ಕೆ ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ ವಿಜಯ್ ಕುಮಾರ್ ನಾಯಕಿ ಆಗಿದ್ದಾರೆ. ಇಂದು ಮುಹೂರ್ತ ಸಮಾರಂಭಕ್ಕೆ ದುನಿಯಾ ವಿಜಯ್‌ ಬಂದು ಕ್ಲ್ಯಾಪ್‌ ಮಾಡಿದರು. ಪುನೀತ್ ರಾಜ್​ಕುಮಾರ್​ ಪುತ್ರಿ ಧೃತಿ ಅವರು ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು. ಈ ವೇಳೆ ಯುವ ರಾಜ್​ಕುಮಾರ್ ಕುಟುಂಬದ ಸದಸ್ಯರು, ಕಾರ್ತಿಕ್‌ ಗೌಡ, ಯೋಗಿ ಜಿ. ರಾಜ್‌, ಅಶ್ವಿನಿ ಪುನೀತ್‌ ರಾಜ್‌ಕುಮಾರ್‌, ಸೂರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ ಸೂರಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರು ಯುವ ರಾಜ್​ಕುಮಾರ್ ಜೊತೆ ಕೈ ಜೋಡಿಸಿರುವ ಕಾರಣದಿಂದ ಈ ಸಿನಿಮಾ ಮೇಲೆ ಕುತೂಹಲ ಜಾಸ್ತಿ ಆಗಿದೆ. ಯುವ ಹಾಗೂ ರಿತನ್ಯಾ ಜೋಡಿ ಬಗ್ಗೆಯೂ ನಿರೀಕ್ಷೆ ಇದೆ. ಈಗಾಗಲೇ ‘ಲ್ಯಾಂಡ್‌ ಲಾರ್ಡ್‌’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿರುವ ರಿತನ್ಯಾ ಅವರಿಗೆ ಇದು 2ನೇ ಸಿನಿಮಾ.

ಇದನ್ನೂ ಓದಿ
Image
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
Image
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
Image
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
Image
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಇದನ್ನೂ ಓದಿ: ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್

ಈ ಚಿತ್ರಕ್ಕೆ ದೀಪು ಎಸ್‌. ಕುಮಾರ್‌ ಸಂಕಲನ ಮಾಡಲಿದ್ದಾರೆ. ಚರಣ್‌ ರಾಜ್‌ ಅವರು ಸಂಗೀತ ನೀಡುತ್ತಿದ್ದಾರೆ. ಸಂತೋಷ್‌ ಅವರ ಕಲಾ ನಿರ್ದೇಶನ, ಶೇಖರ್‌ ಅವರ ಛಾಯಾಗ್ರಹಣ ಈ ಸಿನಿಮಾಗಿದೆ. ಮೇ ತಿಂಗಳ ಕೊನೆಯಲ್ಲಿ ಶೂಟಿಂಗ್‌ ಆರಂಭ ಆಗಲಿದೆ. ಯುವ ರಾಜ್​ಕುಮಾರ್​ ನಟನೆಯ 3ನೇ ಚಿತ್ರವಾಗಿ ಈ ಸಿನಿಮಾ ಮೂಡಿಬರುತ್ತಿದೆ. ಮೂರು ನಿರ್ಮಾಣ ಸಂಸ್ಥೆಗಳು ಒಟ್ಟಿಗೆ ಬಂಡವಾಳ ಹೂಡುತ್ತಿರುವುದರಿಂದ ಮೇಕಿಂಗ್​ನಲ್ಲಿ ಅದ್ದೂರಿತನವನ್ನು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!