AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rachita Ram: ‘ರಚಿತಾ ಎದೆಯಲ್ಲಿ ಮೋಸ ಇಲ್ಲ, ಅದಕ್ಕೆ ಇಷ್ಟು ವರ್ಷ ಇಂಡಸ್ಟ್ರಿಯಲ್ಲಿ ಇದ್ದಾರೆ’: ದುನಿಯಾ ವಿಜಯ್​

Monsoon Raaga: ರಚಿತಾ ರಾಮ್​ ಅವರನ್ನು ದುನಿಯಾ ವಿಜಯ್​ ಮತ್ತು ಡಾಲಿ ಧನಂಜಯ್​ ಅವರು ಬಾಯಿ ತುಂಬ ಹೊಗಳಿದ್ದಾರೆ. ಅವರಿಬ್ಬರ ಮಾತುಗಳನ್ನು ಕೇಳಿದ ಬಳಿಕ ರಚಿತಾ ಎದ್ದು ನಿಂತು ನಮಸ್ಕಾರ ಮಾಡಿದ್ದಾರೆ.

Rachita Ram: ‘ರಚಿತಾ ಎದೆಯಲ್ಲಿ ಮೋಸ ಇಲ್ಲ, ಅದಕ್ಕೆ ಇಷ್ಟು ವರ್ಷ ಇಂಡಸ್ಟ್ರಿಯಲ್ಲಿ ಇದ್ದಾರೆ’: ದುನಿಯಾ ವಿಜಯ್​
ಡಾಲಿ ಧನಂಜಯ್, ದುನಿಯಾ ವಿಜಯ್, ರಚಿತಾ ರಾಮ್
TV9 Web
| Edited By: |

Updated on:Sep 14, 2022 | 2:08 PM

Share

ನಟಿ ರಚಿತಾ ರಾಮ್​ (Rachita Ram) ಅವರಿಗೆ ಕನ್ನಡ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅನೇಕ ಸ್ಟಾರ್​ ನಟರ ಸಿನಿಮಾಗಳಲ್ಲಿ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಡಾಲಿ ಧನಂಜಯ್ (Daali Dhananjay)​ ಜೊತೆ ನಟಿಸಿರುವ ‘ಮಾನ್ಸೂನ್​ ರಾಗ’ ಸಿನಿಮಾ ಸೆಪ್ಟೆಂಬರ್​ 16ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ಪ್ರೀ-ರಿಲೀಸ್​ ಇವೆಂಟ್​ಗೆ ದುನಿಯಾ ವಿಜಯ್​ ಅವರು ಅತಿಥಿಯಾಗಿ ಬಂದಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಡಾಲಿ ಧನಂಜಯ್​ ಮತ್ತು ದುನಿಯಾ ವಿಜಯ್​ (Duniya Vijay) ಅವರು ಜೊತೆಯಾಗಿ ರಚಿತಾ ರಾಮ್​ ಗುಣಗಾನ ಮಾಡಿದ್ದಾರೆ. ‘ರಚಿತಾ ರಾಮ್​ ಬಡಬಡ ಅಂತ ಮಾತಾಡುತ್ತಾರೆ. ಅವರ ಎದೆಯಲ್ಲಿ ಮೋಸ ಇಲ್ಲ. ಅದಕ್ಕಾಗಿಯೇ ಇಷ್ಟು ವರ್ಷ ಚಿತ್ರರಂಗದಲ್ಲಿ ಉಳಿದುಕೊಂಡಿದ್ದಾರೆ. ಇನ್ನೂ ಸುಮಾರು ವರ್ಷ ಉಳಿದುಕೊಳ್ಳುತ್ತಾರೆ. ಅವರನ್ನು ನಾನು ತುಂಬ ಹತ್ತಿರದಿಂದ ನೋಡಿದ್ದೇನೆ. ಅವರ ಬಗ್ಗೆ ನನಗೆ ತುಂಬ ಗೌರವ ಇದೆ’ ಎಂದು ದುನಿಯಾ ವಿಜಯ್​ ಹೇಳಿದ್ದಾರೆ.

ವೇದಿಕೆ ಮೇಲೆ ಡಾಲಿ ಧನಂಜಯ್​ ಮತ್ತು ದುನಿಯಾ ವಿಜಯ್​ ಅವರು ಹೊಗಳುವಾಗ ಮುಂದಿನ ಸಾಲಿನಲ್ಲಿ ಕುಳಿತಿದ್ದ ರಚಿತಾ ರಾಮ್​ ಅವರು ಎದ್ದು ನಿಂತು ನಮಸ್ಕಾರ ಮಾಡಿದರು. ತಮ್ಮ ವೃತ್ತಿಜೀವನದ ಆರಂಭದ ದಿನಗಳಲ್ಲಿ ರಚಿತಾ ಅವರನ್ನು ನೋಡಲು ಧನಂಜಯ್​ ಅವರು ಒಂದಷ್ಟು ಸರ್ಕಸ್​ ಮಾಡುತ್ತಿದ್ದರು. ಆ ಬಗ್ಗೆ ಅವರು ಈಗ ಬಾಯಿ ಬಿಟ್ಟಿದ್ದಾರೆ. ‘ರಚಿತಾ ಇಂಡಸ್ಟ್ರಿಗೆ ಬಂದಾಗ ನಾನು ಮತ್ತು ವಿಖ್ಯಾತ್​ ಅವರು ಕತ್ರಿಗುಪ್ಪೆಯಲ್ಲಿರುವ ರಚಿತಾ ಮನೆ ಹತ್ತಿರ ಬೀಟ್​ ಹಾಕ್ತಾ ಇದ್ವಿ. ಅವರು ಕಾಣ್ತಾರಾ, ಡಿಂಪಲ್​ ಕಾಣುತ್ತಾ ಅಂತ ನೋಡಲು ಪ್ರಯತ್ನ ಮಾಡ್ತಿದ್ವಿ’ ಎಂದು ಡಾಲಿ ಹೇಳಿದ್ದಾರೆ.

‘ರಚಿತಾ ರಾಮ್​ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿದೆ. ಅವರು ಇದ್ದಲ್ಲಿ ಒಂದು ಎನರ್ಜಿ ಇರುತ್ತದೆ. ಅವರು ಭಾವಜೀವಿ. ತಮ್ಮ ಸುತ್ತ ಇರುವ ಎಲ್ಲರನ್ನೂ ಚೆನ್ನಾಗಿ ನೋಡಿಕೊಳ್ತಾರೆ. ಬೇಕಾಗಿರುವ ಜೀವಗಳಿಗೆ ತುಂಬ ಚೆನ್ನಾಗಿ ಸಪೋರ್ಟ್​ ಮಾಡುತ್ತಾರೆ. ಅದಕ್ಕಾಗಿಯೇ ಅವರ ಕಣ್ಣುಗಳು ಅಷ್ಟು ಚೆನ್ನಾಗಿ ಪಳಪಳ ಅಂತ ಹೊಳೆಯುತ್ತವೆ’ ಎಂದು ಧನಂಜಯ್​ ಅವರು ಬಾಯಿ ತುಂಬ ಹೊಗಳಿದ್ದಾರೆ.

ಇದನ್ನೂ ಓದಿ
Image
ಜನ್ಮದಿನದಂದು ‘ಡಾಲಿ’ ಧನಂಜಯ್ ಹೊಸ ಘೋಷಣೆ; ಹೊಸ ಪ್ರತಿಭೆಗಳಿಗೆ ಸಿಗಲಿದೆ ಅವಕಾಶ
Image
Rachita Ram: ಡಾಲಿ ಧನಂಜಯ್​ ಅಣ್ಣನ ಮಗಳಿಗೆ ರಚಿತಾ ಹೆಸರು; ಆ ಘಟನೆ ನೆನೆದ ‘ಡಿಂಪಲ್​ ಕ್ವೀನ್​’
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
ಅಪರಿಚಿತರ ಪೋಸ್ಟ್​ ನಂಬಿ ಮೋಸ ಹೋಗ್ಬೇಡಿ ಎಂದ ನಟ

‘ಮಾನ್ಸೂನ್​ ರಾಗ’ ಸಿನಿಮಾದ ಟ್ರೇಲರ್​ ಗಮನ ಸೆಳೆದಿದೆ. ಹಾಡುಗಳು ಸೂಪರ್​ ಹಿಟ್​ ಆಗಿವೆ. ಡಾಲಿ ಧನಂಜಯ್​, ರಚಿತಾ ರಾಮ್​ ಜೊತೆಗೆ ಯಶಾ ಶಿವಕುಮಾರ್​, ಅಚ್ಯುತ್​ ಕುಮಾರ್​, ಸುಹಾನಿಸಿ ಮಣಿರತ್ನಂ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರವೀಂದ್ರನಾಥ್​ ನಿರ್ದೇಶನ ಮಾಡಿದ್ದು, ವಿಖ್ಯಾತ್​ ಬಂಡವಾಳ ಹೂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:05 pm, Wed, 14 September 22

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್