ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಎಸ್​. ನಾರಾಯಣ್​ ನಿರ್ದೇಶನದ ಈ ಹೊಸ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ
ದುನಿಯಾ ವಿಜಯ್​, ಶ್ರೇಯಸ್​ ಮಂಜು
Follow us
|

Updated on: Jun 02, 2024 | 11:23 PM

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರಂಥ ಕಲಾವಿದರ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತ ಡೈರೆಕ್ಟರ್​ ಎಸ್. ನಾರಾಯಣ್ (S Narayan) ಅವರ ಹೊಸ ಸಿನಿಮಾ ‘ಪ್ರೊಡಕ್ಷನ್ ನಂ 1’ ಕೆಲವೇ ದಿನಗಳ ಹಿಂದೆ ಆರಂಭ ಆಯಿತು. ಈ ಹೊಸ ಸಿನಿಮಾದ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ನಟಿಸುತ್ತಿದ್ದಾರೆ. ದುನಿಯಾ ವಿಜಯ್ (Duniya Vijay) ಅವರು ಜೂನ್ 5ರಿಂದ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು (Shreyas Manju) ಹಾಗೂ ಇತರ ಕಲಾವಿದರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಜಂಟಿಯಾಗಿ ‘ಈಶ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಈಶ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು. ಎಸ್. ನಾರಾಯಣ್, ರಮೇಶ್ ಯಾದವ್, ಕೆ. ಮಂಜು, ದುನಿಯಾ ವಿಜಯ್ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಈ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾಗೆ ಬೃಂದಾ ನಾಯಕಿ ಆಗಿದ್ದಾರೆ. ಡಿಫರೆಂಟ್​ ಪಾತ್ರದಲ್ಲಿ ಸಾಧು ಕೋಕಿಲ ನಟಿಸಲಿದ್ದಾರೆ.

ಇದನ್ನೂ ಓದಿ: ‘ಬಡವರ ಮಕ್ಕಳಿಗೆ ಕೆಲಸ ಕೊಡಿ’: ಕೇಂದ್ರ ಸರ್ಕಾರಕ್ಕೆ ದುನಿಯಾ ವಿಜಯ್​ ಒತ್ತಾಯ

ಇನ್ನುಳಿದ ಪಾತ್ರವರ್ಗದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಾರಾ ಅನುರಾಧಾ, ಪ್ರಮೋದ್ ಶೆಟ್ಟಿ, ಗಿರಿ, ಕಲ್ಯಾಣಿ, ಜಯರಾಂ, ಮಂಜು ಪಾವಗಡ, ಸುಜಯ್ ಶಾಸ್ತ್ರಿ ಮುಂತಾದವರು ಇದ್ದಾರೆ. ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಜೆ‌ಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಅವರ ಸಂಕಲನ, ವಿನೋದ್ ಅವರ ಸಾಹಸ ನಿರ್ದೇಶನ, ಸಂತು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್