AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಎಸ್​. ನಾರಾಯಣ್​ ನಿರ್ದೇಶನದ ಈ ಹೊಸ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ
ದುನಿಯಾ ವಿಜಯ್​, ಶ್ರೇಯಸ್​ ಮಂಜು
ಮದನ್​ ಕುಮಾರ್​
|

Updated on: Jun 02, 2024 | 11:23 PM

Share

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರಂಥ ಕಲಾವಿದರ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತ ಡೈರೆಕ್ಟರ್​ ಎಸ್. ನಾರಾಯಣ್ (S Narayan) ಅವರ ಹೊಸ ಸಿನಿಮಾ ‘ಪ್ರೊಡಕ್ಷನ್ ನಂ 1’ ಕೆಲವೇ ದಿನಗಳ ಹಿಂದೆ ಆರಂಭ ಆಯಿತು. ಈ ಹೊಸ ಸಿನಿಮಾದ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ನಟಿಸುತ್ತಿದ್ದಾರೆ. ದುನಿಯಾ ವಿಜಯ್ (Duniya Vijay) ಅವರು ಜೂನ್ 5ರಿಂದ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು (Shreyas Manju) ಹಾಗೂ ಇತರ ಕಲಾವಿದರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಜಂಟಿಯಾಗಿ ‘ಈಶ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಈಶ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು. ಎಸ್. ನಾರಾಯಣ್, ರಮೇಶ್ ಯಾದವ್, ಕೆ. ಮಂಜು, ದುನಿಯಾ ವಿಜಯ್ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಈ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾಗೆ ಬೃಂದಾ ನಾಯಕಿ ಆಗಿದ್ದಾರೆ. ಡಿಫರೆಂಟ್​ ಪಾತ್ರದಲ್ಲಿ ಸಾಧು ಕೋಕಿಲ ನಟಿಸಲಿದ್ದಾರೆ.

ಇದನ್ನೂ ಓದಿ: ‘ಬಡವರ ಮಕ್ಕಳಿಗೆ ಕೆಲಸ ಕೊಡಿ’: ಕೇಂದ್ರ ಸರ್ಕಾರಕ್ಕೆ ದುನಿಯಾ ವಿಜಯ್​ ಒತ್ತಾಯ

ಇನ್ನುಳಿದ ಪಾತ್ರವರ್ಗದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಾರಾ ಅನುರಾಧಾ, ಪ್ರಮೋದ್ ಶೆಟ್ಟಿ, ಗಿರಿ, ಕಲ್ಯಾಣಿ, ಜಯರಾಂ, ಮಂಜು ಪಾವಗಡ, ಸುಜಯ್ ಶಾಸ್ತ್ರಿ ಮುಂತಾದವರು ಇದ್ದಾರೆ. ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಜೆ‌ಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಅವರ ಸಂಕಲನ, ವಿನೋದ್ ಅವರ ಸಾಹಸ ನಿರ್ದೇಶನ, ಸಂತು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ