AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಎಸ್​. ನಾರಾಯಣ್​ ನಿರ್ದೇಶನದ ಈ ಹೊಸ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ
ದುನಿಯಾ ವಿಜಯ್​, ಶ್ರೇಯಸ್​ ಮಂಜು
ಮದನ್​ ಕುಮಾರ್​
|

Updated on: Jun 02, 2024 | 11:23 PM

Share

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರಂಥ ಕಲಾವಿದರ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತ ಡೈರೆಕ್ಟರ್​ ಎಸ್. ನಾರಾಯಣ್ (S Narayan) ಅವರ ಹೊಸ ಸಿನಿಮಾ ‘ಪ್ರೊಡಕ್ಷನ್ ನಂ 1’ ಕೆಲವೇ ದಿನಗಳ ಹಿಂದೆ ಆರಂಭ ಆಯಿತು. ಈ ಹೊಸ ಸಿನಿಮಾದ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ನಟಿಸುತ್ತಿದ್ದಾರೆ. ದುನಿಯಾ ವಿಜಯ್ (Duniya Vijay) ಅವರು ಜೂನ್ 5ರಿಂದ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು (Shreyas Manju) ಹಾಗೂ ಇತರ ಕಲಾವಿದರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಜಂಟಿಯಾಗಿ ‘ಈಶ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಈಶ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು. ಎಸ್. ನಾರಾಯಣ್, ರಮೇಶ್ ಯಾದವ್, ಕೆ. ಮಂಜು, ದುನಿಯಾ ವಿಜಯ್ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಈ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾಗೆ ಬೃಂದಾ ನಾಯಕಿ ಆಗಿದ್ದಾರೆ. ಡಿಫರೆಂಟ್​ ಪಾತ್ರದಲ್ಲಿ ಸಾಧು ಕೋಕಿಲ ನಟಿಸಲಿದ್ದಾರೆ.

ಇದನ್ನೂ ಓದಿ: ‘ಬಡವರ ಮಕ್ಕಳಿಗೆ ಕೆಲಸ ಕೊಡಿ’: ಕೇಂದ್ರ ಸರ್ಕಾರಕ್ಕೆ ದುನಿಯಾ ವಿಜಯ್​ ಒತ್ತಾಯ

ಇನ್ನುಳಿದ ಪಾತ್ರವರ್ಗದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಾರಾ ಅನುರಾಧಾ, ಪ್ರಮೋದ್ ಶೆಟ್ಟಿ, ಗಿರಿ, ಕಲ್ಯಾಣಿ, ಜಯರಾಂ, ಮಂಜು ಪಾವಗಡ, ಸುಜಯ್ ಶಾಸ್ತ್ರಿ ಮುಂತಾದವರು ಇದ್ದಾರೆ. ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಜೆ‌ಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಅವರ ಸಂಕಲನ, ವಿನೋದ್ ಅವರ ಸಾಹಸ ನಿರ್ದೇಶನ, ಸಂತು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!