AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಎಸ್​. ನಾರಾಯಣ್​ ನಿರ್ದೇಶನದ ಈ ಹೊಸ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ
ದುನಿಯಾ ವಿಜಯ್​, ಶ್ರೇಯಸ್​ ಮಂಜು
ಮದನ್​ ಕುಮಾರ್​
|

Updated on: Jun 02, 2024 | 11:23 PM

Share

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರಂಥ ಕಲಾವಿದರ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತ ಡೈರೆಕ್ಟರ್​ ಎಸ್. ನಾರಾಯಣ್ (S Narayan) ಅವರ ಹೊಸ ಸಿನಿಮಾ ‘ಪ್ರೊಡಕ್ಷನ್ ನಂ 1’ ಕೆಲವೇ ದಿನಗಳ ಹಿಂದೆ ಆರಂಭ ಆಯಿತು. ಈ ಹೊಸ ಸಿನಿಮಾದ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ನಟಿಸುತ್ತಿದ್ದಾರೆ. ದುನಿಯಾ ವಿಜಯ್ (Duniya Vijay) ಅವರು ಜೂನ್ 5ರಿಂದ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು (Shreyas Manju) ಹಾಗೂ ಇತರ ಕಲಾವಿದರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಜಂಟಿಯಾಗಿ ‘ಈಶ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಈಶ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು. ಎಸ್. ನಾರಾಯಣ್, ರಮೇಶ್ ಯಾದವ್, ಕೆ. ಮಂಜು, ದುನಿಯಾ ವಿಜಯ್ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಈ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾಗೆ ಬೃಂದಾ ನಾಯಕಿ ಆಗಿದ್ದಾರೆ. ಡಿಫರೆಂಟ್​ ಪಾತ್ರದಲ್ಲಿ ಸಾಧು ಕೋಕಿಲ ನಟಿಸಲಿದ್ದಾರೆ.

ಇದನ್ನೂ ಓದಿ: ‘ಬಡವರ ಮಕ್ಕಳಿಗೆ ಕೆಲಸ ಕೊಡಿ’: ಕೇಂದ್ರ ಸರ್ಕಾರಕ್ಕೆ ದುನಿಯಾ ವಿಜಯ್​ ಒತ್ತಾಯ

ಇನ್ನುಳಿದ ಪಾತ್ರವರ್ಗದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಾರಾ ಅನುರಾಧಾ, ಪ್ರಮೋದ್ ಶೆಟ್ಟಿ, ಗಿರಿ, ಕಲ್ಯಾಣಿ, ಜಯರಾಂ, ಮಂಜು ಪಾವಗಡ, ಸುಜಯ್ ಶಾಸ್ತ್ರಿ ಮುಂತಾದವರು ಇದ್ದಾರೆ. ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಜೆ‌ಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಅವರ ಸಂಕಲನ, ವಿನೋದ್ ಅವರ ಸಾಹಸ ನಿರ್ದೇಶನ, ಸಂತು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!