AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ

ಎಸ್​. ನಾರಾಯಣ್​ ನಿರ್ದೇಶನದ ಈ ಹೊಸ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರತಂಡದ ಬಗ್ಗೆ ಇಲ್ಲಿದೆ ಮಾಹಿತಿ.

ದುನಿಯಾ ವಿಜಯ್​, ಶ್ರೇಯಸ್​ ಮಂಜು ನಟನೆಯ ಹೊಸ ಸಿನಿಮಾಗೆ ಎಸ್​. ನಾರಾಯಣ್​ ನಿರ್ದೇಶನ
ದುನಿಯಾ ವಿಜಯ್​, ಶ್ರೇಯಸ್​ ಮಂಜು
ಮದನ್​ ಕುಮಾರ್​
|

Updated on: Jun 02, 2024 | 11:23 PM

Share

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರಂಥ ಕಲಾವಿದರ ಸಿನಿಮಾಗಳನ್ನು ನಿರ್ದೇಶಿಸಿದ ಖ್ಯಾತ ಡೈರೆಕ್ಟರ್​ ಎಸ್. ನಾರಾಯಣ್ (S Narayan) ಅವರ ಹೊಸ ಸಿನಿಮಾ ‘ಪ್ರೊಡಕ್ಷನ್ ನಂ 1’ ಕೆಲವೇ ದಿನಗಳ ಹಿಂದೆ ಆರಂಭ ಆಯಿತು. ಈ ಹೊಸ ಸಿನಿಮಾದ ಪ್ರಮುಖ ಪಾತ್ರದಲ್ಲಿ ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ನಟಿಸುತ್ತಿದ್ದಾರೆ. ದುನಿಯಾ ವಿಜಯ್ (Duniya Vijay) ಅವರು ಜೂನ್ 5ರಿಂದ ಶೂಟಿಂಗ್​ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು (Shreyas Manju) ಹಾಗೂ ಇತರ ಕಲಾವಿದರು ಮೊದಲ ಹಂತದ ಶೂಟಿಂಗ್​ ಮುಗಿಸಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ನಿರ್ಮಾಪಕ ಕೆ. ಮಂಜು ಮತ್ತು ರಮೇಶ್ ಯಾದವ್ ಅವರು ಜಂಟಿಯಾಗಿ ‘ಈಶ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಈಶ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಸಿನಿಮಾ ಇದು. ಎಸ್. ನಾರಾಯಣ್, ರಮೇಶ್ ಯಾದವ್, ಕೆ. ಮಂಜು, ದುನಿಯಾ ವಿಜಯ್ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅವರ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ.

ಈ ಸಿನಿಮಾದ ಟೈಟಲ್​ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯದಲ್ಲೇ ಅದ್ದೂರಿಯಾಗಿ ಈ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ‌. ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಸಿನಿಮಾಗೆ ಬೃಂದಾ ನಾಯಕಿ ಆಗಿದ್ದಾರೆ. ಡಿಫರೆಂಟ್​ ಪಾತ್ರದಲ್ಲಿ ಸಾಧು ಕೋಕಿಲ ನಟಿಸಲಿದ್ದಾರೆ.

ಇದನ್ನೂ ಓದಿ: ‘ಬಡವರ ಮಕ್ಕಳಿಗೆ ಕೆಲಸ ಕೊಡಿ’: ಕೇಂದ್ರ ಸರ್ಕಾರಕ್ಕೆ ದುನಿಯಾ ವಿಜಯ್​ ಒತ್ತಾಯ

ಇನ್ನುಳಿದ ಪಾತ್ರವರ್ಗದಲ್ಲಿ ರಂಗಾಯಣ ರಘು, ಶರತ್ ಲೋಹಿತಾಶ್ವ, ತಾರಾ ಅನುರಾಧಾ, ಪ್ರಮೋದ್ ಶೆಟ್ಟಿ, ಗಿರಿ, ಕಲ್ಯಾಣಿ, ಜಯರಾಂ, ಮಂಜು ಪಾವಗಡ, ಸುಜಯ್ ಶಾಸ್ತ್ರಿ ಮುಂತಾದವರು ಇದ್ದಾರೆ. ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಜೆ‌ಸ್ಸಿ ಗಿಫ್ಟ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪಿ.ಕೆ.ಹೆಚ್. ದಾಸ್ ಅವರ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಅವರ ಸಂಕಲನ, ವಿನೋದ್ ಅವರ ಸಾಹಸ ನಿರ್ದೇಶನ, ಸಂತು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕೆ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ