AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿ ಸಮಾಧಿ ಬಳಿ ದುನಿಯಾ ವಿಜಯ್ ಹುಟ್ಟುಹಬ್ಬ; ರಿಲೀಸ್ ಆಯ್ತು ‘ಭೀಮ’ ಫಸ್ಟ್ ಲುಕ್

Duniya Vijay Birthday: ದುನಿಯಾ ವಿಜಯ್ ಬರ್ತ್​ಡೇ ಪ್ರಯುಕ್ತ ‘ಭೀಮ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗಿದೆ. ಈ ಟೀಸರ್​​ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಂದೆ-ತಾಯಿ ಸಮಾಧಿ ಬಳಿ ದುನಿಯಾ ವಿಜಯ್ ಹುಟ್ಟುಹಬ್ಬ; ರಿಲೀಸ್ ಆಯ್ತು ‘ಭೀಮ’ ಫಸ್ಟ್ ಲುಕ್
TV9 Web
| Edited By: |

Updated on: Jan 20, 2023 | 7:09 AM

Share

ಸೆಲೆಬ್ರಿಟಿಗಳು ಬರ್ತ್​​ಡೇನ ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಾರೆ. ಕೆಲವು ಬಾರಿ ಕುಟುಂಬದ ಜತೆ ಹುಟ್ಟುಹಬ್ಬ ಆಚರಿಸಿದರೆ ಇನ್ನೂ ಕೆಲವು ಸಲ ಅಭಿಮಾನಿಗಳ ಜತೆ ಸಮಯ ಕಳೆಯುತ್ತಾರೆ. ದುನಿಯಾ ವಿಜಯ್ (Duniya Vijay) ಅವರು  ಭಿನ್ನವಾಗಿ ಬರ್ತ್​ಡೇ (ಜನವರಿ 20) ಆಚರಿಸಿಕೊಂಡಿದ್ದಾರೆ. ತಂದೆ-ತಾಯಿ ಸಮಾಧಿ ಬಳಿ ಅವರು ಹುಟ್ಟುಹಬ್ಬ ಮಾಡಿಕೊಂಡಿದ್ದಾರೆ. ಈ ವಿಶೇಷ ದಿನದಂದು ದುನಿಯಾ ವಿಜಯ್​ ಮುಂದಿನ ಸಿನಿಮಾ ‘ಭೀಮ’ದ (Bheema Movie) ಫಸ್ಟ್​ ಲುಕ್ ಟೀಸರ್ ರಿಲೀಸ್ ಆಗಿದೆ.

‘ಸಲಗ’ ಸಿನಿಮಾ ಮೂಲಕ ಡೈರೆಕ್ಟರ್​ ಆಗಿ ದುನಿಯಾ ವಿಜಯ್ ಯಶಸ್ಸು ಕಂಡರು. ಪಕ್ಕಾ ರೌಡಿಸಂ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಚಿತ್ರ ಸೂಪರ್ ಹಿಟ್ ಆಯಿತು. ನಿರ್ದೇಶನದ ಜತೆಗೆ ಅವರು ಆ ಸಿನಿಮಾದಲ್ಲಿ ನಟಿಸಿದ್ದರು. ಈಗ ದುನಿಯಾ ವಿಜಯ್ ಅವರು ‘ಭೀಮ’ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅವರ ನಿರ್ದೇಶನದ ಎರಡನೇ ಸಿನಿಮಾ ಇದು.

ದುನಿಯಾ ವಿಜಯ್ ಬರ್ತ್​ಡೇ ಪ್ರಯುಕ್ತ ‘ಭೀಮ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗಿದೆ. ಈ ಟೀಸರ್​​ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಮಚ್ಚುಗಳು ಝಳಪಿಸಿವೆ. ಇದು ಕೂಡ ರೌಡಿಸಂ ಕಥೆ ಎಂಬುದು ಟೀಸರ್​ನಲ್ಲಿ ಸ್ಪಷ್ಟವಾಗುತ್ತದೆ. ಟೀಸರ್ ನೋಡಿದವರು ಇಷ್ಪಟ್ಟಿದ್ದಾರೆ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಹಾರೈಸುತ್ತಿದ್ದಾರೆ.

ಇದನ್ನೂ ಓದಿ
Image
ಚಿಕ್ಕಬಳ್ಳಾಪುರದಲ್ಲಿ ಅಭಿಮಾನಿಗಳ ಜತೆ ‘ವೀರ ಸಿಂಹ ರೆಡ್ಡಿ’ ಸಿನಿಮಾ ವೀಕ್ಷಿಸಿದ ದುನಿಯಾ ವಿಜಯ್
Image
Chikkaballapur Utsav: ವೇದಿಕೆ ಮೇಲೆ ಸಚಿವ ಸುಧಾಕರ್​ರನ್ನು ಕೊಂಡಾಡಿದ ನಟ ದುನಿಯಾ ವಿಜಯ್!
Image
ದುನಿಯಾ ವಿಜಿ ಮತ್ತು ಪಾನಿಪುರಿ ಕಿಟ್ಟಿ ನಡುವಿನ ಡಿಚ್ಚಿ ಕೇಸ್ ಮತ್ತೆ ಮುನ್ನಲೆಗೆ: 2018ರಲ್ಲಿ ಆಗಿದ್ದೇನು?
Image
Duniya Vijay: ದುನಿಯಾ ವಿಜಯ್ ಮೇಲೆ ಹಲ್ಲೆ ಪ್ರಕರಣ; ಪಾನಿಪುರಿ ಕಿಟ್ಟಿ ವಿರುದ್ಧ ಹೊಸ ಎಫ್​ಐಆರ್​

ವಿಶೇಷವಾಗಿ ಬರ್ತ್​ಡೇ ಆಚರಿಸಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಈ ಬಾರಿ ಬೆಂಗಳೂರು ಬಿಟ್ಟು ಹುಟ್ಟೂರಾದ ಆನೇಕಲ್​ನ ಕುಂಬಾರನಹಳ್ಳಿಗೆ ತೆರಳಿದ್ದಾರೆ. ಅಲ್ಲಿರುವ ಅಪ್ಪ-ಅಮ್ಮನ ಸಮಾಧಿ ಬಳಿ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ತಂದೆ-ತಾಯಿ ಮೇಲೆ ದುನಿಯಾ ವಿಜಯ್​ಗೆ ಅಪಾರ ಪ್ರೀತಿ ಇತ್ತು. ಅವರನ್ನು ಕಳೆದುಕೊಂಡ ನಂತರವೂ ಅವರು ಪ್ರೀತಿ ಮಾಡುವುದನ್ನು ನಿಲ್ಲಿಸಿಲ್ಲ ಎಂಬುದಕ್ಕೆ ಈ ಬರ್ತ್​ಡೇ ಆಚರಣೆಯೇ ಸಾಕ್ಷಿ.

ಇದನ್ನೂ ಓದಿ: Duniya Vijay Birthday: ‘ತಂದೆ-ತಾಯಿಯೇ ನನ್ನ ಪಾಲಿನ ದೇವರು’: ಬರ್ತ್​ಡೇ ಸಮಯದಲ್ಲಿ ಭಾವುಕರಾದ ದುನಿಯಾ ವಿಜಯ್​

‘ತಂದೆ ತಾಯಿ ಇಲ್ಲದೇ ಇರುವುದಕ್ಕೆ ನೋವಿದೆ. ಅವರಿಗೆ ನಾನು ಕಟ್ಟಿರುವ ಸಣ್ಣ ದೇವಸ್ಥಾನ ಇದು. ಆ ಜಾಗದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿರುವುದು ಖುಷಿ ಇದೆ. ಇಲ್ಲಿ ಅಭಿಮಾನಿಗಳು ಬಂದಿದ್ದಾರೆ. ಅವರ್ಯಾರಿಗೂ ನೋವಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಅವರು ನನಗೋಸ್ಕರ ಬರ್ತಾರೆ’ ಎಂದಿದ್ದಾರೆ ದುನಿಯಾ ವಿಜಯ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ