AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ, ತಾಯಿ ಸಮಾಧಿ ಬಳಿ ವಿಜಯ್ ಬರ್ತ್​ಡೇ ಆಚರಣೆ; ‘ಭೀಮ’ ಟೀಸರ್ ರಿಲೀಸ್

ದುನಿಯಾ ವಿಜಯ್ ಅವರು 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬರ್ತ್ಡೇ ಶುಭಾಶಯ ಕೋರಲು ಇಂದು ಅಭಿಮಾನಿಗಳು ತೆರಳಲಿದ್ದಾರೆ. ಹೀಗಾಗಿ, 5,000 ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ತಂದೆ, ತಾಯಿ ಸಮಾಧಿ ಬಳಿ ವಿಜಯ್ ಬರ್ತ್​ಡೇ ಆಚರಣೆ; ‘ಭೀಮ’ ಟೀಸರ್ ರಿಲೀಸ್
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Jan 20, 2024 | 6:58 AM

Share

ನಟ ದುನಿಯಾ ವಿಜಯ್ (Duniya Vijay) ಅವರಿಗೆ ತಂದೆ, ತಾಯಿ ಮೇಲೆ ವಿಶೇಷ ಪ್ರೀತಿ. ಆದರೆ, ಇಂದು ಅವರು ವಿಜಯ್ ಜೊತೆ ಇಲ್ಲ. ಹೀಗಾಗಿ, ತಂದೆ-ತಾಯಿ ಸಮಾಧಿ ಬಳಿ ದುನಿಯಾ ವಿಜಯ್ ಅವರು ಬರ್ತ್​ಡೇ (ಜನವರಿ 20) ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ಅವರಿಗೆ ಸಾಥ್ ನೀಡಿದ್ದಾರೆ. ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ. ತಂದೆ-ತಾಯಿ ಸಮಾಧಿಗೆ ಹೂವಿನ ಅಲಂಕಾರ ಮಾಡಲಾಗಿದೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಅವರು ನಟಿಸಿ ನಿರ್ದೇಶಿಸುತ್ತಿರುವ ‘ಭೀಮ’ ಸಿನಿಮಾದ ಟೀಸರ್ ಆನಂದ್ ಆಡಿಯೋ ಮೂಲಕ ರಿಲೀಸ್ ಆಗಿದೆ.

ದುನಿಯಾ ವಿಜಯ್ ಅವರು 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರು ಸಮೀಪ ಇರುವ ಆನೇಕಲ್ ತಾಲೂಕಿನ ಕುಂಬಾರಹಳ್ಳಿಯಲ್ಲಿ ವಿಜಯ್ ತಂದೆ, ತಾಯಿ ಸಮಾಧಿ ಇದೆ. ಬರ್ತ್ಡೇ ಶುಭಾಶಯ ಕೋರಲು ಇಂದು ಅಭಿಮಾನಿಗಳು ತೆರಳಲಿದ್ದಾರೆ. ಹೀಗಾಗಿ, 5,000 ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಅವರು ಊರಿನಲ್ಲೇ ಉಳಿದುಕೊಂಡಿದ್ದರು. ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳು ಬರುತ್ತಿವೆ.

ದುನಿಯಾ ವಿಜಯ್ ಅವರು ಕಳೆದ ವರ್ಷವೂ ಬರ್ತಡೇನ ತಂದೆ, ತಾಯಿ ಸಮಾಧಿ ಬಳಿಯೇ ಮಾಡಿಕೊಂಡಿದ್ದರು. ಈ ಬಾರಿ ಸಮಾಧಿಯನ್ನು ದೇವಸ್ಥಾನದಂತೆ ನಿರ್ಮಿಸಿದ್ದಾರೆ. ಈ ಮೂಲಕ ತಂದೆ, ತಾಯಿ ಮೇಲಿರುವ ಪ್ರೀತಿಯನ್ನು ಅವರು ಹೊರ ಹಾಕಿದ್ದಾರೆ.

ಇದನ್ನೂ ಓದಿ: ಅಚಾನಕ್ಕಾಗಿ ಬಾಲ್ಯದ ಗೆಳೆಯನ ಮನೆಗೆ ಭೇಟಿ ಕೊಟ್ಟ ದುನಿಯಾ ವಿಜಯ್

ಟೀಸರ್ ಗಿಫ್ಟ್

‘ಸಲಗ’ ಸಿನಿಮಾದಲ್ಲಿ ನಟಿಸಿ, ನಿರ್ದೇಶಿಸಿ ದುನಿಯಾ ವಿಜಯ್ ಅವರು ಖ್ಯಾತಿ ಪಡೆದರು. ಈಗ ‘ಭೀಮ’ ಮೂಲಕ ಎರಡನೇ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇದು ಕೂಡ ರೌಡಿಸಂ ಕಥೆ. ಟೀಸರ್​ನಲ್ಲಿ ಬರೋ ಡೈಲಾಗ್ ಗಮನ ಸೆಳೆದಿದೆ. ಈ ಸಿನಿಮಾದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವರ್ಷ ‘ಭೀಮ ಸಿನಿಮಾ ರಿಲೀಸ್ ಆಗೋ ನಿರೀಕ್ಷೆ ಇದೆ. ಇದಲ್ಲದೆ ಇನ್ನೂ ಕೆಲವು ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!