Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ಜನ ಪ್ರಜ್ಞಾವಂತರು ಎಂದ ದುನಿಯಾ ವಿಜಯ್ ಗೆದ್ದ ಪಕ್ಷದ ಬಳಿ ಮಾಡಿದರೊಂದು ಮನವಿ

Duniya Vijay: ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿರುವ ದುನಿಯಾ ವಿಜಯ್, ಕರ್ನಾಟಕದ ಜನ ಪ್ರಜ್ಞಾವಂತರು ಎಂದಿದ್ದಾರೆ. ಜೊತೆಗೆ ಗೆದ್ದ ಪಕ್ಷಕ್ಕೆ ಮನವಿಯೊಂದನ್ನು ಮಾಡಿದ್ದಾರೆ.

ಕರ್ನಾಟಕದ ಜನ ಪ್ರಜ್ಞಾವಂತರು ಎಂದ ದುನಿಯಾ ವಿಜಯ್ ಗೆದ್ದ ಪಕ್ಷದ ಬಳಿ ಮಾಡಿದರೊಂದು ಮನವಿ
ದುನಿಯಾ ವಿಜಯ್
Follow us
ಮಂಜುನಾಥ ಸಿ.
|

Updated on: May 13, 2023 | 10:18 PM

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election 2023) ಹೊರಬಿದ್ದಾಗಿದೆ. ಮತದಾನ ಮುಗಿದ ದಿನ ಸಂಜೆ ಹೊರಬಿದ್ದಿದ್ದ ಸಮೀಕ್ಷೆಗಳನ್ನು ನೋಡಿ ಈ ಬಾರಿಯೂ ಅತಂತ್ರ ಸರ್ಕಾರ ಆಗಬಹುದು ಎಂದುಕೊಂಡಿದ್ದ ಹಲವರಿಗೆ ನಿರಾಳತೆ ತಂದಿದೆ. ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯ ಸಾಧಿಸಿದೆ. ಎಲ್ಲ ಸಮೀಕ್ಷೆಗಳನ್ನು ಸುಳ್ಳು ಮಾಡಿ 136 ಸೀಟುಗಳಲ್ಲಿ ಜಯ ಸಾಧಿಸಿದೆ. ಬಿಜೆಪಿ ಪಕ್ಷ 65ಕ್ಷೇತ್ರಗಳನ್ನು ಗೆಲ್ಲುವಲ್ಲಿ ಸಫಲವಾಗಿದೆ. ಸಮೀಕ್ಷೆಗಳನ್ನು ನೋಡಿ ಕಿಂಗ್ ಮೇಕರ್ ಆಗುವ ಕನಸಿನಲ್ಲಿದ್ದ ಜೆಡಿಎಸ್ 19 ಕ್ಷೇತ್ರಗಳಿಗೆ ನಿಯಂತ್ರಿಸಲ್ಪಟ್ಟಿದೆ. ಕರ್ನಾಟಕದಲ್ಲಿ ಬಹುಮತದ ಸರ್ಕಾರ ಬಂದಿರುವುದನ್ನು ಹಲವರು ಸಂಭ್ರಮಿಸುತ್ತಿದ್ದ ಅವರಲ್ಲಿ ನಟ ದುನಿಯಾ ವಿಜಯ್ (Duniya Vijay) ಸಹ ಒಬ್ಬರು.

ನಟ, ನಿರ್ದೇಶಕ ದುನಿಯಾ ವಿಜಯ್, ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಗೆದ್ದಿರುವ ಪಕ್ಷಕ್ಕೆ ಶುಭಾಷಯ ಹೇಳಿರುವ ಜೊತೆಗೆ, ಸರ್ಕಾರದಿಂದ ತಾವು ಏನನ್ನು ನಿರೀಕ್ಷಿಸುತ್ತಿರುವುದಾಗಿಯೂ ಹೇಳಿದ್ದಾರೆ. ಜೊತೆಗೆ ಬಹುಮತದ ಸರ್ಕಾರ ಆರಿಸಿರುವ ಕರ್ನಾಟಕದ ಜನತೆ ಪ್ರಜ್ಞಾವಂತರು ಎಂದು ಸಹ ಹೇಳಿದ್ದಾರೆ.

”ಚುನಾವಣೆ ಮುಗಿದು ಫಲಿತಾಂಶವೂ ಬಂದಾಯಿತು. ಇನ್ನೇನಿದ್ದರು ಹೊಸ ಸರ್ಕಾರದ ಆಟ. ಅತಂತ್ರ ವಿಧಾನಸಭೆ ಸೃಷ್ಟಿಯಾಗಿ ಎಲ್ಲರ ಬದುಕು ಅತಂತ್ರವಾಗುತ್ತದೆ ಎಂಬ ಸುದ್ದಿಗಳು ಹರಿದಾಡಿದವು. ಆದರೆ ಕರುನಾಡಿನ ಜನ ಸಂಪೂರ್ಣ ಬಹುಮತವನ್ನು ಒಂದು ಪಕ್ಷಕ್ಕೆ ನೀಡಿ ತಾವು ಪ್ರಜ್ಞಾವಂತರು ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಗೆದ್ದವರಿಗೆಲ್ಲ ಶುಭಾಶಯಗಳು, ಸೋತವರು ಆತ್ಮ ವಿಮರ್ಶೆ ಮಾಡಿಕೊಳ್ಳವ ಕಾಲ. ಸಂಪೂರ್ಣ ಬಹುಮತ ಪಡೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯಗಳು. ಸಾಮಾನ್ಯ ಜನ ನೆಮ್ಮದಿಯಿಂದ ಜೀವನ ನಡೆಸುವಂತೆ ಉತ್ತಮ ಆಡಳಿತ ನೀಡಿ” ಎಂದು ಮನವಿ ಮಾಡಿದ್ದಾರೆ.

ದುನಿಯಾ ವಿಜಯ್ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು ಆದರೆ ಅದು ಸಿದ್ದರಾಮಯ್ಯ ಅವರ ಪರವಾಗಿ ಮಾತ್ರ. ಸಿದ್ದರಾಮಯ್ಯ ಅವರ ಪರವಾಗಿ ವರುಣಾ ಕ್ಷೇತ್ರದಲ್ಲಿ ನಟ ದುನಿಯಾ ವಿಜಯ್ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರ ಅಭಿಮಾನಿಯಾಗಿರುವ ದುನಿಯಾ ವಿಜಯ್ ಈ ಹಿಂದೆ ತಮ್ಮ ಸಿನಿಮಾದ ಮುಹೂರ್ತಕ್ಕೂ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ್ದರು.

ದುನಿಯಾ ವಿಜಯ್ ನಟಿಸಿ ನಿರ್ದೇಶನ ಮಾಡಿರುವ ಭೀಮ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿನಿಮಾದ ಕೆಲವು ಪೋಸ್ಟರ್​ಗಳನ್ನು ದುನಿಯಾ ವಿಜಯ್ ಹಂಚಿಕೊಂಡಿದ್ದಾರೆ. ಸಿನಿಮಾದ ಟೀಸರ್, ಟ್ರೈಲರ್​ಗಳು ಬಿಡುಗಡೆ ಆಗುವುದು ಬಾಕಿ ಇದ್ದು, ಸಿನಿಮಾದ ಬಿಡುಗಡೆ ದಿನಾಂಕದ ಘೋಷಣೆಯೂ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ