AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 3:13 PM

Share

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​