AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 3:13 PM

Share

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​