AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 3:13 PM

Share

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ