‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
Follow us
|

Updated on: Apr 15, 2021 | 3:13 PM

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

ತಾಜಾ ಸುದ್ದಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರ ಈಗ ಮೇನಲ್ಲಿ ಪತನವಾಗುತ್ತೆ ಅಂತಿದ್ದಾರೆ ಕುಮಾರಸ್ವಾಮಿ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಇಂದು ಸುಪ್ರೀಂ ಕೋರ್ಟ್ ತೀರ್ಪು ನೇರ ಪ್ರಸಾರ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಡೇಂಜರಸ್ ಪಿಚ್: ಅರ್ಧಕ್ಕೆ ನಿಂತ ಬಿಗ್ ಬ್ಯಾಷ್ 2023ರ ಹೈವೋಲ್ಟೇಜ್ ಪಂದ್ಯ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ