AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 3:13 PM

Share

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ