AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ ಕುಮಾರ್​ ಸಿನಿಮಾದಲ್ಲಿ ದುನಿಯಾ ವಿಜಯ್​ ವಿಲನ್​? ಹಬ್ಬಿದೆ ಗುಸು ಗುಸು

ನಿಖಿಲ್​ ಕುಮಾರ್​ ನಟನೆಯ ಈ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಮೂಡಿಬರಲಿದೆ. ‘ಲೈಕಾ ಪ್ರೊಡಕ್ಷನ್ಸ್​’ ಬಂಡವಾಳ ಹೂಡುತ್ತಿದೆ. ದುನಿಯಾ ವಿಜಯ್​ ಜೊತೆ ನಿರ್ಮಾಪಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಸುದ್ದಿ ಹಬ್ಬಿದೆ. ಆದರೆ ನಿರ್ಮಾಣ ಸಂಸ್ಥೆಯಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳುವುದು ಬಾಕಿ ಇದೆ.

ನಿಖಿಲ್​ ಕುಮಾರ್​ ಸಿನಿಮಾದಲ್ಲಿ ದುನಿಯಾ ವಿಜಯ್​ ವಿಲನ್​? ಹಬ್ಬಿದೆ ಗುಸು ಗುಸು
ನಿಖಿಲ್​ ಕುಮಾರ್​, ದುನಿಯಾ ವಿಜಯ್​
ಮದನ್​ ಕುಮಾರ್​
|

Updated on: Oct 09, 2023 | 10:20 PM

Share

ನಟ ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ಅವರು ರಾಜಕೀಯದ ಜೊತೆ ಸಿನಿಮಾದ ಕೆಲಸಗಳಲ್ಲೂ ಆ್ಯಕ್ಟೀವ್​ ಆಗಿದ್ದಾರೆ. ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್ಸ್​’ (Lyca Productions) ಜೊತೆ ಅವರು ಕೈ ಜೋಡಿಸಿರುವುದರಿಂದ ಅಭಿಮಾನಿಗಳ ವಲಯದಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಚಿತ್ರೀಕರಣ ಪ್ರಗತಿಯಲ್ಲಿದ್ದು, ಪಾತ್ರವರ್ಗದ ಬಗ್ಗೆ ಅಪ್​ಡೇಟ್​ ಸಿಗುತ್ತಿದೆ. ಅಚ್ಚರಿ ಏನೆಂದರೆ, ಕನ್ನಡ ಚಿತ್ರರಂಗದ ಸ್ಟಾರ್​ ನಟ ದುನಿಯಾ ವಿಜಯ್​ ಅವರು ಈ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ. ನಿಖಿಲ್​ ಕುಮಾರ್​ (Nikhil Kumar) ನಾಯಕನಾಗಿರುವ ಈ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ವಿಲನ್​ ಪಾತ್ರ ಮಾಡುತ್ತಾರೆ ಎಂದು ಕೂಡ ಸೋಶಿಯಲ್​ ಮೀಡಿಯಾದಲ್ಲಿ ಗಾಸಿಪ್​ ಹಬ್ಬಿದೆ.

ದುನಿಯಾ ವಿಜಯ್​ ಅವರಿಗೆ ವಿಲನ್​ ಪಾತ್ರಗಳು ಹೊಸದೇನೂ ಅಲ್ಲ. ಚಿತ್ರರಂಗಕ್ಕೆ ಕಾಲಿಟ್ಟ ಆರಂಭದ ದಿನಗಳಲ್ಲಿ ಅವರು ಖಳನಟನಾಗಿ​ ಅಬ್ಬರಿಸಿದ್ದರು. ಅಷ್ಟೇ ಅಲ್ಲದೇ, ಹೀರೋ ಆಗಿ ಮಿಂಚಿದ ನಂತರವೂ ಅವರು ಖಳನಾಗಿ ಕಾಣಿಸಿಕೊಂಡಿದ್ದು ‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ. ಈ ವರ್ಷ ಜನವರಿಯಲ್ಲಿ ರಿಲೀಸ್​ ಆದ ಆ ಸಿನಿಮಾದಲ್ಲಿನ ದುನಿಯಾ ವಿಜಯ್​ ಅವರ ನಟನೆಗೆ ಟಾಲಿವುಡ್​ ಮಂದಿ ಮೆಚ್ಚುಗೆ ಸೂಚಿಸಿದರು. ಈಗ ಮತ್ತೆ ಅವರು ವಿಲನ್​ ಆಗುತ್ತಿದ್ದಾರೆ ಎಂಬ ಗುಸು ಗುಸು ಕೇಳಿಬರುತ್ತಿದೆ. ಯುಕ್ತಿ ತರೇಜಾ, ಕೋಮಲ್​ ಕುಮಾರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಜನೀಶ್ ಬಿ. ಲೋಕನಾಥ್​ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಇದನ್ನೂ ಓದಿ: ನಿಖಿಲ್​ ಕುಮಾರ್​ ಸಿನಿಮಾದ ಸೆಟ್​ಗೆ ಭೇಟಿ ನೀಡಿದ ಶಿವರಾಜ್​ಕುಮಾರ್​; ಫೋಟೋ ವೈರಲ್​

ದುನಿಯಾ ವಿಜಯ್​ ಜೊತೆ ‘ಲೈಕಾ ಪ್ರೊಡಕ್ಷನ್ಸ್​’ ಸಂಸ್ಥೆ ಮಾತುಕತೆ ನಡೆಸುತ್ತಿದೆ ಎಂದು ಸುದ್ದಿ ಹಬ್ಬಿದೆ. ಈ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಮೂಡಿಬರಲಿದೆ. ‘ವೀರ ಸಿಂಹ ರೆಡ್ಡಿ’ ಸಿನಿಮಾ ಮೂಲಕ ಟಾಲಿವುಡ್​ ಪ್ರೇಕ್ಷಕರಿಗೆ ದುನಿಯಾ ವಿಜಯ್​ ಇಷ್ಟ ಆಗಿದ್ದಾರೆ. ಹಾಗಾಗಿ ಅವರನ್ನು ಮತ್ತೊಮ್ಮೆ ಖಡಕ್​ ಪಾತ್ರದಲ್ಲಿ ನೋಡಲು ಫ್ಯಾನ್ಸ್​ ಕಾಯುತ್ತಿದ್ದಾರೆ. ಅವರು ಈ ಚಿತ್ರದಲ್ಲಿ ನಟಿಸುವ ಬಗ್ಗೆ ನಿರ್ಮಾಣ ಸಂಸ್ಥೆಯ ಕಡೆಯಿಂದ ಅಧಿಕೃತ ಮಾಹಿತಿ ಹೊರಬೀಳುವುದು ಬಾಕಿ ಇದೆ.

ಇದನ್ನೂ ಓದಿ: ‘ರಾಜಕಾರಣದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದೇನೆ ಎಂಬ ಭಾವನೆ ಯಾರಿಗೂ ಬೇಡ’: ನಿಖಿಲ್​ ಕುಮಾರ್​ ಸ್ಪಷ್ಟನೆ

ನಟನೆ ಮಾತ್ರವಲ್ಲದೇ ನಿರ್ದೇಶನದಲ್ಲೂ ದುನಿಯಾ ವಿಜಯ್​ ಅವರು ಯಶಸ್ಸು ಕಂಡಿದ್ದಾರೆ. ಅವರು ನಿರ್ದೇಶನ ಮಾಡಿದ ಮೊದಲ ಸಿನಿಮಾ ‘ಸಲಗ’ ಸೂಪರ್​ ಹಿಟ್​ ಆಯಿತು. ಈಗ ಅವರು ‘ಭೀಮ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುವುದರ ಜೊತೆಗೆ ಮುಖ್ಯ ಪಾತ್ರದಲ್ಲೂ ನಟಿಸಿದ್ದು, ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಈ ಸಿನಿಮಾದ ಹಾಡು ಬಿಡುಗಡೆ ಆಗಿ ಧೂಳೆಬ್ಬಿಸುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್