AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾದ ವೀಕ್ಷಣೆಗೆ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ
ಮಂಜುನಾಥ ಸಿ.
|

Updated on: Aug 01, 2024 | 2:51 PM

Share

‘ಭೀಮ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ನಟ, ನಿರ್ದೇಶಕ ದುನಿಯಾ ವಿಜಯ್, ಸಿಎಂ ಸಿದ್ದರಾಮಯ್ಯ ಅವರನ್ನು ಇಂದು (ಆಗಸ್ಟ್ 09) ಭೇಟಿಯಾಗಿದ್ದಾರೆ. ಆಗಸ್ಟ್ 9 ರಂದು ತಮ್ಮ ‘ಭೀಮ’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಸಿನಿಮಾ ನೋಡಲು ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ಸಹ ದುನಿಯಾ ವಿಜಯ್​ರ ಆಹ್ವಾನವನ್ನು ಮನ್ನಿಸಿ, ಸಿನಿಮಾ ನೋಡುವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ನಡೆದಿದ್ದ ‘ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿಯೂ ಸಿದ್ದರಾಮಯ್ಯ ಭಾಗಿ ಆಗಿದ್ದರು. ಅದಕ್ಕೂ ಮುಂಚೆ ‘ಸಲಗ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ತಮ್ಮನ್ನು ಸಿದ್ದರಾಮಯ್ಯ ಅಭಿಮಾನಿ ಎಂದು ದುನಿಯಾ ವಿಜಯ್ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರೊಟ್ಟಿಗೆ ಉತ್ತಮ ನಂಟನ್ನು ದುನಿಯಾ ವಿಜಯ್ ಹೊಂದಿದ್ದಾರೆ.

ಇದೇ ವರ್ಷ ನಡೆದ ಚುನಾವಣೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ದುನಿಯಾ ವಿಜಯ್ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಅಪೇಕ್ಷಿಸಿದ್ದರು. ತಮ್ಮ ಪರವಾಗಿ ಪ್ರಚಾರ ಮಾಡಿದ್ದ ದುನಿಯಾ ವಿಜಯ್​ಗೆ ಸಿದ್ದರಾಮಯ್ಯ ಧನ್ಯವಾದ ಸಹ ಅರ್ಪಣೆ ಮಾಡಿದ್ದರು. ಅಂತೆಯೇ ಈಗ ಸಿದ್ದರಾಮಯ್ಯ ಮತ್ತೆ ಸಿಎಂ ಆಗಿದ್ದಾರೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿರುವ ಮುಖ್ಯ ಸಮಸ್ಯೆ ಏನು? ಬೊಟ್ಟು ಮಾಡಿ ತೋರಿದ ದುನಿಯಾ ವಿಜಯ್

‘ಭೀಮ’ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಎರಡನೇ ಸಿನಿಮಾ. ಈ ಹಿಂದೆ ‘ಸಲಗ’ ಸಿನಿಮಾವನ್ನು ದುನಿಯಾ ವಿಜಯ್ ನಿರ್ದೇಶನ ಮಾಡಿದ್ದರು. ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾ ಬೆಂಗಳೂರಿನ ಅಂಡರ್ವಲ್ಡ್ ಕತೆಯನ್ನು ಒಳಗೊಂಡಿದೆ. ಸಿನಿಮಾದ ಕೆಲವು ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಹಾಡುಗಳು ಟ್ರೆಂಡ್ ಸೃಷ್ಟಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು