AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾದ ವೀಕ್ಷಣೆಗೆ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ
ಮಂಜುನಾಥ ಸಿ.
|

Updated on: Aug 01, 2024 | 2:51 PM

Share

‘ಭೀಮ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ನಟ, ನಿರ್ದೇಶಕ ದುನಿಯಾ ವಿಜಯ್, ಸಿಎಂ ಸಿದ್ದರಾಮಯ್ಯ ಅವರನ್ನು ಇಂದು (ಆಗಸ್ಟ್ 09) ಭೇಟಿಯಾಗಿದ್ದಾರೆ. ಆಗಸ್ಟ್ 9 ರಂದು ತಮ್ಮ ‘ಭೀಮ’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಸಿನಿಮಾ ನೋಡಲು ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ಸಹ ದುನಿಯಾ ವಿಜಯ್​ರ ಆಹ್ವಾನವನ್ನು ಮನ್ನಿಸಿ, ಸಿನಿಮಾ ನೋಡುವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ನಡೆದಿದ್ದ ‘ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿಯೂ ಸಿದ್ದರಾಮಯ್ಯ ಭಾಗಿ ಆಗಿದ್ದರು. ಅದಕ್ಕೂ ಮುಂಚೆ ‘ಸಲಗ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ತಮ್ಮನ್ನು ಸಿದ್ದರಾಮಯ್ಯ ಅಭಿಮಾನಿ ಎಂದು ದುನಿಯಾ ವಿಜಯ್ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರೊಟ್ಟಿಗೆ ಉತ್ತಮ ನಂಟನ್ನು ದುನಿಯಾ ವಿಜಯ್ ಹೊಂದಿದ್ದಾರೆ.

ಇದೇ ವರ್ಷ ನಡೆದ ಚುನಾವಣೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ದುನಿಯಾ ವಿಜಯ್ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಅಪೇಕ್ಷಿಸಿದ್ದರು. ತಮ್ಮ ಪರವಾಗಿ ಪ್ರಚಾರ ಮಾಡಿದ್ದ ದುನಿಯಾ ವಿಜಯ್​ಗೆ ಸಿದ್ದರಾಮಯ್ಯ ಧನ್ಯವಾದ ಸಹ ಅರ್ಪಣೆ ಮಾಡಿದ್ದರು. ಅಂತೆಯೇ ಈಗ ಸಿದ್ದರಾಮಯ್ಯ ಮತ್ತೆ ಸಿಎಂ ಆಗಿದ್ದಾರೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿರುವ ಮುಖ್ಯ ಸಮಸ್ಯೆ ಏನು? ಬೊಟ್ಟು ಮಾಡಿ ತೋರಿದ ದುನಿಯಾ ವಿಜಯ್

‘ಭೀಮ’ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಎರಡನೇ ಸಿನಿಮಾ. ಈ ಹಿಂದೆ ‘ಸಲಗ’ ಸಿನಿಮಾವನ್ನು ದುನಿಯಾ ವಿಜಯ್ ನಿರ್ದೇಶನ ಮಾಡಿದ್ದರು. ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾ ಬೆಂಗಳೂರಿನ ಅಂಡರ್ವಲ್ಡ್ ಕತೆಯನ್ನು ಒಳಗೊಂಡಿದೆ. ಸಿನಿಮಾದ ಕೆಲವು ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಹಾಡುಗಳು ಟ್ರೆಂಡ್ ಸೃಷ್ಟಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?