ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾದ ವೀಕ್ಷಣೆಗೆ ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ
Follow us
|

Updated on: Aug 01, 2024 | 2:51 PM

‘ಭೀಮ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ನಟ, ನಿರ್ದೇಶಕ ದುನಿಯಾ ವಿಜಯ್, ಸಿಎಂ ಸಿದ್ದರಾಮಯ್ಯ ಅವರನ್ನು ಇಂದು (ಆಗಸ್ಟ್ 09) ಭೇಟಿಯಾಗಿದ್ದಾರೆ. ಆಗಸ್ಟ್ 9 ರಂದು ತಮ್ಮ ‘ಭೀಮ’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಸಿನಿಮಾ ನೋಡಲು ಸಿದ್ದರಾಮಯ್ಯ ಅವರನ್ನು ದುನಿಯಾ ವಿಜಯ್ ಆಹ್ವಾನಿಸಿದ್ದಾರೆ. ಸಿದ್ದರಾಮಯ್ಯ ಅವರು ಸಹ ದುನಿಯಾ ವಿಜಯ್​ರ ಆಹ್ವಾನವನ್ನು ಮನ್ನಿಸಿ, ಸಿನಿಮಾ ನೋಡುವಾಗಿ ಹೇಳಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ನಡೆದಿದ್ದ ‘ಭೀಮ’ ಸಿನಿಮಾಕ್ಕೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿಯೂ ಸಿದ್ದರಾಮಯ್ಯ ಭಾಗಿ ಆಗಿದ್ದರು. ಅದಕ್ಕೂ ಮುಂಚೆ ‘ಸಲಗ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ತಮ್ಮನ್ನು ಸಿದ್ದರಾಮಯ್ಯ ಅಭಿಮಾನಿ ಎಂದು ದುನಿಯಾ ವಿಜಯ್ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರೊಟ್ಟಿಗೆ ಉತ್ತಮ ನಂಟನ್ನು ದುನಿಯಾ ವಿಜಯ್ ಹೊಂದಿದ್ದಾರೆ.

ಇದೇ ವರ್ಷ ನಡೆದ ಚುನಾವಣೆ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ದುನಿಯಾ ವಿಜಯ್ ಪ್ರಚಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗಬೇಕು ಎಂದು ಅಪೇಕ್ಷಿಸಿದ್ದರು. ತಮ್ಮ ಪರವಾಗಿ ಪ್ರಚಾರ ಮಾಡಿದ್ದ ದುನಿಯಾ ವಿಜಯ್​ಗೆ ಸಿದ್ದರಾಮಯ್ಯ ಧನ್ಯವಾದ ಸಹ ಅರ್ಪಣೆ ಮಾಡಿದ್ದರು. ಅಂತೆಯೇ ಈಗ ಸಿದ್ದರಾಮಯ್ಯ ಮತ್ತೆ ಸಿಎಂ ಆಗಿದ್ದಾರೆ.

ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿರುವ ಮುಖ್ಯ ಸಮಸ್ಯೆ ಏನು? ಬೊಟ್ಟು ಮಾಡಿ ತೋರಿದ ದುನಿಯಾ ವಿಜಯ್

‘ಭೀಮ’ ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಎರಡನೇ ಸಿನಿಮಾ. ಈ ಹಿಂದೆ ‘ಸಲಗ’ ಸಿನಿಮಾವನ್ನು ದುನಿಯಾ ವಿಜಯ್ ನಿರ್ದೇಶನ ಮಾಡಿದ್ದರು. ‘ಭೀಮ’ ಸಿನಿಮಾ ಆಗಸ್ಟ್ 09 ರಂದು ಬಿಡುಗಡೆ ಆಗಲಿದೆ. ಸಿನಿಮಾ ಬೆಂಗಳೂರಿನ ಅಂಡರ್ವಲ್ಡ್ ಕತೆಯನ್ನು ಒಳಗೊಂಡಿದೆ. ಸಿನಿಮಾದ ಕೆಲವು ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು, ಹಾಡುಗಳು ಟ್ರೆಂಡ್ ಸೃಷ್ಟಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ