AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್​ನ‌ ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಯ್​ ತಾಯಿ ನಾರಾಯಣಮ್ಮ ಅಂತ್ಯಕ್ರಿಯೆ

Duniya Vijay: ನಟ ದುನಿಯಾ ವಿಜಯ್​ ತಂದೆಯ ಊರು ಆನೇಕಲ್ ತಾಲ್ಲೂಕಿನ ಕುಂಬಾರನಹಳ್ಳಿ. ಹಾಗಾಗಿ ಅಲ್ಲಿಯೇ ವಿಜಯ್ ತಾಯಿ ನಾರಾಯಣಮ್ಮ ಅವರ ಅಂತ್ಯ ಸಂಸ್ಕಾರ ಮಾಡಲಾಗಿದೆ.

ಆನೇಕಲ್​ನ‌ ಕುಂಬಾರನಹಳ್ಳಿಯಲ್ಲಿ ದುನಿಯಾ ವಿಜಯ್​ ತಾಯಿ ನಾರಾಯಣಮ್ಮ ಅಂತ್ಯಕ್ರಿಯೆ
ದುನಿಯಾ ವಿಜಯ್​, ನಾರಾಯಣಮ್ಮ
TV9 Web
| Edited By: |

Updated on: Jul 09, 2021 | 5:28 PM

Share

ಖ್ಯಾತ ನಟ ದುನಿಯಾ ವಿಜಯ್​ ಅವರ ತಾಯಿ ನಾರಾಯಣಮ್ಮ ಅಂತಿಮ‌ ಯಾತ್ರೆ ಮುಗಿಸಿದ್ದಾರೆ. ಅನಾರೋಗ್ಯದಿಂದ ಮೃತರಾದ ಅವರ ಅಂತ್ಯ ಸಂಸ್ಕಾರವನ್ನು ಶುಕ್ರವಾರ (ಜು.9) ನೆರವೇರಿಸಲಾಯಿತು. ಆನೇಕಲ್​ನ‌ ಕುಂಬಾರನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ನಾರಾಯಣಮ್ಮ ಅವರ ಅಂತಿಮ ಸಂಸ್ಕಾರದಲ್ಲಿ ದುನಿಯಾ ವಿಜಯ್​ ಹಾಗೂ ಕುಟುಂಬದ ಇತರೆ ಸದಸ್ಯರು ಭಾಗಿ ಆಗಿದ್ದರು. ದುನಿಯಾ ವಿಜಯ್​ ತಂದೆಯ ಊರು ಆನೇಕಲ್ ತಾಲ್ಲೂಕಿನ ಕುಂಬಾರನಹಳ್ಳಿ. ಹಾಗಾಗಿ ಅಲ್ಲಿಯೇ ನಾರಾಯಣಮ್ಮ ಅವರ ಅಂತ್ಯಕ್ರಿಯೆ ಮಾಡಲಾಗಿದೆ.

ಕೆಲವೇ ದಿನಗಳ ಹಿಂದೆ ನಾರಾಯಣಮ್ಮ ಅವರು ಕೊವಿಡ್​ನಿಂದ ಚೇತರಿಸಿಕೊಂಡಿದ್ದರು. ಬಳಿಕ ಅವರಿಗೆ ಮತ್ತೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಬ್ರೇನ್​ ಸ್ಟ್ರೋಕ್​ ಆದ ಪರಿಣಾಮ ಪರಿಸ್ಥಿತಿ ಚಿಂತಾಜನಕ ಆಗಿತ್ತು. ಆದರೂ ಅವರಿಗೆ ಆಸ್ಪತ್ರೆಗೆ ಹೋಗಲು ಇಷ್ಟ ಇರಲಿಲ್ಲ. ಹಾಗಾಗಿ ಮನೆಯಲ್ಲಿಯೇ ವಿಜಯ್​ ಅವರು ತಾಯಿಯ ಆರೈಕೆ ಮಾಡುತ್ತಿದ್ದರು. ಆದರೂ ಚಿಕಿತ್ಸೆ ಫಲಕಾರಿ ಆಗದೇ ಅವರು ಗುರುವಾರ (ಜು.8) ಕೊನೆಯುಸಿರು ಎಳೆದರು.

ತಾಯಿ ಗುಣಮುಖರಾಗುತ್ತಾರೆ ಎಂದು ದುನಿಯಾ ವಿಜಯ್​ ಬಹಳ ನಂಬಿಕೆ ಇಟ್ಟುಕೊಂಡಿದ್ದರು. ಆ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯಿಸಿದ್ದರು. ‘ಮನೆಯಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ತಾಯಿ ಮತ್ತೆ ಸಿಗಲ್ಲ, ಅವರು ಇರುವವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋದಷ್ಟೇ ನನ್ನ ಆಸೆ. ಪ್ರತಿದಿನ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಆದರೆ ಮತ್ತೆ ಆರೋಗ್ಯ ಸರಿಯಾಗುತ್ತೆ ಎಂಬ ವಿಶ್ವಾಸವಿದೆ’ ಎಂದು ಅವರು ಹೇಳಿದ್ದರು. ಆದರೆ ನಾರಾಯಣಮ್ಮ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ.

ನಾರಾಯಣಮ್ಮ ನಿಧನಕ್ಕೆ ಗಾಯಕ ನವೀನ್​ ಸಜ್ಜು ಕಂಬನಿ ಮಿಡಿದಿದ್ದಾರೆ. ‘ದುನಿಯಾ ವಿಜಯ್​ ಅಮ್ಮ ನಮ್ಮನ್ನೆಲ್ಲಾ ಬಿಟ್ಟು ಹೋಗಿದ್ದಾರೆ. ಮನೆಗೆ ಹೋದಾಗಲೆಲ್ಲ ಮಗನೇ ಎಂದೇ ಬಾಯ್ತುಂಬ ಕರೆಯುತ್ತಿದ್ದ ಅಮ್ಮ, ನಮ್ಮನ್ನು ನೋಡಿಕೊಳ್ಳುತ್ತಿದ್ದ ಪ್ರೀತಿಗೆ ಸರಿಸಾಟಿಯೇ ಇಲ್ಲ. ಅವರಿಗೆ ನಾನು ಹಾಡುವ ‘ಒಳಿತು ಮಾಡು ಮನುಸ, ನೀ ಇರೋದು ಮೂರೇ ದಿವಸ’ ಹಾಡೆಂದರೆ ಬಹಳ ಇಷ್ಟ. ಅವರಿಗೆ ಇಷ್ಟವಾದಾಗಲೆಲ್ಲ ಈ ಹಾಡು ಹೇಳಪ್ಪ ಎಂದು ಹೇಳಿ ಕೇಳುತ್ತಿದ್ದರು. ಹಾಡು ಕೇಳಿ ಮೌನವಾಗಿ ಕಣ್ಣಂಚಲ್ಲಿ ನೀರು ತಂದುಕೊಳ್ಳುತ್ತಿದ್ದರು. ಸಮಾಧಾನಪಟ್ಟುಕೊಳ್ಳುತ್ತಿದ್ದರು’ ಎಂದು ನವೀನ್​ ಸಜ್ಜು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:

ಕೋಮಾ ಸ್ಥಿತಿಯಲ್ಲೂ ನವೀನ್​ ಸಜ್ಜು ಹಾಡು ಕೇಳಿ ಅತ್ತಿದ್ದ ದುನಿಯಾ ವಿಜಯ್​ ತಾಯಿ; ವಿಡಿಯೋ ಹಂಚಿಕೊಂಡ ಗಾಯಕ

‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!