AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್ಟೇರಿತು ದುನಿಯಾ ವಿಜಯ್ ಹೊಸ ಸಿನಿಮಾ; ಚಿತ್ರರಂಗಕ್ಕೆ ಮಗಳ ಎಂಟ್ರಿ

ದುನಿಯಾ ವಿಜಯ್ ಅವರ 29ನೇ ಸಿನಿಮಾದ ಪೋಸ್ಟರ್ ರಿವೀಲ್ ಆಗಿದೆ. ಕತ್ತಿ ಹಾಗೂ ಕೊಡಲಿ ಹಿಡಿದು ದುನಿಯಾ ವಿಜಯ್ ನಿಂತಿದ್ದಾರೆ. ಎದುರು ಭಾಗದಲ್ಲಿರುವ ಕಟ್ಟಡ ಬೆಂಕಿಯಿಂದ ಹತ್ತಿ ಉರಿಯುತ್ತಿದೆ. ಇದಕ್ಕೆ ‘ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ’ ಎನ್ನುವ ಲೈನ್ ಕೂಡ ಇದೆ.

ಸೆಟ್ಟೇರಿತು ದುನಿಯಾ ವಿಜಯ್ ಹೊಸ ಸಿನಿಮಾ; ಚಿತ್ರರಂಗಕ್ಕೆ ಮಗಳ ಎಂಟ್ರಿ
ಮೋನಿಕಾ
ರಾಜೇಶ್ ದುಗ್ಗುಮನೆ
|

Updated on: Apr 11, 2024 | 10:26 AM

Share

ದುನಿಯಾ ವಿಜಯ್ (Duniya Vijay) ನಟನೆಯ ಹೊಸ ಸಿನಿಮಾ (ಏಪ್ರಿಲ್ 11) ಘೋಷಣೆ ಆಗಿದೆ. ‘ದುನಿಯಾ’ ವಿಜಯ್‍ ಅಭಿನಯದ 29ನೇ ಚಿತ್ರ ಇದಾಗಿದ್ದು, ಮುಹೂರ್ತ ಇಂದೇ ನಡೆದಿದೆ. ಈ ಚಿತ್ರದ ಮೂಲಕ ಅವರ ಮಗಳು ಮೋನಿಕಾ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ಸಿನಿಮಾಗೆ ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರಿಗೆ ನಿರ್ದೇಶನದಲ್ಲೂ ಸಾಕಷ್ಟು ಅನುಭವ ಇದೆ.

ದುನಿಯಾ ವಿಜಯ್ ಅವರ 29ನೇ ಸಿನಿಮಾದ ಪೋಸ್ಟರ್ ರಿವೀಲ್ ಆಗಿದೆ. ಕತ್ತಿ ಹಾಗೂ ಕೊಡಲಿ ಹಿಡಿದು ದುನಿಯಾ ವಿಜಯ್ ನಿಂತಿದ್ದಾರೆ. ಎದುರು ಭಾಗದಲ್ಲಿರುವ ಕಟ್ಟಡ ಬೆಂಕಿಯಿಂದ ಹತ್ತಿ ಉರಿಯುತ್ತಿದೆ. ಇದಕ್ಕೆ ‘ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ’ ಎನ್ನುವ ಲೈನ್ ಕೂಡ ಇದೆ. ಇದರಿಂದ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ.

ದುನಿಯಾ ವಿಜಯ್ ಅವರಿಗೆ ಮಗ ಸಾಮ್ರಾಟ್‍ನನ್ನು ಚಿತ್ರರಂಗಕ್ಕೆ ಪರಿಚಯಿಸಬೇಕು ಎಂಬ ಆಸೆ ಇದೆ. ಇದಕ್ಕಾಗಿಯೇ ಅವರು ಕೆಲ ವರ್ಷಗಳ ಹಿಂದೆ ‘ಕುಸ್ತಿ’ ಹೆಸರಿನ ಸಿನಿಮಾ ಅನೌನ್ಸ್ ಮಾಡಿದ್ದರು. ಆದರೆ, ಸಿನಿಮಾದ ಶೂಟಿಂಗ್ ಪ್ರಾರಂಭ ಆಗಿರಲಿಲ್ಲ. ಈಗ ಅವರ ಮಗಳು ಈ ಸಿನಿಮಾದಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ.  ಮೋನಿಕಾ ಅವರು ಸಿನಿಮಾದಲ್ಲಿ ವಿಜಯ್‍ ಮಗಳಾಗಿಯೇ ಚಿತ್ರದಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ಚಿತ್ರಕ್ಕೆ ರಚಿತಾ ರಾಮ್‍ ನಾಯಕಿ ಎನ್ನಲಾಗಿದೆ.

ಇದನ್ನೂ ಓದಿ: ‘ರಾಬರ್ಟ್’ ಟೈಟಲ್ ಹುಟ್ಟಿದ್ದು ಹೇಗೆ? ‘ಕಾಟೇರ’ ಕತೆ ಪ್ರಾರಂಭವಾಗಿದ್ದು ಹೇಗೆ?

ಜಡೇಶ್‍ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್‍’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಾರಥಿ’ ಸಿನಿಮಾದ ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್‍ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ