‘ಭೀಮ’ನಾಗಿ ರೌದ್ರಾವತಾರ ತಾಳಿದ ‘ದುನಿಯಾ’ ವಿಜಯ್; ‘ಕೆಣಕದಿದ್ರೆ ಕ್ಷೇಮ’

| Updated By: ರಾಜೇಶ್ ದುಗ್ಗುಮನೆ

Updated on: Mar 01, 2022 | 5:49 PM

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

‘ಭೀಮ’ನಾಗಿ ರೌದ್ರಾವತಾರ ತಾಳಿದ ‘ದುನಿಯಾ’ ವಿಜಯ್; ‘ಕೆಣಕದಿದ್ರೆ ಕ್ಷೇಮ’
ವಿಜಯ್
Follow us on

ಶಿವರಾತ್ರಿ ಹಬ್ಬದಂದು ಸಿನಿಪ್ರಿಯರಿಗೆ ಸರ್​ಪ್ರೈಸ್​ ಮೇಲೆ ಸರ್​ಪ್ರೈಸ್ ಸಿಗುತ್ತಿದೆ. ಹಲವು ಚಿತ್ರತಂಡಗಳು ಈ ವಿಶೇಷ ದಿನದಂದು ಹೊಸಹೊಸ ಅಪ್​ಡೇಟ್​ ನೀಡುತ್ತಿವೆ. ಈಗ ದುನಿಯಾ ವಿಜಯ್​ ಕಡೆಯಿಂದ ಅವರ ಮುಂದಿನ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ಸಿಕ್ಕಿದೆ.  ಕಳೆದ ವರ್ಷ ತೆರೆಗೆ ಬಂದ ದುನಿಯಾ ವಿಜಯ್ (Duniya Vijay)​ ನಟನೆಯ ‘ಸಲಗ’ ಸಿನಿಮಾ (Salaga Movie) ಮಾಡಿದ ಹವಾ ಅಷ್ಟಿಷ್ಟಲ್ಲ. ಈ ಚಿತ್ರದಲ್ಲಿ ದುನಿಯಾ ವಿಜಯ್​ ನಟಿಸೋದು ಮಾತ್ರವಲ್ಲ, ಆ್ಯಕ್ಷನ್​ ಕಟ್​ ಕೂಡ ಹೇಳಿದ್ದರು. ಮೊದಲ ನಿರ್ದೇಶನದಲ್ಲೇ ಅವರು ಗೆದ್ದು ಬೀಗಿದ್ದರು. ಇತ್ತೀಚೆಗೆ ಚಿತ್ರತಂಡ ಈ ಸಿನಿಮಾ ಯಶಸ್ಸನ್ನು ಸಂಭ್ರಮಿಸಿತ್ತು. ‘ಸಲಗ’ ಬಳಿಕ ಮತ್ತೆ ನಿರ್ದೇಶನಕ್ಕೆ ಇಳಿಯೋಕೆ ದುನಿಯಾ ವಿಜಯ್​ ರೆಡಿ ಆಗಿದ್ದಾರೆ . ಶಿವರಾತ್ರಿ ಪ್ರಯುಕ್ತ ಸಿನಿಮಾದ ಟೈಟಲ್​ ಘೋಷಣೆ ಆಗಿದ್ದು, ‘ಭೀಮ’ (Bheema Movie) ಎಂದು ಇಡಲಾಗಿದೆ.

‘ಸಲಗ’ ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ರೌಡಿಸಂನ ಕಥೆ ಹೇಳಿದ್ದರು. ಈ ಚಿತ್ರವನ್ನು ಅದ್ಭುತವಾಗಿ ಕಟ್ಟಿಕೊಟ್ಟಿದ್ದರು. ಈ ಸಿನಿಮಾ ಬಗ್ಗೆ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಅನೇಕ ಸ್ಟಾರ್​ ನಟರು ಈ ಚಿತ್ರವನ್ನು ಹೊಗಳಿದ್ದರು. ಈ ಯಶಸ್ಸಿನಿಂದ ವಿಜಯ್​ ಅವರ ಕಾನ್ಫಿಡೆನ್ಸ್​ ಹೆಚ್ಚಿದೆ. ಹೀಗಾಗಿ, ಹೊಸ ಸಿನಿಮಾ ನಿರ್ದೇಶನಕ್ಕೆ ಇಳಿದಿದ್ದಾರೆ.

ವಿಜಯ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಟೈಟಲ್​ ಅನೌನ್ಸ್​ ಮಾಡುವುದರ ಜತೆಗೆ ಮೋಷನ್ ವಿಡಿಯೋ ​​ಹಂಚಿಕೊಂಡಿದ್ದಾರೆ. ವಿಜಯ್​ ಅವರ ಮುಖ ರಕ್ತಸಿಕ್ತವಾಗಿದೆ. ಸಿನಿಮಾ ಟೈಟಲ್​ ಅಡಿಗೆ ‘ಕೆಣಕದಿದ್ರೆ ಕ್ಷೇಮ’ ಎನ್ನುವ ಟ್ಯಾಗ್​ಲೈನ್​ ನೀಡಲಾಗಿದೆ. ವಿಜಯ್​ ನಟನೆಯ 28ನೇ ಸಿನಿಮಾ ಇದಾಗಿದ್ದು, ಕೃಷ್ಣ ಸಾರ್ಥಕ್​ ಹಾಗೂ ಜಗದೀಶ್​ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಮೊದಲು ಹಂಚಿಕೊಂಡಿದ್ದ ಪೋಸ್ಟರ್​ನಲ್ಲಿ ಕೈ ಹಾಗೂ ಯಮಹಾ ಆರ್​ಎಕ್ಸ್​ 100 ಬೈಕ್​ ತೋರಿಸಲಾಗಿತ್ತು.

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಅಭಿನಯಿಸಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್​ ನಟಿಸಲಿದ್ದಾರೆ.  ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಗೋಪಿಚಂದ್​ ಮಲಿನೇನಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಇದು ನಂದಮೂರಿ ಬಾಲಕೃಷ್ಣ ನಟಿಸಲಿರುವ 107ನೇ ಸಿನಿಮಾವಾಗಿದ್ದು, ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್​ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ರಾಯಲಸೀಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿಬರಲಿದೆ. ನೈಜ ಘಟನೆಗಳನ್ನು ಆಧರಿಸಿ ನಿರ್ದೇಶಕರು ಈ ಚಿತ್ರ ಮಾಡುತ್ತಿದ್ದಾರೆ. ಸದ್ಯ ಪಾತ್ರವರ್ಗದ ಆಯ್ಕೆ ನಡೆಯುತ್ತಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಮೈತ್ರಿ ಮೂವೀ ಮೇಕರ್ಸ್​’ ಈ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: Duniya Vijay: ಕೊರೊನಾದಿಂದ ಗುಣಮುಖರಾಗಿದ್ದ ದುನಿಯಾ ವಿಜಯ್ ತಾಯಿ ಆರೋಗ್ಯದಲ್ಲಿ ಏರುಪೇರು..

NBK107: ದುನಿಯಾ ವಿಜಯ್ ಆಯ್ತು, ಇದೀಗ ‘ಮಾಣಿಕ್ಯ’ದ ಬೆಡಗಿಯ ಸರದಿ; ಹಿರಿದಾಗುತ್ತಿದೆ ‘ಎನ್​ಬಿಕೆ107’ ತಾರಾಗಣ

Published On - 5:48 pm, Tue, 1 March 22