AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿದು ಉಳಿದವರ ಕಥೆ ಹೇಳಲು ಬಂದ ‘ಕಾಟೇರ’ ಕಥೆಗಾರ; ದುನಿಯಾ ವಿಜಯ್ ಜೊತೆ ಹೊಸ ಸಿನಿಮಾ

ಜಯ್ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹಾಗೂ ಜಡೇಶ್ ಸಿನಿಮಾ ಅನೌನ್ಸ್ ಆಗಿದೆ. ಇದಕ್ಕೆ ತಾತ್ಕಾಲಿಕವಾಗಿ ‘VK29’ ಎಂದು ಶೀರ್ಷಿಕೆ ಇಡಲಾಗಿದೆ. ಶ್ವಾನ ಹಾಗೂ ಹುಲಿ ಕಿತ್ತಾಡಲು ರೆಡಿ ಆಗಿರೋ ದೃಶ್ಯ ಈ ಪೋಸ್ಟರ್​ನಲ್ಲಿದೆ.

ಅಳಿದು ಉಳಿದವರ ಕಥೆ ಹೇಳಲು ಬಂದ ‘ಕಾಟೇರ’ ಕಥೆಗಾರ; ದುನಿಯಾ ವಿಜಯ್ ಜೊತೆ ಹೊಸ ಸಿನಿಮಾ
ವಿಜಯ್
Follow us
ರಾಜೇಶ್ ದುಗ್ಗುಮನೆ
|

Updated on:Jan 20, 2024 | 10:23 AM

ಇತ್ತೀಚೆಗೆ ರಿಲೀಸ್ ಆದ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Kaatera Movie) ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಣ್ಣಿನ ಕಥೆ ಜನರಿಗೆ ಇಷ್ಟ ಆಗಿದೆ. ಈ ಸಿನಿಮಾಗೆ ಕಥೆ ಬರೆದಿದ್ದು ಜಡೇಶ್ ಕುಮಾರ್ ಹಂಪಿ. ಅವರು ಈಗ ದುನಿಯಾ ವಿಜಯ್ ಜೊತೆ ಕೈ ಜೋಡಿಸಿದ್ದಾರೆ. ವಿಜಯ್ ನಟನೆಯ 29ನೇ ಸಿನಿಮಾಗೆ ಜಡೇಶ್ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಜನವರಿ 20) ದುನಿಯಾ ವಿಜಯ್ ಬರ್ತ್​ಡೇ. ಆ ಪ್ರಯುಕ್ತ ಸಿನಿಮಾ ಅನೌನ್ಸ್ ಆಗಿದೆ.

ಮಣ್ಣಿನ ಕಥೆಗಳಿಗೆ ಜಡೇಶ್ ಕುಮಾರ್ ಹಂಪಿ ಹೆಸರುವಾಸಿಯಾಗಿದ್ದಾರೆ. ಜಡೇಶ್ ಅವರ ಕಥೆಗಳು ಜನರಿಗೆ ಇಷ್ಟ ಆಗುತ್ತವೆ. ‘ಕಾಟೇರ’ ಗೆಲುವಿನ ಬಳಿಕ ಅವರ ಖ್ಯಾತಿಯೂ ಹೆಚ್ಚಿದೆ. ಈಗ ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹಾಗೂ ಜಡೇಶ್ ಸಿನಿಮಾ ಅನೌನ್ಸ್ ಆಗಿದೆ. ಇದಕ್ಕೆ ತಾತ್ಕಾಲಿಕವಾಗಿ ‘VK29’ ಎಂದು ಶೀರ್ಷಿಕೆ ಇಡಲಾಗಿದೆ. ಶ್ವಾನ ಹಾಗೂ ಹುಲಿ ಕಿತ್ತಾಡಲು ರೆಡಿ ಆಗಿರೋ ದೃಶ್ಯ ಈ ಪೋಸ್ಟರ್​ನಲ್ಲಿದೆ. ‘ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ.’ ಅನ್ನೋ ಅಡಿ ಬರಹ ಗಮನ ಸೆಳೆದಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಅಪ್​ಡೇಟ್ ಕೊಟ್ಟ ದುನಿಯಾ ವಿಜಯ್

ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಮಗಳು ಮೋನಿಕಾ ನಟಿಸುತ್ತಿದ್ದಾರೆ. ವಿಜಯ್ ಹಾಗೂ ಮೋನಿಕಾ ತಂದೆ ಮಗಳ ಪಾತ್ರದಲ್ಲಿ ನಟಿಸಲಿದ್ದಾರೆ.  ಸದ್ಯ ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಕ್ಕೆ ಬಂಡವಾಳ ಹೂಡಿರುವಂತಹ ಜಗದೀಶ್ ಗೌಡ ಅವರೇ ‘VK29’ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಈ ಚಿತ್ರದ ಕುರಿತು ಇನ್ನಷ್ಟು ವಿಚಾರಗಳನ್ನ ‘ಭೀಮ’ ರಿಲೀಸ್ ಬಳಿಕ ತಂಡ ಬಿಟ್ಟುಕೊಡಲಿದೆ.

‘ಭೀಮ’ ಟೀಸರ್

ದುನಿಯಾ ವಿಜಯ್ ಬರ್ತ್​ಡೇ ಪ್ರಯುಕ್ತ ‘ಭೀಮ’ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​ನಲ್ಲಿ ದುನಿಯಾ ವಿಜಯ್ ಅವರು ಖಡಕ್ ಅವತಾರ ಹಾಗೂ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದಾರೆ. ಈ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ಬಳಿಯ ಕುಂಬಾರಹಳ್ಳಿಯಲ್ಲಿ ವಿಜಯ್ ಅವರು ತಮ್ಮ ಬರ್ತ್​ಡೇ ಅನ್ನು ತಂದೆ, ತಾಯಿ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ವಿಜಯ್​ಗೆ ಸಾಥ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Sat, 20 January 24

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್