AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿದು ಉಳಿದವರ ಕಥೆ ಹೇಳಲು ಬಂದ ‘ಕಾಟೇರ’ ಕಥೆಗಾರ; ದುನಿಯಾ ವಿಜಯ್ ಜೊತೆ ಹೊಸ ಸಿನಿಮಾ

ಜಯ್ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹಾಗೂ ಜಡೇಶ್ ಸಿನಿಮಾ ಅನೌನ್ಸ್ ಆಗಿದೆ. ಇದಕ್ಕೆ ತಾತ್ಕಾಲಿಕವಾಗಿ ‘VK29’ ಎಂದು ಶೀರ್ಷಿಕೆ ಇಡಲಾಗಿದೆ. ಶ್ವಾನ ಹಾಗೂ ಹುಲಿ ಕಿತ್ತಾಡಲು ರೆಡಿ ಆಗಿರೋ ದೃಶ್ಯ ಈ ಪೋಸ್ಟರ್​ನಲ್ಲಿದೆ.

ಅಳಿದು ಉಳಿದವರ ಕಥೆ ಹೇಳಲು ಬಂದ ‘ಕಾಟೇರ’ ಕಥೆಗಾರ; ದುನಿಯಾ ವಿಜಯ್ ಜೊತೆ ಹೊಸ ಸಿನಿಮಾ
ವಿಜಯ್
ರಾಜೇಶ್ ದುಗ್ಗುಮನೆ
|

Updated on:Jan 20, 2024 | 10:23 AM

Share

ಇತ್ತೀಚೆಗೆ ರಿಲೀಸ್ ಆದ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Kaatera Movie) ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಣ್ಣಿನ ಕಥೆ ಜನರಿಗೆ ಇಷ್ಟ ಆಗಿದೆ. ಈ ಸಿನಿಮಾಗೆ ಕಥೆ ಬರೆದಿದ್ದು ಜಡೇಶ್ ಕುಮಾರ್ ಹಂಪಿ. ಅವರು ಈಗ ದುನಿಯಾ ವಿಜಯ್ ಜೊತೆ ಕೈ ಜೋಡಿಸಿದ್ದಾರೆ. ವಿಜಯ್ ನಟನೆಯ 29ನೇ ಸಿನಿಮಾಗೆ ಜಡೇಶ್ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಜನವರಿ 20) ದುನಿಯಾ ವಿಜಯ್ ಬರ್ತ್​ಡೇ. ಆ ಪ್ರಯುಕ್ತ ಸಿನಿಮಾ ಅನೌನ್ಸ್ ಆಗಿದೆ.

ಮಣ್ಣಿನ ಕಥೆಗಳಿಗೆ ಜಡೇಶ್ ಕುಮಾರ್ ಹಂಪಿ ಹೆಸರುವಾಸಿಯಾಗಿದ್ದಾರೆ. ಜಡೇಶ್ ಅವರ ಕಥೆಗಳು ಜನರಿಗೆ ಇಷ್ಟ ಆಗುತ್ತವೆ. ‘ಕಾಟೇರ’ ಗೆಲುವಿನ ಬಳಿಕ ಅವರ ಖ್ಯಾತಿಯೂ ಹೆಚ್ಚಿದೆ. ಈಗ ವಿಜಯ್ ಹುಟ್ಟುಹಬ್ಬದ ಪ್ರಯುಕ್ತ ದುನಿಯಾ ವಿಜಯ್ ಹಾಗೂ ಜಡೇಶ್ ಸಿನಿಮಾ ಅನೌನ್ಸ್ ಆಗಿದೆ. ಇದಕ್ಕೆ ತಾತ್ಕಾಲಿಕವಾಗಿ ‘VK29’ ಎಂದು ಶೀರ್ಷಿಕೆ ಇಡಲಾಗಿದೆ. ಶ್ವಾನ ಹಾಗೂ ಹುಲಿ ಕಿತ್ತಾಡಲು ರೆಡಿ ಆಗಿರೋ ದೃಶ್ಯ ಈ ಪೋಸ್ಟರ್​ನಲ್ಲಿದೆ. ‘ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ.’ ಅನ್ನೋ ಅಡಿ ಬರಹ ಗಮನ ಸೆಳೆದಿದೆ.

ಇದನ್ನೂ ಓದಿ: ಬರ್ತ್​ಡೇ ದಿನ ಮಕ್ಕಳ ಸಿನಿಮಾ ಜರ್ನಿ ಬಗ್ಗೆ ಅಪ್​ಡೇಟ್ ಕೊಟ್ಟ ದುನಿಯಾ ವಿಜಯ್

ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರ ಹಿರಿಯ ಮಗಳು ಮೋನಿಕಾ ನಟಿಸುತ್ತಿದ್ದಾರೆ. ವಿಜಯ್ ಹಾಗೂ ಮೋನಿಕಾ ತಂದೆ ಮಗಳ ಪಾತ್ರದಲ್ಲಿ ನಟಿಸಲಿದ್ದಾರೆ.  ಸದ್ಯ ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದಕ್ಕೆ ಬಂಡವಾಳ ಹೂಡಿರುವಂತಹ ಜಗದೀಶ್ ಗೌಡ ಅವರೇ ‘VK29’ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಈ ಚಿತ್ರದ ಕುರಿತು ಇನ್ನಷ್ಟು ವಿಚಾರಗಳನ್ನ ‘ಭೀಮ’ ರಿಲೀಸ್ ಬಳಿಕ ತಂಡ ಬಿಟ್ಟುಕೊಡಲಿದೆ.

‘ಭೀಮ’ ಟೀಸರ್

ದುನಿಯಾ ವಿಜಯ್ ಬರ್ತ್​ಡೇ ಪ್ರಯುಕ್ತ ‘ಭೀಮ’ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​ನಲ್ಲಿ ದುನಿಯಾ ವಿಜಯ್ ಅವರು ಖಡಕ್ ಅವತಾರ ಹಾಗೂ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದಾರೆ. ಈ ಟೀಸರ್ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ ಬಳಿಯ ಕುಂಬಾರಹಳ್ಳಿಯಲ್ಲಿ ವಿಜಯ್ ಅವರು ತಮ್ಮ ಬರ್ತ್​ಡೇ ಅನ್ನು ತಂದೆ, ತಾಯಿ ಸಮಾಧಿ ಬಳಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳು ವಿಜಯ್​ಗೆ ಸಾಥ್ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:21 am, Sat, 20 January 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್