AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ನಟನೆಯ ಸಲಗ ರಿಲೀಸ್​ ಡೇಟ್​ ಬಗ್ಗೆ ಇಲ್ಲಿದೆ ಲೇಟೆಸ್ಟ್​ ನ್ಯೂಸ್​

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ.

ದುನಿಯಾ ವಿಜಯ್​ ನಟನೆಯ ಸಲಗ ರಿಲೀಸ್​ ಡೇಟ್​ ಬಗ್ಗೆ ಇಲ್ಲಿದೆ ಲೇಟೆಸ್ಟ್​ ನ್ಯೂಸ್​
ದುನಿಯಾ ವಿಜಯ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 13, 2021 | 2:50 PM

Share

ದೇಶಾದ್ಯಂತ ಕಾಣಿಸಿಕೊಂಡಿದ್ದ ಕೊರೊನಾ ಎರಡನೇ ಅಲೆ ಸಾಕಷ್ಟು ತೊಂದರೆ ತಂದಿತ್ತು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿದ್ದ ಲಾಕ್​ಡೌನ್​ನಿಂದ ಚಿತ್ರಮಂದಿರಗಳು ಮುಚ್ಚಲ್ಪಟ್ಟಿದ್ದವು. ಈಗ ಕೊವಿಡ್​ ಪ್ರಕರಣ ಕಡಿಮೆ ಆದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲಾಗಿದೆ. ಆದರೆ, ಶೇ.100 ಆಸನ ವ್ಯವಸ್ಥೆಗೆ ಸರ್ಕಾರ ಅವಕಾಶ ನೀಡಿಲ್ಲ. ಇದರ ಜತೆಗೆ ಕೊರೊನಾ ಮೂರನೇ ಅಲೆ ಭೀತಿ ಕೂಡ ಕಾಡಿದೆ. ಈ ಹಿನ್ನೆಲೆಯಲ್ಲಿ ಸಲಗ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಹೀಗಾಗಿ, ಆಗಸ್ಟ್ 20 ‘ಸಲಗ’ ರಿಲೀಸ್ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಈಗ ಮತ್ತೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಇಂದು ಚಿತ್ರತಂಡ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ಈ ವಿಚಾರ ಬಹಿರಂಗ ಮಾಡಿದ್ದಾರೆ. ಕೊರೊನಾ 3ನೇ ಅಲೆ ಭೀತಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್‌ 10ರಂದು ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರ ರಿಲೀಸ್​ ಆಗುತ್ತಿದೆ. ನಿರ್ದೇಶಕ ಹರ್ಷ ಹಾಗೂ ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಬಂದ ಭಜರಂಗಿ ಚಿತ್ರ ದೊಡ್ಡಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಕಾಂಬಿನೇಷನ್​ನಲ್ಲಿ  ‘ಭಜರಂಗಿ 2’ ಸಿದ್ಧಗೊಂಡಿದೆ.  ಈ ಚಿತ್ರಕ್ಕೂ ಈಗ ಕೊರೊನಾ ಭೀತಿ ಕಾಡಿದ್ದು, ಈ ಚಿತ್ರದ ರಿಲೀಸ್​ ತಡವಾಗಬಹುದು.

ಇದನ್ನೂ ಓದಿ: ‘ಸಲಗ’ ಚಿತ್ರದ ಹಾಡಿಗೆ ಸಿಕ್ಕ ಯಶಸ್ಸಿನ ಹಿನ್ನೆಲೆ; ವೇದಿಕೆಯಲ್ಲೇ ಭಾವುಕರಾದ ಗೀತಾ ಸಿದ್ದಿ 

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

Published On - 2:44 pm, Fri, 13 August 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!