AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್​ ನಟನೆಯ ಸಲಗ ರಿಲೀಸ್​ ಡೇಟ್​ ಬಗ್ಗೆ ಇಲ್ಲಿದೆ ಲೇಟೆಸ್ಟ್​ ನ್ಯೂಸ್​

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ.

ದುನಿಯಾ ವಿಜಯ್​ ನಟನೆಯ ಸಲಗ ರಿಲೀಸ್​ ಡೇಟ್​ ಬಗ್ಗೆ ಇಲ್ಲಿದೆ ಲೇಟೆಸ್ಟ್​ ನ್ಯೂಸ್​
ದುನಿಯಾ ವಿಜಯ್
TV9 Web
| Edited By: |

Updated on:Aug 13, 2021 | 2:50 PM

Share

ದೇಶಾದ್ಯಂತ ಕಾಣಿಸಿಕೊಂಡಿದ್ದ ಕೊರೊನಾ ಎರಡನೇ ಅಲೆ ಸಾಕಷ್ಟು ತೊಂದರೆ ತಂದಿತ್ತು. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಜಾರಿಗೆ ತಂದಿದ್ದ ಲಾಕ್​ಡೌನ್​ನಿಂದ ಚಿತ್ರಮಂದಿರಗಳು ಮುಚ್ಚಲ್ಪಟ್ಟಿದ್ದವು. ಈಗ ಕೊವಿಡ್​ ಪ್ರಕರಣ ಕಡಿಮೆ ಆದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳನ್ನು ತೆರೆಯಲಾಗಿದೆ. ಆದರೆ, ಶೇ.100 ಆಸನ ವ್ಯವಸ್ಥೆಗೆ ಸರ್ಕಾರ ಅವಕಾಶ ನೀಡಿಲ್ಲ. ಇದರ ಜತೆಗೆ ಕೊರೊನಾ ಮೂರನೇ ಅಲೆ ಭೀತಿ ಕೂಡ ಕಾಡಿದೆ. ಈ ಹಿನ್ನೆಲೆಯಲ್ಲಿ ಸಲಗ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಹೀಗಾಗಿ, ಆಗಸ್ಟ್ 20 ‘ಸಲಗ’ ರಿಲೀಸ್ ಮಾಡುತ್ತೇವೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಈಗ ಮತ್ತೆ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಇಂದು ಚಿತ್ರತಂಡ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ಈ ವಿಚಾರ ಬಹಿರಂಗ ಮಾಡಿದ್ದಾರೆ. ಕೊರೊನಾ 3ನೇ ಅಲೆ ಭೀತಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗಣೇಶ ಚತುರ್ಥಿ ಪ್ರಯುಕ್ತ ಸೆಪ್ಟೆಂಬರ್‌ 10ರಂದು ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರ ರಿಲೀಸ್​ ಆಗುತ್ತಿದೆ. ನಿರ್ದೇಶಕ ಹರ್ಷ ಹಾಗೂ ನಟ ಶಿವರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಬಂದ ಭಜರಂಗಿ ಚಿತ್ರ ದೊಡ್ಡಮಟ್ಟದಲ್ಲಿ ಹಿಟ್​ ಆಗಿತ್ತು. ಇದೇ ಕಾಂಬಿನೇಷನ್​ನಲ್ಲಿ  ‘ಭಜರಂಗಿ 2’ ಸಿದ್ಧಗೊಂಡಿದೆ.  ಈ ಚಿತ್ರಕ್ಕೂ ಈಗ ಕೊರೊನಾ ಭೀತಿ ಕಾಡಿದ್ದು, ಈ ಚಿತ್ರದ ರಿಲೀಸ್​ ತಡವಾಗಬಹುದು.

ಇದನ್ನೂ ಓದಿ: ‘ಸಲಗ’ ಚಿತ್ರದ ಹಾಡಿಗೆ ಸಿಕ್ಕ ಯಶಸ್ಸಿನ ಹಿನ್ನೆಲೆ; ವೇದಿಕೆಯಲ್ಲೇ ಭಾವುಕರಾದ ಗೀತಾ ಸಿದ್ದಿ 

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

Published On - 2:44 pm, Fri, 13 August 21

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!