AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಿ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​! ಸಲಗ ರಿಲೀಸ್​ಗೆ ಏನಿದು ವಿಘ್ನ?

ಈಗಾಗಲೇ ಚಿತ್ರರಂಗ ಸಂಕಷ್ಟದಲ್ಲಿದೆ. ಸರ್ಕಾರ ನಮಗೆ ಅವಕಾಶ ನೀಡಬೇಕು. ಸಾಕಷ್ಟು ಚಿತ್ರ ರೀಲೀಸ್​ಗೆ ಕಾಯುತ್ತಿವೆ. ಹೀಗಾಗಿ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರಬೇಕು ಎಂದು ದುನಿಯಾ ವಿಜಯ್ ಆಗ್ರಹಿಸಿದ್ದಾರೆ.

ದುನಿಯಾ ವಿಜಿ ಅಭಿಮಾನಿಗಳಿಗೆ ಬ್ಯಾಡ್​ ನ್ಯೂಸ್​! ಸಲಗ ರಿಲೀಸ್​ಗೆ ಏನಿದು ವಿಘ್ನ?
ದುನಿಯಾ ವಿಜಯ್​
ರಾಜೇಶ್ ದುಗ್ಗುಮನೆ
|

Updated on: Apr 04, 2021 | 5:40 PM

Share

ಸಲಗ ಸಿನಿಮಾ ಸ್ಯಾಂಡಲ್​ವುಡ್​ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ತೆರೆಕಾಣಬೇಕಿತ್ತು. ಆದರೆ, ಈಗ ಸಿನಿಮಾ ರಿಲೀಸ್​ ದಿನಾಂಕ ಮೂಂದೂಡುವ ಸೂಚನೆ ಸಿಕ್ಕಿದೆ. ಖುದ್ದು ದುನಿಯಾ ವಿಜಯ್ ಈ ವಿಚಾರ ಹೇಳಿಕೊಂಡಿದ್ದಾರೆ. ಕೊರೊನಾ ವೈರಸ್​ ಹೆಚ್ಚುತ್ತಿದೆ. ಹೀಗಾಗಿ ಇದನ್ನು ನಿಯಂತ್ರಿಸಲು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಿಗೆ ಸಿನಿಮಾ ಹಾಲ್​ಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡುವ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಏಪ್ರಿಲ್​ 7ರಿಂದ ನಿಯಮ ಜಾರಿಗೆ ಬರಲಿದೆ. ಇದರಿಂದ ಮುಂದೆ ತೆರೆಗೆ ಬರಲಿರುವ ಸಿನಿಮಾಗಳ ರಿಲೀಸ್​ ದಿನಾಂಕ ಮುಂದೂಡುವ ಸೂಚನೆ ಸಿಕ್ಕಿದೆ. ಇದಕ್ಕೆ ದುನಿಯಾ ವಿಜಯ್ ಸಿನಿಮಾ​ ಕೂಡ ಹೊರತಾಗಿಲ್ಲ.

ಹುಬ್ಬಳ್ಳಿಯಲ್ಲಿ ಸಿನಿಮಾ ಪ್ರಚಾರಕ್ಕೆಂದು ತೆರಳಿದ್ದ ವೇಳೆ ಮಾತನಾಡಿರುವ ದುನಿಯಾ ವಿಜಯ್​, ನಾವು ಸಲಗ ಚಿತ್ರವನ್ನು ಈ ಭಾಗದಲ್ಲೇ ಶೂಟ್​ ಮಾಡಿದ್ದೇವೆ. ಹೀಗಾಗಿ ಇಂದು ಪ್ರಮೋಷನ್​ಗಾಗಿ  ಇಲ್ಲಿಗೆ ಬಂದಿದ್ದೇವೆ. ಈಗಾಗಲೇ ಚಿತ್ರರಂಗ ಸಂಕಷ್ಟದಲ್ಲಿದೆ. ಸರ್ಕಾರ ನಮಗೆ ಅವಕಾಶ ನೀಡಬೇಕು. ಸಾಕಷ್ಟು ಚಿತ್ರ ರೀಲೀಸ್​ಗೆ ಕಾಯುತ್ತಿವೆ. ಹೀಗಾಗಿ ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರಬೇಕು ಎಂದು ಆಗ್ರಹಿಸಿದರು.

ಸಲಗ ರಿಲೀಸ್​ ಬಗ್ಗೆ ಮಾತನಾಡಿದ ಅವರು, ಚಿತ್ರಮಂದಿರ ಹೌಸ್​ ಫುಲ್​ ಮಾಡೋಕೆ ಅವಕಾಶ ಸಿಕ್ಕರೆ ಮಾತ್ರ ನಾವು ಸಿನಿಮಾ ರಿಲೀಸ್ ಮಾಡುತ್ತೇವೆ. ಸರ್ಕಾರದ ನಿರ್ಧಾರದಿಂದ ಯುವರತ್ನ ಚಿತ್ರಕ್ಕೆ ಸ್ವಲ್ಪ ಹಿನ್ನಡೆ ಆಗಿದೆ. ಸದ್ಯ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ ಎಂಬುದು ಖುಷಿಯ ವಿಚಾರ ಎಂದರು.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರೋ ಈ ಸಿನಿಮಾದಲ್ಲಿ ಡಾಲಿ ಧನಂಜಯ, ಸಂಜನಾ ಆನಂದ್ ಪ್ರಮುಖ‌ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಹಾಡುಗಳಿಂದ ಗಮನ ಸೆಳೆದಿರುವ ಸಲಗ ಚಿತ್ರ ಪ್ರೇಕ್ಷಕರಲ್ಲಿ ಸಿಕ್ಕಾಪಟ್ಟೆ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಫೇಮಸ್​ ಆಯ್ತು ಸಲಗ ಟ್ಯಾಟೂ..! ಅಭಿಮಾನಿಯ ಅಭಿಮಾನ ನೋಡಿ ಭಾವುಕರಾದ ನಟ ದುನಿಯಾ ವಿಜಯ್

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ