AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನದ ಗಳಿಕೆಯಲ್ಲಿ ‘ಭೀಮ’ನ ಅಬ್ಬರ; ಸ್ಯಾಂಡಲ್​ವುಡ್​ಗೆ ಹೊಸ ಕಳೆ

Bheema Movie Collection: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಆಗಸ್ಟ್ 09ರಂದು ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಮಾದಕ ವಸ್ತುವಿನ ಪ್ರಸಾರ ಹಾಗೂ ಅದರ ಪರಿಣಾಮ ಯುವಕರ ಮೇಲೆ ಹೇಗೆ ಆಗುತ್ತಿದೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದೆ.

ಮೊದಲ ದಿನದ ಗಳಿಕೆಯಲ್ಲಿ ‘ಭೀಮ’ನ ಅಬ್ಬರ; ಸ್ಯಾಂಡಲ್​ವುಡ್​ಗೆ ಹೊಸ ಕಳೆ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Aug 10, 2024 | 8:28 AM

Share

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿದ್ದ ‘ಭೀಮ’ ಸಿನಿಮಾ ಮೊದಲ ದಿನ ಯಶಸ್ವಿ ಪ್ರದರ್ಶನ ಕಂಡಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಪ್ರಯತ್ನ ಈ ಸಿನಿಮಾದಿಂದ ಆಗಿದೆ. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡಿದೆ. ವೀಕೆಂಡ್​ನಲ್ಲಿ ಗಳಿಕೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಇನ್ನು, ಮುಂದಿನ ವಾರ ಆಗಸ್ಟ್ 15 ಕೂಡ ಇದೆ. ಸರ್ಕಾರಿ ರಜೆಯ ಕಾರಣಕ್ಕೆ ಜನರು ಥಿಯೇಟರ್​ಗೆ ಕಾಲಿಡುತ್ತಾರೆ.

ದುನಿಯಾ ವಿಜಯ್ ಅವರ ನಟನೆಯ ‘ಭೀಮ’ ಮೊದಲ ದಿನ 3.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು sacnilk ವರದಿ ಮಾಡಿದೆ. ಎಲ್ಲಾ ಸಿನಿಮಾಗಳ ಕಲೆಕ್ಷನ್ ಬಗ್ಗೆ ಈ ವೆಬ್​ಸೈಟ್ ಮಾಹಿತಿ ನೀಡುತ್ತಾ ಬಂದಿದೆ. ತಂಡದ ಕಡೆಯಿಂದ ಕಲೆಕ್ಷನ್ ಬಗ್ಗೆ ಮಾಹಿತಿ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ದುನಿಯಾ ವಿಜಯ್ ಅವರು ‘ಸಲಗ’ ಸಿನಿಮಾ ಮಾಡಿ ಯಶಸ್ಸು ಕಂಡರು. ಇದಾದ ಬಳಿಕ ಅವರು ನಿರ್ದೇಶನ ಮಾಡಿದ ಚಿತ್ರ ಎಂದರೆ ಅದು ‘ಭೀಮ’. ಬೆಂಗಳೂರಿನಲ್ಲಿ ನಡೆಯುತ್ತಿರುವ ಕೆಲವು ಮಾಫಿಯಾಗಳ ಬಗ್ಗೆ ತೋರಿಸಲಾಗಿದೆ. ಯುವ ಜನಾಂಗ ಗಾಂಜಾ ಚಟಕ್ಕೆ ಬಿದ್ದು ಯಾವ ರೀತಿಯಲ್ಲಿ ಹಾಳಾಗುತ್ತಿದೆ ಎಂದು ತೋರಿಸುವ ಪ್ರಯತ್ನವೂ ನಡೆದಿದೆ. ಈ ಸಿನಿಮಾನ ಒಂದು ವರ್ಗ ಇಷ್ಟಪಟ್ಟಿದೆ. ಸಿನಿಮಾದಲ್ಲಿ ಬಳಕೆ ಆದ ಭಾಷೆ ಹಾಗೂ ಅತಿಯಾದ ರೌಡಿಸಂ ಕಾರಣಕ್ಕೆ ಸಿನಿಮಾ ಕೆಲವರಿಗೆ ಇಷ್ಟ ಆಗಿಲ್ಲ.

ಇದನ್ನೂ ಓದಿ: ‘ಭೀಮ’ ಸಿನಿಮಾನಲ್ಲಿ ‘ಸಲಗ 2’ ಸುಳಿವು ಕೊಟ್ಟ ದುನಿಯಾ ವಿಜಯ್

ಮೊದಲ ದಿನ ಚಿತ್ರ 3.5 ಕೋಟಿ ರೂಪಾಯಿ ಎಂದರೆ ಅದು ದೊಡ್ಡ ಮೊತ್ತವೇ. ಈ ಚಿತ್ರಕ್ಕೆ ಯಾವುದೇ ಫ್ಯಾನ್​ ಶೋ ಇರಲಿಲ್ಲ. ಆದಾಗ್ಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಇತ್ತೀಚೆಗೆ ರಿಲೀಸ್ ಆದ ಹಿಂದಿ ಸಿನಿಮಾಗಳು ಮೊದಲ ದಿನ ಇಷ್ಟು ಗಳಿಕೆ ಮಾಡಲು ವಿಫಲವಾಗಿವೆ. ‘ಭೀಮ’ ಕಾರಣದಿಂದ ಚಿತ್ರಮಂದಿರಗಳಿಗೆ ಹೊಸ ಹುರುಪು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ