AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನದ ಗಳಿಕೆಯಲ್ಲಿ ‘ಭೀಮ’ನ ಅಬ್ಬರ; ಸ್ಯಾಂಡಲ್​ವುಡ್​ಗೆ ಹೊಸ ಕಳೆ

Bheema Movie Collection: ದುನಿಯಾ ವಿಜಯ್ ನಟನೆಯ ‘ಭೀಮ’ ಸಿನಿಮಾ ಆಗಸ್ಟ್ 09ರಂದು ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಮಾದಕ ವಸ್ತುವಿನ ಪ್ರಸಾರ ಹಾಗೂ ಅದರ ಪರಿಣಾಮ ಯುವಕರ ಮೇಲೆ ಹೇಗೆ ಆಗುತ್ತಿದೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದೆ.

ಮೊದಲ ದಿನದ ಗಳಿಕೆಯಲ್ಲಿ ‘ಭೀಮ’ನ ಅಬ್ಬರ; ಸ್ಯಾಂಡಲ್​ವುಡ್​ಗೆ ಹೊಸ ಕಳೆ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Aug 10, 2024 | 8:28 AM

Share

ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿದ್ದ ‘ಭೀಮ’ ಸಿನಿಮಾ ಮೊದಲ ದಿನ ಯಶಸ್ವಿ ಪ್ರದರ್ಶನ ಕಂಡಿದೆ. ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಪ್ರಯತ್ನ ಈ ಸಿನಿಮಾದಿಂದ ಆಗಿದೆ. ಈ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡಿದೆ. ವೀಕೆಂಡ್​ನಲ್ಲಿ ಗಳಿಕೆ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಇನ್ನು, ಮುಂದಿನ ವಾರ ಆಗಸ್ಟ್ 15 ಕೂಡ ಇದೆ. ಸರ್ಕಾರಿ ರಜೆಯ ಕಾರಣಕ್ಕೆ ಜನರು ಥಿಯೇಟರ್​ಗೆ ಕಾಲಿಡುತ್ತಾರೆ.

ದುನಿಯಾ ವಿಜಯ್ ಅವರ ನಟನೆಯ ‘ಭೀಮ’ ಮೊದಲ ದಿನ 3.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು sacnilk ವರದಿ ಮಾಡಿದೆ. ಎಲ್ಲಾ ಸಿನಿಮಾಗಳ ಕಲೆಕ್ಷನ್ ಬಗ್ಗೆ ಈ ವೆಬ್​ಸೈಟ್ ಮಾಹಿತಿ ನೀಡುತ್ತಾ ಬಂದಿದೆ. ತಂಡದ ಕಡೆಯಿಂದ ಕಲೆಕ್ಷನ್ ಬಗ್ಗೆ ಮಾಹಿತಿ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ದುನಿಯಾ ವಿಜಯ್ ಅವರು ‘ಸಲಗ’ ಸಿನಿಮಾ ಮಾಡಿ ಯಶಸ್ಸು ಕಂಡರು. ಇದಾದ ಬಳಿಕ ಅವರು ನಿರ್ದೇಶನ ಮಾಡಿದ ಚಿತ್ರ ಎಂದರೆ ಅದು ‘ಭೀಮ’. ಬೆಂಗಳೂರಿನಲ್ಲಿ ನಡೆಯುತ್ತಿರುವ ಕೆಲವು ಮಾಫಿಯಾಗಳ ಬಗ್ಗೆ ತೋರಿಸಲಾಗಿದೆ. ಯುವ ಜನಾಂಗ ಗಾಂಜಾ ಚಟಕ್ಕೆ ಬಿದ್ದು ಯಾವ ರೀತಿಯಲ್ಲಿ ಹಾಳಾಗುತ್ತಿದೆ ಎಂದು ತೋರಿಸುವ ಪ್ರಯತ್ನವೂ ನಡೆದಿದೆ. ಈ ಸಿನಿಮಾನ ಒಂದು ವರ್ಗ ಇಷ್ಟಪಟ್ಟಿದೆ. ಸಿನಿಮಾದಲ್ಲಿ ಬಳಕೆ ಆದ ಭಾಷೆ ಹಾಗೂ ಅತಿಯಾದ ರೌಡಿಸಂ ಕಾರಣಕ್ಕೆ ಸಿನಿಮಾ ಕೆಲವರಿಗೆ ಇಷ್ಟ ಆಗಿಲ್ಲ.

ಇದನ್ನೂ ಓದಿ: ‘ಭೀಮ’ ಸಿನಿಮಾನಲ್ಲಿ ‘ಸಲಗ 2’ ಸುಳಿವು ಕೊಟ್ಟ ದುನಿಯಾ ವಿಜಯ್

ಮೊದಲ ದಿನ ಚಿತ್ರ 3.5 ಕೋಟಿ ರೂಪಾಯಿ ಎಂದರೆ ಅದು ದೊಡ್ಡ ಮೊತ್ತವೇ. ಈ ಚಿತ್ರಕ್ಕೆ ಯಾವುದೇ ಫ್ಯಾನ್​ ಶೋ ಇರಲಿಲ್ಲ. ಆದಾಗ್ಯೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದೆ. ಇತ್ತೀಚೆಗೆ ರಿಲೀಸ್ ಆದ ಹಿಂದಿ ಸಿನಿಮಾಗಳು ಮೊದಲ ದಿನ ಇಷ್ಟು ಗಳಿಕೆ ಮಾಡಲು ವಿಫಲವಾಗಿವೆ. ‘ಭೀಮ’ ಕಾರಣದಿಂದ ಚಿತ್ರಮಂದಿರಗಳಿಗೆ ಹೊಸ ಹುರುಪು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
SIR ವೇಳೆ ಕುಸಿದುಬಿದ್ದ BLO, ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ಈ ಬಾರಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!