AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ಭೀಮ’ ಟ್ರೈಲರ್, ಇದು ಬೆಂಗಳೂರಿನ ಗಲ್ಲಿಗಳ ಕತೆ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’ ಟ್ರೈಲರ್ ಇಂದು (ಆಗಸ್ಟ್ 3) ಬಿಡುಗಡೆ ಆಗಿದೆ. ಸಿನಿಮಾವು ಆಗಸ್ಟ್ 9ರಂದು ಬಿಡುಗಡೆ ಆಗಲಿದೆ. ‘ಭೀಮ’ ಸಿನಿಮಾ ಬೆಂಗಳೂರಿನ ಕರಾಳ ಗಲ್ಲಿಗಳ ಕತೆಯಂತೆ ತೋರುತ್ತಿದೆ.

ಬಿಡುಗಡೆ ಆಯ್ತು ‘ಭೀಮ’ ಟ್ರೈಲರ್, ಇದು ಬೆಂಗಳೂರಿನ ಗಲ್ಲಿಗಳ ಕತೆ
ಭೀಮ ಸಿನಿಮಾ
ಮಂಜುನಾಥ ಸಿ.
|

Updated on: Aug 03, 2024 | 9:38 PM

Share

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 03) ಬಿಡುಗಡೆ ಆಗಿದೆ. ‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದ್ದು, ಸಾಕಷ್ಟು ಸಮಯ ತೆಗೆದುಕೊಂಡು ಈ ಸಿನಿಮಾವನ್ನು ದುನಿಯಾ ವಿಜಯ್ ಕಟ್ಟಿದ್ದಾರೆ. ಈ ಹಿಂದೆ ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದು, ಅದೇ ಭರವಸೆಯಲ್ಲಿ ಸಿನಿಮಾದ ಟ್ರೈಲರ್ ಅನ್ನು ಇಂದು ಬಿಡುಗಡೆ ಮಾಡಿದ್ದಾರೆ. ‘ಸಲಗ’ದ ರೀತಿಯಲ್ಲಿಯೇ ಇದು ಸಹ ರೌಡಿಗಳನ್ನು ಹೆಚ್ಚು ಹತ್ತಿರದಿಂದ ನೋಡುವ ಕತೆಯಂತೆ ತೋರುತ್ತಿದೆ.

‘ಸಲಗ’ ಸಿನಿಮಾದಲ್ಲಿ ರೌಡಿಗಳ ಬದುಕನ್ನು ಹತ್ತಿರದಿಂದ ತೋರಿಸುವ ಪ್ರಯತ್ನವನ್ನು ದುನಿಯಾ ವಿಜಯ್ ಮಾಡಿದ್ದರು. ಬೆಂಗಳೂರಿನ ಗಲ್ಲಿಗಳಲ್ಲಿ ನಡೆಯುವ ರೌಡಿಸಂನ ಕತೆಗಳನ್ನು ‘ಸಲಗ’ ಸಿನಿಮಾದಲ್ಲಿ ಹೇಳುವುದರ ಜೊತೆಗೆ ಒಂದು ರಿವೇಂಜ್ ಡ್ರಾಮಾ ಅನ್ನೂ ಸಹ ಸೃಷ್ಟಿಸಿದ್ದರು. ಈಗ ಬಿಡುಗಡೆ ಆಗಿರುವ ‘ಭೀಮ’ ಸಿನಿಮಾದ ಟ್ರೈಲರ್​ನಲ್ಲಿಯೂ ಸಹ ಅಲ್ಲಲ್ಲಿ ‘ಸಲಗ’ದ ಛಾಯೆ ಕಾಣುತ್ತಿದೆ. ಇದೂ ಸಹ ಬೆಂಗಳೂರಿನ ಕರಾಳ ಗಲ್ಲಿಗಳ ಕತೆಯೇ ಎಂಬುದನ್ನಂತೂ ಟ್ರೈಲರ್ ಸಾರಿ ಹೇಳುತ್ತಿದೆ. ಜೊತೆಗೆ ಸ್ವಲ್ಪ ನಾಯಕನ ವೈಭವೀಕರಣವೂ ಇದ್ದಂತೆ ತೋರುತ್ತಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

ರೌಡಿಗಳ ಕೊಳಕು ವ್ಯಕ್ತಿತ್ವ, ಹಸಿ ಸಂಭಾಷಣೆ, ರಕ್ತದ ಕಮಟು, ಪೊಲೀಸರ ಒರಟುತನ, ರೌಡಿಗಳ ಕೊಳಕುತನ ಎಲ್ಲದರ ಝಲಕ್ ಅನ್ನು ಟ್ರೈಲರ್​ ಅಲ್ಲ ತೋರಿಸಲಾಗಿದೆ. ಜೊತೆಗೆ ದುನಿಯಾ ವಿಜಯ್ ರ ಕೆಲವು ಹೀರೋಯಿಕ್ ಮೂಮೆಂಟ್​ಗಳನ್ನು ಸಹ ಸೇರಿಸಲಾಗಿದೆ. ‘ಸಲಗ’ ಸಿನಿಮಾದಲ್ಲಿ ಡಾಲಿ ಧನಂಜಯ್ ಅವರನ್ನು ಪವರ್​ಫುಲ್ ಪೊಲೀಸ್ ಆಗಿ ತೋರಿಸಲಾಗಿತ್ತು, ಆದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಹೊರತಾಗಿ ಇನ್ನೊಂದು ಪವರ್​ಫುಲ್ ಪಾತ್ರ ಇದ್ದಂತಿಲ್ಲ.

ಇಂದು (ಆಗಸ್ಟ್ 03) ನಗರದಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ದುನಿಯಾ ವಿಜಯ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭಾಗಿಯಾಗಿದ್ದರು ಜೊತೆಗೆ ನಿರ್ದೇಶಕ ತರುಣ್ ಸುಧೀರ್ ಇನ್ನೂ ಕೆಲವರು ಭಾಗಿಯಾಗಿ ದುನಿಯಾ ವಿಜಯ್​ಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಭೀಮ’ ಸಿನಿಮಾ ಆಗಸ್ಟ್ 9ರಂದು ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು