AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆ ಆಯ್ತು ‘ಭೀಮ’ ಟ್ರೈಲರ್, ಇದು ಬೆಂಗಳೂರಿನ ಗಲ್ಲಿಗಳ ಕತೆ

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ಎರಡನೇ ಸಿನಿಮಾ ‘ಭೀಮ’ ಟ್ರೈಲರ್ ಇಂದು (ಆಗಸ್ಟ್ 3) ಬಿಡುಗಡೆ ಆಗಿದೆ. ಸಿನಿಮಾವು ಆಗಸ್ಟ್ 9ರಂದು ಬಿಡುಗಡೆ ಆಗಲಿದೆ. ‘ಭೀಮ’ ಸಿನಿಮಾ ಬೆಂಗಳೂರಿನ ಕರಾಳ ಗಲ್ಲಿಗಳ ಕತೆಯಂತೆ ತೋರುತ್ತಿದೆ.

ಬಿಡುಗಡೆ ಆಯ್ತು ‘ಭೀಮ’ ಟ್ರೈಲರ್, ಇದು ಬೆಂಗಳೂರಿನ ಗಲ್ಲಿಗಳ ಕತೆ
ಭೀಮ ಸಿನಿಮಾ
ಮಂಜುನಾಥ ಸಿ.
|

Updated on: Aug 03, 2024 | 9:38 PM

Share

ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 03) ಬಿಡುಗಡೆ ಆಗಿದೆ. ‘ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದ್ದು, ಸಾಕಷ್ಟು ಸಮಯ ತೆಗೆದುಕೊಂಡು ಈ ಸಿನಿಮಾವನ್ನು ದುನಿಯಾ ವಿಜಯ್ ಕಟ್ಟಿದ್ದಾರೆ. ಈ ಹಿಂದೆ ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದು, ಅದೇ ಭರವಸೆಯಲ್ಲಿ ಸಿನಿಮಾದ ಟ್ರೈಲರ್ ಅನ್ನು ಇಂದು ಬಿಡುಗಡೆ ಮಾಡಿದ್ದಾರೆ. ‘ಸಲಗ’ದ ರೀತಿಯಲ್ಲಿಯೇ ಇದು ಸಹ ರೌಡಿಗಳನ್ನು ಹೆಚ್ಚು ಹತ್ತಿರದಿಂದ ನೋಡುವ ಕತೆಯಂತೆ ತೋರುತ್ತಿದೆ.

‘ಸಲಗ’ ಸಿನಿಮಾದಲ್ಲಿ ರೌಡಿಗಳ ಬದುಕನ್ನು ಹತ್ತಿರದಿಂದ ತೋರಿಸುವ ಪ್ರಯತ್ನವನ್ನು ದುನಿಯಾ ವಿಜಯ್ ಮಾಡಿದ್ದರು. ಬೆಂಗಳೂರಿನ ಗಲ್ಲಿಗಳಲ್ಲಿ ನಡೆಯುವ ರೌಡಿಸಂನ ಕತೆಗಳನ್ನು ‘ಸಲಗ’ ಸಿನಿಮಾದಲ್ಲಿ ಹೇಳುವುದರ ಜೊತೆಗೆ ಒಂದು ರಿವೇಂಜ್ ಡ್ರಾಮಾ ಅನ್ನೂ ಸಹ ಸೃಷ್ಟಿಸಿದ್ದರು. ಈಗ ಬಿಡುಗಡೆ ಆಗಿರುವ ‘ಭೀಮ’ ಸಿನಿಮಾದ ಟ್ರೈಲರ್​ನಲ್ಲಿಯೂ ಸಹ ಅಲ್ಲಲ್ಲಿ ‘ಸಲಗ’ದ ಛಾಯೆ ಕಾಣುತ್ತಿದೆ. ಇದೂ ಸಹ ಬೆಂಗಳೂರಿನ ಕರಾಳ ಗಲ್ಲಿಗಳ ಕತೆಯೇ ಎಂಬುದನ್ನಂತೂ ಟ್ರೈಲರ್ ಸಾರಿ ಹೇಳುತ್ತಿದೆ. ಜೊತೆಗೆ ಸ್ವಲ್ಪ ನಾಯಕನ ವೈಭವೀಕರಣವೂ ಇದ್ದಂತೆ ತೋರುತ್ತಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರ ಭೇಟಿಯಾದ ದುನಿಯಾ ವಿಜಿ, ‘ಭೀಮ’ ವೀಕ್ಷಿಸಲು ಆಹ್ವಾನ

ರೌಡಿಗಳ ಕೊಳಕು ವ್ಯಕ್ತಿತ್ವ, ಹಸಿ ಸಂಭಾಷಣೆ, ರಕ್ತದ ಕಮಟು, ಪೊಲೀಸರ ಒರಟುತನ, ರೌಡಿಗಳ ಕೊಳಕುತನ ಎಲ್ಲದರ ಝಲಕ್ ಅನ್ನು ಟ್ರೈಲರ್​ ಅಲ್ಲ ತೋರಿಸಲಾಗಿದೆ. ಜೊತೆಗೆ ದುನಿಯಾ ವಿಜಯ್ ರ ಕೆಲವು ಹೀರೋಯಿಕ್ ಮೂಮೆಂಟ್​ಗಳನ್ನು ಸಹ ಸೇರಿಸಲಾಗಿದೆ. ‘ಸಲಗ’ ಸಿನಿಮಾದಲ್ಲಿ ಡಾಲಿ ಧನಂಜಯ್ ಅವರನ್ನು ಪವರ್​ಫುಲ್ ಪೊಲೀಸ್ ಆಗಿ ತೋರಿಸಲಾಗಿತ್ತು, ಆದರೆ ಈ ಸಿನಿಮಾದಲ್ಲಿ ದುನಿಯಾ ವಿಜಯ್ ಹೊರತಾಗಿ ಇನ್ನೊಂದು ಪವರ್​ಫುಲ್ ಪಾತ್ರ ಇದ್ದಂತಿಲ್ಲ.

ಇಂದು (ಆಗಸ್ಟ್ 03) ನಗರದಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ದುನಿಯಾ ವಿಜಯ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಭಾಗಿಯಾಗಿದ್ದರು ಜೊತೆಗೆ ನಿರ್ದೇಶಕ ತರುಣ್ ಸುಧೀರ್ ಇನ್ನೂ ಕೆಲವರು ಭಾಗಿಯಾಗಿ ದುನಿಯಾ ವಿಜಯ್​ಗೆ ಹಾಗೂ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಭೀಮ’ ಸಿನಿಮಾ ಆಗಸ್ಟ್ 9ರಂದು ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ