AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಭೀಮ’ ರಿಲೀಸ್ ದಿನಾಂಕ ಘೋಷಿಸಿದ ದುನಿಯಾ ವಿಜಯ್; ಸ್ಟಾರ್ ಹೀರೋ ಸಿನಿಮಾ ಜೊತೆ ಕ್ಲ್ಯಾಶ್?

ವಿಜಯ್ ಅವರು ‘ಸಲಗ’ ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದರು. ಇದು ಅವರ ನಿರ್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನಿರ್ದೇಶನ ಮಾಡಿದ್ದಾರೆ ವಿಜಯ್. ಈ ಚಿತ್ರವನ್ನು ಆಗಸ್ಟ್ 9ರಂದು ರಿಲೀಸ್ ಮಾಡೋ ಘೋಷಣೆ ಮಾಡಿದ್ದಾರೆ.

‘ಭೀಮ’ ರಿಲೀಸ್ ದಿನಾಂಕ ಘೋಷಿಸಿದ ದುನಿಯಾ ವಿಜಯ್; ಸ್ಟಾರ್ ಹೀರೋ ಸಿನಿಮಾ ಜೊತೆ ಕ್ಲ್ಯಾಶ್?
ರಾಜೇಶ್ ದುಗ್ಗುಮನೆ
|

Updated on: Jun 21, 2024 | 10:52 AM

Share

‘ದುನಿಯಾ’ ವಿಜಯ್ (Duniya Vijay) ಅವರು ‘ಭೀಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಜೊತೆಗೆ ಇದರ ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ. ಈ ಚಿತ್ರ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿತ್ತು. ಇದಕ್ಕೆ ದುನಿಯಾ ವಿಜಯ್ ಅವರೇ ಉತ್ತರ ಕೊಟ್ಟಿದ್ದಾರೆ. ಈ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮಧ್ಯೆ ‘ಭೀಮ’ ಸಿನಿಮಾ ಕನ್ನಡದ ಸ್ಟಾರ್ ಹೀರೋ ಸಿನಿಮಾ ಜೊತೆ ಕ್ಲ್ಯಾಶ್ ಆಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ವಿಜಯ್ ಅವರು ‘ಸಲಗ’ ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದರು. ಇದು ಅವರ ನಿರ್ದೇಶನದ ಮೊದಲ ಸಿನಿಮಾ. ಮೊದಲ ಚಿತ್ರದಲ್ಲೇ ಅವರಿಗೆ ಗೆಲುವಿನ ರುಚಿ ಸಿಕ್ಕಿತು. ಈ ಚಿತ್ರ ರೌಡಿಸಂ ಕಥೆಯನ್ನು ಹೊಂದಿತ್ತು. ಈಗ ಅದೇ ರೀತಿಯ ಥೀಮ್ ಇಟ್ಟುಕೊಂಡು ‘ಭೀಮ’ ಸಿನಿಮಾ ನಿರ್ದೇಶನ ಮಾಡಿದ್ದಾರೆ ವಿಜಯ್. ಈ ಚಿತ್ರವನ್ನು ಆಗಸ್ಟ್ 9ರಂದು ರಿಲೀಸ್ ಮಾಡೋ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ನಟ ದುನಿಯಾ ವಿಜಯ್​ಗೆ ಸಿಕ್ಕಿಲ್ಲ ವಿಚ್ಛೇದನ; ಅರ್ಜಿ ವಜಾಗೊಳಿಸಿದ ಫ್ಯಾಮಿಲಿ ಕೋರ್ಟ್

‘ಭೀಮ’ ಸಿನಿಮಾದಲ್ಲಿ ಅಶ್ವಿನಿ ಅಂಬರೀಷ್, ಕಾಕ್ರೋಚ್ ಸುಧಿ, ರಂಗಾಯಣ ರಘು, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶಿವ ಕುಮಾರ್, ಛಾಯಾಗ್ರಹಣ, ಮಾಸ್ತಿ ಸಂಭಾಷಣೆ, ಧನು ಕುಮಾರ್ ಕೋರಿಯೋಗ್ರಫಿ, ದೀಪು ಕುಮಾರ್ ಸಂಕಲನ ಚಿತ್ರಕ್ಕೆ ಇದೆ.

ಕ್ಲ್ಯಾಶ್?

ಈ ಮೊದಲು ‘ಸಲಗ’ ಹಾಗೂ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರ ರಿಲೀಸ್ ಆಗಿತ್ತು. ಇತ್ತೀಚೆಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುದೀಪ್ ಅವರು, ‘ಮ್ಯಾಕ್ಸ್’ ಚಿತ್ರ ಆಗಸ್ಟ್​ನಲ್ಲಿ ರಿಲೀಸ್ ಆಗಲಿದೆ ಎಂದಿದ್ದರು. ಹೀಗಾಗಿ, ಮತ್ತೊಮ್ಮೆ ದುನಿಯಾ ವಿಜಯ್ ಹಾಗೂ ಸುದೀಪ್ ಸಿನಿಮಾ ಮುಖಾಮುಖಿ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ